<p><strong>ನವದೆಹಲಿ:</strong> ‘ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರು ಎ.ಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ ಮತ್ತು ನಡೆದುಕೊಂಡ ರೀತಿಯು ನ್ಯಾಯಸಮ್ಮತ ಭಿನ್ನಾಭಿಪ್ರಾಯದಂತೆ ಇಲ್ಲ. ಬದಲಿಗೆ ಅದು ಸಾರ್ವಜನಿಕ ವ್ಯವಸ್ಥೆ ಮೇಲಿನ ಸ್ಪಷ್ಟ ದಾಳಿಯಾಗಿದೆ’ ಎಂದು ದೆಹಲಿ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. </p>.<p>ಐವೈಸಿ ಕಾರ್ಯಕರ್ತರ ನಡವಳಿಕೆಯಿಂದ ದೇಶದ ರಾಜತಾಂತ್ರಿಕತೆಯ ಪ್ರತಿಷ್ಠೆಗೂ ಧಕ್ಕೆಯಾಗಿದೆ ಎಂದು ಅದು ಹೇಳಿದೆ. </p>.<p>‘ಭಾರತ ಮಂಟಪ’ ಸಭಾಂಗಣದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ ಐವೈಸಿಯ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಶನಿವಾರ ನ್ಯಾಯಾಲಯದಲ್ಲಿ ಹಾಜರುಪಡಿಸಿದಾಗ, ನ್ಯಾಯಾಧೀಶ ರವಿ ಅವರು ಹೀಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲದೆ ಆರೋಪಿಗಳನ್ನು ಐದು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. </p>.<p>‘ಜಾಗತಿಕ ಮಟ್ಟದ ಶೃಂಗದಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು, ಗಣ್ಯರು ಭಾಗವಹಿಸಿದ್ದರು. ಈ ಸಮಾವೇಶ ನಡೆಯುತ್ತಿದ್ದಾಗ ಒಳನುಗ್ಗಿ ಆಕ್ರಮಣಕಾರಿ ಘೋಷಣೆಗಳನ್ನು ಹೊಂದಿರುವ ಟಿ–ಶರ್ಟ್ಗಳನ್ನು ಧರಿಸಿ ಪ್ರತಿಭಟಿಸಿದ್ದಾರೆ. ಅದನ್ನು ತಡೆಯಲು ಬಂದ ಪೊಲೀಸರ ಮೇಲೆ ಗಂಭೀರ ಗಾಯಗಳಾಗುವಂತೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಅವರ ಮೇಲಿವೆ’ ಎಂದು ಆದೇಶದಲ್ಲಿ ಹೇಳಲಾಗಿದೆ. </p>.<p>‘ಪ್ರತಿಭಟನಕಾರರ ಈ ನಡವಳಿಕೆಯು ಕಾರ್ಯಕ್ರಮದ ಪಾವಿತ್ರ್ಯವನ್ನಷ್ಟೆ ಅಲ್ಲದೆ, ವಿದೇಶಿ ಗಣ್ಯರ ಮುಂದೆ ದೇಶದ ರಾಜತಾಂತ್ರಿಕ ಪ್ರತಿಷ್ಠೆಗೂ ಧಕ್ಕೆ ತಂದಿದೆ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರು ಎ.ಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ ಮತ್ತು ನಡೆದುಕೊಂಡ ರೀತಿಯು ನ್ಯಾಯಸಮ್ಮತ ಭಿನ್ನಾಭಿಪ್ರಾಯದಂತೆ ಇಲ್ಲ. ಬದಲಿಗೆ ಅದು ಸಾರ್ವಜನಿಕ ವ್ಯವಸ್ಥೆ ಮೇಲಿನ ಸ್ಪಷ್ಟ ದಾಳಿಯಾಗಿದೆ’ ಎಂದು ದೆಹಲಿ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. </p>.<p>ಐವೈಸಿ ಕಾರ್ಯಕರ್ತರ ನಡವಳಿಕೆಯಿಂದ ದೇಶದ ರಾಜತಾಂತ್ರಿಕತೆಯ ಪ್ರತಿಷ್ಠೆಗೂ ಧಕ್ಕೆಯಾಗಿದೆ ಎಂದು ಅದು ಹೇಳಿದೆ. </p>.<p>‘ಭಾರತ ಮಂಟಪ’ ಸಭಾಂಗಣದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ ಐವೈಸಿಯ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಶನಿವಾರ ನ್ಯಾಯಾಲಯದಲ್ಲಿ ಹಾಜರುಪಡಿಸಿದಾಗ, ನ್ಯಾಯಾಧೀಶ ರವಿ ಅವರು ಹೀಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲದೆ ಆರೋಪಿಗಳನ್ನು ಐದು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. </p>.<p>‘ಜಾಗತಿಕ ಮಟ್ಟದ ಶೃಂಗದಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು, ಗಣ್ಯರು ಭಾಗವಹಿಸಿದ್ದರು. ಈ ಸಮಾವೇಶ ನಡೆಯುತ್ತಿದ್ದಾಗ ಒಳನುಗ್ಗಿ ಆಕ್ರಮಣಕಾರಿ ಘೋಷಣೆಗಳನ್ನು ಹೊಂದಿರುವ ಟಿ–ಶರ್ಟ್ಗಳನ್ನು ಧರಿಸಿ ಪ್ರತಿಭಟಿಸಿದ್ದಾರೆ. ಅದನ್ನು ತಡೆಯಲು ಬಂದ ಪೊಲೀಸರ ಮೇಲೆ ಗಂಭೀರ ಗಾಯಗಳಾಗುವಂತೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಅವರ ಮೇಲಿವೆ’ ಎಂದು ಆದೇಶದಲ್ಲಿ ಹೇಳಲಾಗಿದೆ. </p>.<p>‘ಪ್ರತಿಭಟನಕಾರರ ಈ ನಡವಳಿಕೆಯು ಕಾರ್ಯಕ್ರಮದ ಪಾವಿತ್ರ್ಯವನ್ನಷ್ಟೆ ಅಲ್ಲದೆ, ವಿದೇಶಿ ಗಣ್ಯರ ಮುಂದೆ ದೇಶದ ರಾಜತಾಂತ್ರಿಕ ಪ್ರತಿಷ್ಠೆಗೂ ಧಕ್ಕೆ ತಂದಿದೆ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>