ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌ ಅಕ್ರಮ: ದೇಶದ ವಿವಿಧೆಡೆ ಕಾಂಗ್ರೆಸ್‌ ಪ್ರತಿಭಟನೆ

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹ - ‘ಸುಪ್ರೀಂ’ ಮೇಲ್ವಿಚಾರಣೆಯಲ್ಲಿ ತನಿಖೆಗೆ ಒತ್ತಾಯ
Published : 21 ಜೂನ್ 2024, 14:37 IST
Last Updated : 21 ಜೂನ್ 2024, 14:37 IST
ಫಾಲೋ ಮಾಡಿ
Comments
ನೀಟ್‌ ಪರೀಕ್ಷಾ ಅಕ್ರಮ ವಿರೋಧಿಸಿ ಮುಂಬೈನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು – ಪಿಟಿಐ ಚಿತ್ರ
ನೀಟ್‌ ಪರೀಕ್ಷಾ ಅಕ್ರಮ ವಿರೋಧಿಸಿ ಮುಂಬೈನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು – ಪಿಟಿಐ ಚಿತ್ರ
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದಲ್ಲಿ ರಾಜಕೀಯ ಮಾಡದೇ ಅಕ್ರಮ ಎಸಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಅಮಾಯಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು
– ಮಾಯಾವತಿ ಅಧ್ಯಕ್ಷೆ ಬಿಎಸ್‌ಪಿ
ಬಿಜೆಪಿ ಭ್ರಷ್ಟಾಚಾರ ದೇಶವನ್ನು ದುರ್ಬಲಗೊಳಿಸಿದೆ: ಪ್ರಿಯಾಂಕಾ
‘ಬಿಜೆಪಿ ಆಡಳಿತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವು ದೇಶದ ಕೋಟ್ಯಂತರ ಯುವ ಜನರ ಭವಿಷ್ಯವನ್ನು ಹಾಳು ಮಾಡಿದೆ. ಕಳೆದ ಐದು ವರ್ಷಗಳಲ್ಲಿ ದೇಶದ 43 ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.  ನೀಟ್‌–ಯುಜಿ ಮತ್ತು ಯುಜಿಸಿ–ನೆಟ್‌ ಪರೀಕ್ಷಾ ಅಕ್ರಮಗಳ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು ‘ಭಾರತವು ವಿಶ್ವದಲ್ಲಿಯೇ ಹೆಚ್ಚು ಯುವ ಶಕ್ತಿಯನ್ನು ಹೊಂದಿರುವ ದೇಶ. ನಮ್ಮ ಯುವ ಜನರನ್ನು ಸಮರ್ಥರನ್ನಾಗಿ ಮಾಡುವ ಬದಲಿಗೆ ಬಿಜೆಪಿ ಸರ್ಕಾರವು ಅವರನ್ನು ದುರ್ಬಲಗೊಳಿಸುತ್ತಿದೆ’ ಎಂದು ‘ಎಕ್ಸ್‌’ನಲ್ಲಿ ಆರೊಪಿಸಿದ್ದಾರೆ.  ‘ಕೋಟ್ಯಂತರ ಪ್ರತಿಭಾವಂತ ವಿದ್ಯಾರ್ಥಿಗಳು ಹಗಲಿರುಳು ಕಷ್ಟಪಟ್ಟು ಓದುತ್ತಾರೆ. ನೇಮಕಾತಿಗಾಗಿ ವರ್ಷಗಟ್ಟಲೆ ಕಾಯುತ್ತಾರೆ. ಇದಕ್ಕಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಾರೆ. ಪೋಷಕರೂ ಅವರಿಗಾಗಿ ಎಲ್ಲವನ್ನೂ ತ್ಯಾಗ ಮಾಡಿ ಅವರ ಅಧ್ಯಯನದ ಹೊರೆಯನ್ನು ಹೊರುತ್ತಾರೆ. ಆದರೆ ಪರೀಕ್ಷಾ ಅಕ್ರಮ ಭ್ರಷ್ಟಾಚಾರ ಅವರ ಎಲ್ಲ ಶ್ರಮವನ್ನು ವ್ಯರ್ಥ ಮಾಡುತ್ತಿದೆ. ಬಿಜೆಪಿಯ ಭ್ರಷ್ಟಾಚಾರವು ಇಡೀ ದೇಶವನ್ನೇ ದುರ್ಬಲಗೊಳಿಸುತ್ತಿದೆ’ ಎಂದು ಅವರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT