<p><strong>ನವದೆಹಲಿ:</strong> ಬಿಜೆಪಿ ನಾಯಕರೊಬ್ಬರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅತಿಶಿ ಅವರಿಗೆ ನೀಡಲಾಗಿದ್ದ ಸಮನ್ಸ್ ಅನ್ನು ದೆಹಲಿ ನ್ಯಾಯಾಲಯ ಇಂದು(ಮಂಗಳವಾರ) ರದ್ದುಗೊಳಿಸಿದೆ.</p>.<p>ಬಿಜೆಪಿ ಮುಖಂಡ ಪ್ರವೀಣ್ ಶಂಕರ್ ಕಪೂರ್ ಅವರು ಸಿಎಂ ಅತಿಶಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. </p>.<p>ಪ್ರಕರಣ ಸಂಬಂಧ ತನ್ನ ವಿರುದ್ಧ ಸಮನ್ಸ್ ಜಾರಿ ಮಾಡಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಹಿಂದಿನ ತೀರ್ಪನ್ನು ಪ್ರಶ್ನಿಸಿ ಅತಿಶಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಆಲಿಸಿದ ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ಸಮನ್ಸ್ ರದ್ದುಪಡಿಸಿ ಆದೇಶಿಸಿದ್ದಾರೆ.</p>.<p>ಅತಿಶಿಯವರ ಹೇಳಿಕೆಗಳು ತನ್ನ ಪ್ರತಿಷ್ಠೆಗೆ ಹಾನಿಯುಂಟು ಮಾಡಿವೆ ಎಂದು ಕಪೂರ್ ಆರೋಪಿಸಿದ್ದರು. ಅತಿಶಿ ಪರ ವಾದ ಮಂಡಿಸಿದ ವಕೀಲರು, ಆಪಾದಿತ ಮಾನಹಾನಿಕರ ಹೇಳಿಕೆಯು ಬಿಜೆಪಿಯ ವಿರುದ್ಧವೇ ಹೊರತು ವ್ಯಕ್ತಿ ವಿರುದ್ಧ ಅಲ್ಲ. ವೈಯಕ್ತಿಕವಾಗಿ ಕಪೂರ್ ಅವರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲ ಎಂದಿದ್ದಾರೆ.</p>.ಮಾನನಷ್ಟ ಮೊಕದ್ದಮೆ: ದೆಹಲಿ ಸಿಎಂ ಅತಿಶಿ, ಸಂಜಯ್ ಸಿಂಗ್ಗೆ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿ ನಾಯಕರೊಬ್ಬರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅತಿಶಿ ಅವರಿಗೆ ನೀಡಲಾಗಿದ್ದ ಸಮನ್ಸ್ ಅನ್ನು ದೆಹಲಿ ನ್ಯಾಯಾಲಯ ಇಂದು(ಮಂಗಳವಾರ) ರದ್ದುಗೊಳಿಸಿದೆ.</p>.<p>ಬಿಜೆಪಿ ಮುಖಂಡ ಪ್ರವೀಣ್ ಶಂಕರ್ ಕಪೂರ್ ಅವರು ಸಿಎಂ ಅತಿಶಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. </p>.<p>ಪ್ರಕರಣ ಸಂಬಂಧ ತನ್ನ ವಿರುದ್ಧ ಸಮನ್ಸ್ ಜಾರಿ ಮಾಡಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಹಿಂದಿನ ತೀರ್ಪನ್ನು ಪ್ರಶ್ನಿಸಿ ಅತಿಶಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಆಲಿಸಿದ ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ಸಮನ್ಸ್ ರದ್ದುಪಡಿಸಿ ಆದೇಶಿಸಿದ್ದಾರೆ.</p>.<p>ಅತಿಶಿಯವರ ಹೇಳಿಕೆಗಳು ತನ್ನ ಪ್ರತಿಷ್ಠೆಗೆ ಹಾನಿಯುಂಟು ಮಾಡಿವೆ ಎಂದು ಕಪೂರ್ ಆರೋಪಿಸಿದ್ದರು. ಅತಿಶಿ ಪರ ವಾದ ಮಂಡಿಸಿದ ವಕೀಲರು, ಆಪಾದಿತ ಮಾನಹಾನಿಕರ ಹೇಳಿಕೆಯು ಬಿಜೆಪಿಯ ವಿರುದ್ಧವೇ ಹೊರತು ವ್ಯಕ್ತಿ ವಿರುದ್ಧ ಅಲ್ಲ. ವೈಯಕ್ತಿಕವಾಗಿ ಕಪೂರ್ ಅವರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲ ಎಂದಿದ್ದಾರೆ.</p>.ಮಾನನಷ್ಟ ಮೊಕದ್ದಮೆ: ದೆಹಲಿ ಸಿಎಂ ಅತಿಶಿ, ಸಂಜಯ್ ಸಿಂಗ್ಗೆ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>