<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿಯಲ್ಲಿ ರೇಬಿಸ್ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅದನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ 'ಅಧಿಸೂಚಿತ ರೋಗ' ಎಂದು ಘೋಷಿಸಲು ದೆಹಲಿ ಸರ್ಕಾರ ಸಿದ್ಧತೆ ನಡೆಸಿದೆ.</p><p>ಈ ಕಾಯಿಲೆಯಿಂದ ಬಳಲುತ್ತಿರುವವರ ಮೇಲ್ವಿಚಾರಣೆಯನ್ನು ಬಲಪಡಿಸಲು ಹಾಗೂ ಸಕಾಲದಲ್ಲಿ ಚಿಕಿತ್ಸೆ ಒದಗಿಸುವುದನ್ನು ಖಾತ್ರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.</p><p>'ದೆಹಲಿಯಲ್ಲಿ ರೇಬಿಸ್ನಿಂದ ಒಂದೇ ಒಂದು ಸಾವು ಕೂಡ ಸಂಭವಿಸದಂತೆ ಗುರಿ ಸಾಧಿಸುವ ನಿಟ್ಟಿನಲ್ಲಿ ಇಟ್ಟಿರುವ ಮಹತ್ವದ ಹೆಜ್ಜೆ ಇದಾಗಿದೆ' ಎಂದು ದೆಹಲಿ ಆರೋಗ್ಯ ಸಚಿವ ಪಂಕಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.</p><p>ಇದಕ್ಕೆ ಸಂಬಂಧಿಸಿದ ಅಧಿಸೂಚನೆ ಜಾರಿಯಾದಲ್ಲಿ, ವೈದ್ಯಕೀಯ ಕಾಲೇಜುಗಳೂ ಸೇರಿದಂತೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಶಂಕಿತ ಪ್ರಕರಣಗಳ ಕುರಿತು ಸಂಬಂಧಪಟ್ಟ ಆರೋಗ್ಯ ಅಧಿಕಾರಿಗಳಿಗೆ ವರದಿ ನೀಡುವುದು ಕಡ್ಡಾಯ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p><p>ರೋಗ ಪತ್ತೆ ಮೇಲ್ವಿಚಾರಣೆಯನ್ನು ಬಲಪಡಿಸುವುದಷ್ಟೇ ಅಲ್ಲದೆ, ಸಕಾಲದಲ್ಲಿ ಶಂಕಿತ ಪ್ರಕರಣಗಳ ವರದಿಯನ್ನು ಖಾತ್ರಿ ಮಾಡಿಕೊಳ್ಳಲು ಹಾಗೂ ಆ ಮೂಲಕ ರೇಬಿಸ್ ಹರಡುವುದನ್ನು ತಡೆಯಲು ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳುವ ಉದ್ದೇಶ ಈ ಉಪಕ್ರಮದ ಹಿಂದೆ ಇದೆ ಎಂದು ಉಲ್ಲೇಖಿಸಲಾಗಿದೆ.</p><p>ಸರ್ಕಾರವು ಮನುಷ್ಯರಿಗಷ್ಟೇ ಅಲ್ಲದೆ, ನಾಯಿಗಳು ಮತ್ತಿತರ ಪ್ರಾಣಿಗಳಿಗೂ ರೇಬಿಸ್ ಲಸಿಕಾ ಸೌಲಭ್ಯಗಳನ್ನು ಹೆಚ್ಚಿಸಲಿದೆ ಎಂದೂ ಪ್ರಕಟಣೆಯಲ್ಲಿ ಹೇಳಲಾಗಿದೆ.</p><p>ದೆಹಲಿ ಸರ್ಕಾರವು, ಸ್ಥಳೀಯ ಸಂಸ್ಥೆಗಳು, ಪಶುಸಂಗೋಪನಾ ಇಲಾಖೆ ಮತ್ತು ಸಂಬಂಧಪಟ್ಟ ಇತರ ಇಲಾಖೆಗಳ ಸಹಯೋಗದಲ್ಲಿ 'ರೇಬಿಸ್ ನಿರ್ಮೂಲನೆಗಾಗಿ ರಾಜ್ಯ ಕ್ರಿಯಾ ಯೋಜನೆ' ರೂಪಿಸುವ ಯೋಜನೆ ಕೈಗೆತ್ತಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿಯಲ್ಲಿ ರೇಬಿಸ್ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅದನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ 'ಅಧಿಸೂಚಿತ ರೋಗ' ಎಂದು ಘೋಷಿಸಲು ದೆಹಲಿ ಸರ್ಕಾರ ಸಿದ್ಧತೆ ನಡೆಸಿದೆ.</p><p>ಈ ಕಾಯಿಲೆಯಿಂದ ಬಳಲುತ್ತಿರುವವರ ಮೇಲ್ವಿಚಾರಣೆಯನ್ನು ಬಲಪಡಿಸಲು ಹಾಗೂ ಸಕಾಲದಲ್ಲಿ ಚಿಕಿತ್ಸೆ ಒದಗಿಸುವುದನ್ನು ಖಾತ್ರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.</p><p>'ದೆಹಲಿಯಲ್ಲಿ ರೇಬಿಸ್ನಿಂದ ಒಂದೇ ಒಂದು ಸಾವು ಕೂಡ ಸಂಭವಿಸದಂತೆ ಗುರಿ ಸಾಧಿಸುವ ನಿಟ್ಟಿನಲ್ಲಿ ಇಟ್ಟಿರುವ ಮಹತ್ವದ ಹೆಜ್ಜೆ ಇದಾಗಿದೆ' ಎಂದು ದೆಹಲಿ ಆರೋಗ್ಯ ಸಚಿವ ಪಂಕಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.</p><p>ಇದಕ್ಕೆ ಸಂಬಂಧಿಸಿದ ಅಧಿಸೂಚನೆ ಜಾರಿಯಾದಲ್ಲಿ, ವೈದ್ಯಕೀಯ ಕಾಲೇಜುಗಳೂ ಸೇರಿದಂತೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಶಂಕಿತ ಪ್ರಕರಣಗಳ ಕುರಿತು ಸಂಬಂಧಪಟ್ಟ ಆರೋಗ್ಯ ಅಧಿಕಾರಿಗಳಿಗೆ ವರದಿ ನೀಡುವುದು ಕಡ್ಡಾಯ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p><p>ರೋಗ ಪತ್ತೆ ಮೇಲ್ವಿಚಾರಣೆಯನ್ನು ಬಲಪಡಿಸುವುದಷ್ಟೇ ಅಲ್ಲದೆ, ಸಕಾಲದಲ್ಲಿ ಶಂಕಿತ ಪ್ರಕರಣಗಳ ವರದಿಯನ್ನು ಖಾತ್ರಿ ಮಾಡಿಕೊಳ್ಳಲು ಹಾಗೂ ಆ ಮೂಲಕ ರೇಬಿಸ್ ಹರಡುವುದನ್ನು ತಡೆಯಲು ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳುವ ಉದ್ದೇಶ ಈ ಉಪಕ್ರಮದ ಹಿಂದೆ ಇದೆ ಎಂದು ಉಲ್ಲೇಖಿಸಲಾಗಿದೆ.</p><p>ಸರ್ಕಾರವು ಮನುಷ್ಯರಿಗಷ್ಟೇ ಅಲ್ಲದೆ, ನಾಯಿಗಳು ಮತ್ತಿತರ ಪ್ರಾಣಿಗಳಿಗೂ ರೇಬಿಸ್ ಲಸಿಕಾ ಸೌಲಭ್ಯಗಳನ್ನು ಹೆಚ್ಚಿಸಲಿದೆ ಎಂದೂ ಪ್ರಕಟಣೆಯಲ್ಲಿ ಹೇಳಲಾಗಿದೆ.</p><p>ದೆಹಲಿ ಸರ್ಕಾರವು, ಸ್ಥಳೀಯ ಸಂಸ್ಥೆಗಳು, ಪಶುಸಂಗೋಪನಾ ಇಲಾಖೆ ಮತ್ತು ಸಂಬಂಧಪಟ್ಟ ಇತರ ಇಲಾಖೆಗಳ ಸಹಯೋಗದಲ್ಲಿ 'ರೇಬಿಸ್ ನಿರ್ಮೂಲನೆಗಾಗಿ ರಾಜ್ಯ ಕ್ರಿಯಾ ಯೋಜನೆ' ರೂಪಿಸುವ ಯೋಜನೆ ಕೈಗೆತ್ತಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>