<p><strong>ನವದೆಹಲಿ:</strong> ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್ ಶೋರಾ ವಿರುದ್ಧ 2019ರಲ್ಲಿ ದಾಖಲಾದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಇಲ್ಲಿನ ನ್ಯಾಯಾಲಯ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.ಶೆಹ್ಲಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ.<p>ಶೆಹ್ಲಾ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ವಿ. ಕೆ. ಸಕ್ಸೇನಾ ನೀಡಿದ್ದ ಅನುಮತಿಯನ್ನು ಹಿಂಪಡೆದುಕೊಂಡಿದ್ದಾರೆ ಎಂದು ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅನುಜ್ ಕುಮಾರ್ ಸಿಂಗ್, ಫೆಬ್ರುವರಿ 27 ರಂದು ಪ್ರಕರಣ ಹಿಂಪಡೆಯಲು ಅನುಮತಿಸಿದ್ದಾರೆ.</p><p>ದೇಶದ್ರೋಹ, ಧರ್ಮ, ಭಾಷೆ, ಜನಾಂಗ, ಜನ್ಮಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ, ಗಲಭೆ ಪ್ರಚೋದಿಸುವ ಆರೋಪದಡಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇವು ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಬಹುದಾದ ಆರೋಪಗಳು.</p>.ಶೆಹ್ಲಾ ರಶೀದ್ ವಿರುದ್ಧ ಕಾನೂನುಕ್ರಮಕ್ಕೆ ಲೆಫ್ಟಿನೆಂಟ್ ಗವರ್ನರ್ ಅನುಮತಿ.<p>ಅಲಖ್ ಅಲೋಕ್ ಶ್ರೀವಾಸ್ತವ ಎಂಬವರ ದೂರಿನ ಆಧಾರದಲ್ಲಿ ಶೆಹ್ಲಾ ವಿರುದ್ಧ 2019ರಲ್ಲಿ ನವದೆಹಲಿಯ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.</p><p>ಸೇನೆಯು ಕಾಶ್ಮೀರದಲ್ಲಿ ಮನೆಗಳಿಗೆ ಪ್ರವೇಶಿಸಿ ಸ್ಥಳೀಯರನ್ನು ಹಿಂಸಿಸುತ್ತದೆ ಎಂದು ಶೆಹ್ಲಾ ರಶೀದ್ 2019 ಆಗಸ್ಟ್ 18 ರಂದು ಟ್ವೀಟ್ ಮಾಡಿ ಆರೋಪಿಸಿದ್ದರು.</p><p>ಆರೋಪಗಳನ್ನು ಆಧಾರರಹಿತವೆಂದು ಸೇನೆ ತಳ್ಳಿ ಹಾಕಿದೆ.</p> .ರವಿ ಪೂಜಾರಿ ವಿರುದ್ಧ ಜೆಎನ್ಯು ವಿದ್ಯಾರ್ಥಿನಿ ಶೆಹ್ಲಾ ರಶೀದ್ ದೂರು ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್ ಶೋರಾ ವಿರುದ್ಧ 2019ರಲ್ಲಿ ದಾಖಲಾದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಇಲ್ಲಿನ ನ್ಯಾಯಾಲಯ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.ಶೆಹ್ಲಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ.<p>ಶೆಹ್ಲಾ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ವಿ. ಕೆ. ಸಕ್ಸೇನಾ ನೀಡಿದ್ದ ಅನುಮತಿಯನ್ನು ಹಿಂಪಡೆದುಕೊಂಡಿದ್ದಾರೆ ಎಂದು ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅನುಜ್ ಕುಮಾರ್ ಸಿಂಗ್, ಫೆಬ್ರುವರಿ 27 ರಂದು ಪ್ರಕರಣ ಹಿಂಪಡೆಯಲು ಅನುಮತಿಸಿದ್ದಾರೆ.</p><p>ದೇಶದ್ರೋಹ, ಧರ್ಮ, ಭಾಷೆ, ಜನಾಂಗ, ಜನ್ಮಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ, ಗಲಭೆ ಪ್ರಚೋದಿಸುವ ಆರೋಪದಡಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇವು ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಬಹುದಾದ ಆರೋಪಗಳು.</p>.ಶೆಹ್ಲಾ ರಶೀದ್ ವಿರುದ್ಧ ಕಾನೂನುಕ್ರಮಕ್ಕೆ ಲೆಫ್ಟಿನೆಂಟ್ ಗವರ್ನರ್ ಅನುಮತಿ.<p>ಅಲಖ್ ಅಲೋಕ್ ಶ್ರೀವಾಸ್ತವ ಎಂಬವರ ದೂರಿನ ಆಧಾರದಲ್ಲಿ ಶೆಹ್ಲಾ ವಿರುದ್ಧ 2019ರಲ್ಲಿ ನವದೆಹಲಿಯ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.</p><p>ಸೇನೆಯು ಕಾಶ್ಮೀರದಲ್ಲಿ ಮನೆಗಳಿಗೆ ಪ್ರವೇಶಿಸಿ ಸ್ಥಳೀಯರನ್ನು ಹಿಂಸಿಸುತ್ತದೆ ಎಂದು ಶೆಹ್ಲಾ ರಶೀದ್ 2019 ಆಗಸ್ಟ್ 18 ರಂದು ಟ್ವೀಟ್ ಮಾಡಿ ಆರೋಪಿಸಿದ್ದರು.</p><p>ಆರೋಪಗಳನ್ನು ಆಧಾರರಹಿತವೆಂದು ಸೇನೆ ತಳ್ಳಿ ಹಾಕಿದೆ.</p> .ರವಿ ಪೂಜಾರಿ ವಿರುದ್ಧ ಜೆಎನ್ಯು ವಿದ್ಯಾರ್ಥಿನಿ ಶೆಹ್ಲಾ ರಶೀದ್ ದೂರು ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>