ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ನೀತಿ ಹಗರಣ: ಮನೀಶ್‌ ಸಿಸೋಡಿಯಾಗೆ ಮೂರು ದಿನಗಳ ಮಧ್ಯಂತರ ಜಾಮೀನು

Published 12 ಫೆಬ್ರುವರಿ 2024, 14:48 IST
Last Updated 12 ಫೆಬ್ರುವರಿ 2024, 14:48 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ಎಎಪಿ ಮುಖಂಡ ಮನೀಶ್‌ ಸಿಸೋಡಿಯಾ ಅವರಿಗೆ ಸಂಬಂಧಿಯೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಯ ನ್ಯಾಯಾಲಯವು ಮೂರು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾ‌ಡಿದೆ.

ವಿಶೇಷ ನ್ಯಾಯಾಧೀಶರಾದ ಎಂ.ಕೆ. ನಾಗ್ಪಾಲ್‌ ಅವರು ಸಿಸೋಡಿಯಾ ಅವರಿಗೆ ಇದೇ 12ರಿಂದ 15ರವರೆಗೆ ಜಾಮೀನು ನೀಡಿದ್ದಾರೆ.

ಅಬಕಾರಿ ನೀತಿ ಹಗರಣದ ಜೊತೆಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಸೋಡಿಯಾ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಸಿಬಿಐ ತನಿಖೆ ನಡೆಸುತ್ತಿದೆ.

2023 ಫೆಬ್ರುವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಮಾರ್ಚ್‌ 9ರಂದು ಇ.ಡಿ ಕೂಡ ಅವರನ್ನು ಬಂಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT