<p><strong>ನವದೆಹಲಿ:</strong> ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಮರಣದಂಡನೆ ಶಿಕ್ಷೆಗೆ ತಡೆ ನೀಡಲು ದೆಹಲಿ ನ್ಯಾಯಾಲಯವು ಸೋಮವಾರ ನಿರಾಕರಿಸಿದೆ.</p>.<p>ಅಕ್ಷಯ್ ಕುಮಾರ್ (31), ಪವನ್ ಗುಪ್ತಾ (25), ಮುಖೇಶ್ ಸಿಂಗ್ (32) ಮತ್ತು ವಿನಯ್ ಶರ್ಮಾ (26) ಎಂಬ ಅಪರಾಧಿಗಳು ತಮ್ಮ ಮರಣದಂಡನೆ ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪಟಿಯಾಲ ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿದೆ.</p>.<p>ಪವನ್ ಕುಮಾರ್ ಗುಪ್ತಾ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಅಲ್ಲದೆ, ತನಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಗೆ ತಡೆ ನೀಡಬೇಕೆಂಬ ಕೋರಿಕೆಯನ್ನೂ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಮರಣದಂಡನೆಯಿಂದ ಪಾರಾಗಲು ಅಪರಾಧಿಗಳ ಮುಂದಿದ್ದ ಎಲ್ಲ ಕಾನೂನು ಆಯ್ಕೆಗಳ ಸಾಧ್ಯತೆಯು ಕೊನೆಗೊಂಡಿದೆ. ಆದರೆ ಪವನ್ ಗುಪ್ತಾ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.</p>.<p>ರಾಷ್ಟ್ರಪತಿಗಳ ಬಳಿಯಲ್ಲಿ ಕ್ಷಮಾದಾನ ಅರ್ಜಿಯ ತೀರ್ಪು ಬಾಕಿಯಿರುವಾಗ ನಾಳಿನ ಮರಣದಂಡನೆ ಶಿಕ್ಷೆಗೆ ತಡೆ ನೀಡಬೇಕು ಎಂದು ಸ್ಥಳೀಯ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದ್ದಾನೆ.</p>.<p>ಅವರು ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ ಮತ್ತು ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಯತ್ನಿಸುತ್ತಿದ್ದಾರೆ. ಇದೀಗ ಅವರೆಲ್ಲರೂ ನಾಳೆ ನೇಣುಗಂಬಕ್ಕೇರುತ್ತಿದ್ದಾರೆ ಎಂದು ನಿರ್ಭಯಾ ತಾಯಿ ತಿಳಿಸಿದ್ದಾರೆ.</p>.<p>ಕಾನೂನನ್ನು ತಿರುಚಲು ಮಾಡುತ್ತಿದ್ದ ಎಲ್ಲ ಪ್ರಯತ್ನಗಳಿಗೂ ಇಂದು ಕೊನೆಬಿದ್ದಿದೆ. ನನಗೆ ತುಂಬ ಸಂತೋಷವಾಗಿದೆ ಎಂದು ನಿರ್ಭಯಾ ಪರ ವಾದಿಸಿದ್ದ ವಕೀಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಮರಣದಂಡನೆ ಶಿಕ್ಷೆಗೆ ತಡೆ ನೀಡಲು ದೆಹಲಿ ನ್ಯಾಯಾಲಯವು ಸೋಮವಾರ ನಿರಾಕರಿಸಿದೆ.</p>.<p>ಅಕ್ಷಯ್ ಕುಮಾರ್ (31), ಪವನ್ ಗುಪ್ತಾ (25), ಮುಖೇಶ್ ಸಿಂಗ್ (32) ಮತ್ತು ವಿನಯ್ ಶರ್ಮಾ (26) ಎಂಬ ಅಪರಾಧಿಗಳು ತಮ್ಮ ಮರಣದಂಡನೆ ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪಟಿಯಾಲ ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿದೆ.</p>.<p>ಪವನ್ ಕುಮಾರ್ ಗುಪ್ತಾ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಅಲ್ಲದೆ, ತನಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಗೆ ತಡೆ ನೀಡಬೇಕೆಂಬ ಕೋರಿಕೆಯನ್ನೂ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಮರಣದಂಡನೆಯಿಂದ ಪಾರಾಗಲು ಅಪರಾಧಿಗಳ ಮುಂದಿದ್ದ ಎಲ್ಲ ಕಾನೂನು ಆಯ್ಕೆಗಳ ಸಾಧ್ಯತೆಯು ಕೊನೆಗೊಂಡಿದೆ. ಆದರೆ ಪವನ್ ಗುಪ್ತಾ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.</p>.<p>ರಾಷ್ಟ್ರಪತಿಗಳ ಬಳಿಯಲ್ಲಿ ಕ್ಷಮಾದಾನ ಅರ್ಜಿಯ ತೀರ್ಪು ಬಾಕಿಯಿರುವಾಗ ನಾಳಿನ ಮರಣದಂಡನೆ ಶಿಕ್ಷೆಗೆ ತಡೆ ನೀಡಬೇಕು ಎಂದು ಸ್ಥಳೀಯ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದ್ದಾನೆ.</p>.<p>ಅವರು ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ ಮತ್ತು ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಯತ್ನಿಸುತ್ತಿದ್ದಾರೆ. ಇದೀಗ ಅವರೆಲ್ಲರೂ ನಾಳೆ ನೇಣುಗಂಬಕ್ಕೇರುತ್ತಿದ್ದಾರೆ ಎಂದು ನಿರ್ಭಯಾ ತಾಯಿ ತಿಳಿಸಿದ್ದಾರೆ.</p>.<p>ಕಾನೂನನ್ನು ತಿರುಚಲು ಮಾಡುತ್ತಿದ್ದ ಎಲ್ಲ ಪ್ರಯತ್ನಗಳಿಗೂ ಇಂದು ಕೊನೆಬಿದ್ದಿದೆ. ನನಗೆ ತುಂಬ ಸಂತೋಷವಾಗಿದೆ ಎಂದು ನಿರ್ಭಯಾ ಪರ ವಾದಿಸಿದ್ದ ವಕೀಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>