<p><strong>ನವದೆಹಲಿ</strong>: 2020ರ ದೆಹಲಿ ಗಲಭೆಯಲ್ಲಿ ಹಿಂಸಾಚಾರ ನಡೆಸಿದ ಹಾಗೂ ಬೆಂಕಿ ಹಚ್ಚಿದ ಆರೋಪ ಹೊತ್ತಿದ್ದ ಫೈಜಾನ್ ಅವರನ್ನು ಇಲ್ಲಿನ ನ್ಯಾಯಾಲಯವು ಖುಲಾಸೆಗೊಳಿಸಿದೆ.</p>.<p>ಗಲಭೆಯ ವೇಳೆ ಬ್ರಿಜ್ಪುರಿ ರಸ್ತೆಯಲ್ಲಿರುವ ಅರುಣ್ ಮಾಡರ್ನ್ ಪಬ್ಲಿಕ್ ಸೀನಿಯರ್ ಸೆಕೆಂಡರಿ ಶಾಲೆಗೆ ಬೆಂಕಿ ಹಚ್ಚಿದ ಆರೋಪವನ್ನು ಫೈಜಾನ್ ಅಲಿಯಾಸ್ ಅರ್ಯಾನ್ ವಿರುದ್ಧ ಹೊರಿಸಲಾಗಿತ್ತು.</p>.<p>ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪರ್ವೀನ್ ಸಿಂಗ್ ಅವರು ಅರ್ಯಾನ್ ಅವರನ್ನು ದೋಷಮುಕ್ತಗೊಳಿಸಿ ಜ.28ರಂದು ಆದೇಶ ಹೊರಡಿಸಿದ್ದಾರೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ಟೆಬಲ್ ಒಬ್ಬರ ಸಾಕ್ಷ್ಯವನ್ನೇ ಅವಲಂಬಿಸಿರುವುದು ಒಳ್ಳೆಯದಲ್ಲ. ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.</p>.<p>ಗಲಭೆ ನಂತರ ತಲೆಮರೆಸಿಕೊಂಡಿದ್ದ ಫೈಜಾನ್ ಅವರನ್ನು ಪೊಲೀಸರು 2022ರಲ್ಲಿ ಘೋಷಿತ ಅಪರಾಧಿ ಎಂದಿದ್ದರು. 2025ರ ಆಗಸ್ಟ್ನಲ್ಲಿ ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲೇ ಬಂಧಿಸಿದ್ದ ಇಬ್ಬರು ಆರೋಪಿಗಳನ್ನು 2025ರ ಫೆಬ್ರುವರಿಯಲ್ಲಿ ಖುಲಾಸೆಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2020ರ ದೆಹಲಿ ಗಲಭೆಯಲ್ಲಿ ಹಿಂಸಾಚಾರ ನಡೆಸಿದ ಹಾಗೂ ಬೆಂಕಿ ಹಚ್ಚಿದ ಆರೋಪ ಹೊತ್ತಿದ್ದ ಫೈಜಾನ್ ಅವರನ್ನು ಇಲ್ಲಿನ ನ್ಯಾಯಾಲಯವು ಖುಲಾಸೆಗೊಳಿಸಿದೆ.</p>.<p>ಗಲಭೆಯ ವೇಳೆ ಬ್ರಿಜ್ಪುರಿ ರಸ್ತೆಯಲ್ಲಿರುವ ಅರುಣ್ ಮಾಡರ್ನ್ ಪಬ್ಲಿಕ್ ಸೀನಿಯರ್ ಸೆಕೆಂಡರಿ ಶಾಲೆಗೆ ಬೆಂಕಿ ಹಚ್ಚಿದ ಆರೋಪವನ್ನು ಫೈಜಾನ್ ಅಲಿಯಾಸ್ ಅರ್ಯಾನ್ ವಿರುದ್ಧ ಹೊರಿಸಲಾಗಿತ್ತು.</p>.<p>ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪರ್ವೀನ್ ಸಿಂಗ್ ಅವರು ಅರ್ಯಾನ್ ಅವರನ್ನು ದೋಷಮುಕ್ತಗೊಳಿಸಿ ಜ.28ರಂದು ಆದೇಶ ಹೊರಡಿಸಿದ್ದಾರೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ಟೆಬಲ್ ಒಬ್ಬರ ಸಾಕ್ಷ್ಯವನ್ನೇ ಅವಲಂಬಿಸಿರುವುದು ಒಳ್ಳೆಯದಲ್ಲ. ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.</p>.<p>ಗಲಭೆ ನಂತರ ತಲೆಮರೆಸಿಕೊಂಡಿದ್ದ ಫೈಜಾನ್ ಅವರನ್ನು ಪೊಲೀಸರು 2022ರಲ್ಲಿ ಘೋಷಿತ ಅಪರಾಧಿ ಎಂದಿದ್ದರು. 2025ರ ಆಗಸ್ಟ್ನಲ್ಲಿ ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲೇ ಬಂಧಿಸಿದ್ದ ಇಬ್ಬರು ಆರೋಪಿಗಳನ್ನು 2025ರ ಫೆಬ್ರುವರಿಯಲ್ಲಿ ಖುಲಾಸೆಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>