ನವದೆಹಲಿ: ನವದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದಲ್ಲಿ ಕೆಂಪುಕೋಟೆಗೆ ಹಾನಿ ಮಾಡಿದ ಪ್ರಕರಣದಡಿ ಬಂಧನಕ್ಕೊಳಗಾಗಿದ್ದ ನಟ–ಹೋರಾಟಗಾರ ದೀಪ್ ಸಿಧು ಅವರಿಗೆ ದೆಹಲಿ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಾಹಿಲ್ ಗುಪ್ತಾ ಅವರು, ಸಿಧುಗೆ ₹25 ಸಾವಿರ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಮುಚ್ಚಳಿಕೆ ಬರೆಸಿಕೊಂಡು ಜಾಮೀನು ನೀಡಿದ್ದಾರೆ.
ಕೆಂಪುಕೋಟೆ ಬಳಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಿಧುವನ್ನು ಏಪ್ರಿಲ್ 17ರಂದು ಬಂಧಿಸಿದ್ದರು.