<p><strong>ನವದೆಹಲಿ</strong>: ಜೈಲಿನಲ್ಲಿರುವ ಸಂಸದ ಶೇಕ್ ಅಬ್ದುಲ್ ರಶೀದ್ ಸಲ್ಲಿಸಿರುವ ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ದೆಹಲಿ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ನೀಡಿದೆ. </p>.<p>ಇಂಜಿನಿಯರ್ ರಶೀದ್ ಎಂದೇ ಪ್ರಸಿದ್ಧರಾಗಿರುವ ಕಾಶ್ಮೀರಿ ನಾಯಕ ರಶೀದ್ ಅವರನ್ನು, ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ, ಭಯೋತ್ಪಾದನೆಗೆ ಹಣ ಒದಗಿಸಿದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಪ್ರಕರಣದಲ್ಲಿ 2017ರಲ್ಲಿ ಬಂಧಿಸಲಾಯಿತು. </p>.<p>2024ರ ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಶೀದ್ ಜೈಲಿನಲ್ಲಿದ್ದೇ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು. </p>.<p>ಇದೀಗ ರಶೀದ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಛಂದೆರ್ ಜೀತ್ ಸಿಂಗ್ ಅವರು ಈ ಬಗ್ಗೆ ಸಿಬಿಐಗೆ ನೋಟಿಸ್ ನೀಡಿದ್ದು, ಆಗಸ್ಟ್ 28ರ ಒಳಗಾಗಿ ಉತ್ತರಿಸುವಂತೆ ಸೂಚಿಸಿದ್ದಾರೆ. </p>.<p>ಸಂಸದರಾಗಿ ಆಯ್ಕೆಯಾದ ರಶೀದ್ಗೆ ಪ್ರಮಾಣ ವಚನ ಸ್ವೀಕರಿಸಲು ನ್ಯಾಯಾಲಯ ಈ ಹಿಂದೆ ಜುಲೈ 5ರಂದು ಪರೋಲ್ ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜೈಲಿನಲ್ಲಿರುವ ಸಂಸದ ಶೇಕ್ ಅಬ್ದುಲ್ ರಶೀದ್ ಸಲ್ಲಿಸಿರುವ ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ದೆಹಲಿ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ನೀಡಿದೆ. </p>.<p>ಇಂಜಿನಿಯರ್ ರಶೀದ್ ಎಂದೇ ಪ್ರಸಿದ್ಧರಾಗಿರುವ ಕಾಶ್ಮೀರಿ ನಾಯಕ ರಶೀದ್ ಅವರನ್ನು, ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ, ಭಯೋತ್ಪಾದನೆಗೆ ಹಣ ಒದಗಿಸಿದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಪ್ರಕರಣದಲ್ಲಿ 2017ರಲ್ಲಿ ಬಂಧಿಸಲಾಯಿತು. </p>.<p>2024ರ ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಶೀದ್ ಜೈಲಿನಲ್ಲಿದ್ದೇ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು. </p>.<p>ಇದೀಗ ರಶೀದ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಛಂದೆರ್ ಜೀತ್ ಸಿಂಗ್ ಅವರು ಈ ಬಗ್ಗೆ ಸಿಬಿಐಗೆ ನೋಟಿಸ್ ನೀಡಿದ್ದು, ಆಗಸ್ಟ್ 28ರ ಒಳಗಾಗಿ ಉತ್ತರಿಸುವಂತೆ ಸೂಚಿಸಿದ್ದಾರೆ. </p>.<p>ಸಂಸದರಾಗಿ ಆಯ್ಕೆಯಾದ ರಶೀದ್ಗೆ ಪ್ರಮಾಣ ವಚನ ಸ್ವೀಕರಿಸಲು ನ್ಯಾಯಾಲಯ ಈ ಹಿಂದೆ ಜುಲೈ 5ರಂದು ಪರೋಲ್ ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>