<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ನಾವು ಆಡಳಿತ ವಿರೋಧಿ ಅಲೆ ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದೆವು. ಆದರೂ ಜನರು ನಮಗೆ ಜನಾದೇಶವನ್ನು ನೀಡಲಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಫೆಬ್ರುವರಿ 8ರಂದು (ಶನಿವಾರ) ಪ್ರಕಟಗೊಂಡಿದೆ. ಬಿಜೆಪಿ 48 ಸ್ಥಾನಗಳನ್ನು ಗೆದ್ದು 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮತ್ತೊಂದೆಡೆ ಆಡಳಿತಾರೂಢ ಎಎಪಿಗೆ ಅಧಿಕಾರ ನಷ್ಟವಾಗಿದ್ದು, 22 ಸ್ಥಾನಗಳಿಗೆ ಸೀಮಿತಗೊಂಡಿದೆ. </p><p>ಕಾಂಗ್ರೆಸ್ ಸತತ ಮೂರನೇ ಸಲವೂ ಒಂದೇ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಲಿಲ್ಲ. 1998ರಿಂದ 2013ರವರೆಗೆ 15 ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿತ್ತು. </p><p>ಪಕ್ಷದ 'ಶೂನ್ಯ' ಸಾಧನೆ ಬಳಿಕ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, 'ಜನರ ಹಿತದೃಷ್ಟಿಯಲ್ಲಿ ನಾವು ಸರ್ಕಾರಿ ವಿರೋಧಿ ಅಲೆ ಸೃಷ್ಟಿಸಿದ್ದೆವು. ಆದರೆ ನಾವು ನಿರೀಕ್ಷೆ ಮಾಡಿದಂತೆ ಜನಾದೇಶ ಸಿಗಲಿಲ್ಲ. ಜನರ ತೀರ್ಪನ್ನು ನಾವು ಸ್ವೀಕರಿಸುತ್ತೇವೆ' ಎಂದು ಹೇಳಿದ್ದಾರೆ. </p><p>'ಈ ಕಠಿಣ ಪರಿಸ್ಥಿತಿಯಲ್ಲೂ ಕಾಂಗ್ರೆಸ್ನ ಪ್ರತಿಯೊಬ್ಬ ಕಾರ್ಯಕರ್ತನೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಆದರೆ ಇನ್ನೂ ಹೆಚ್ಚಿನ ಪರಿಶ್ರಮ ಹಾಗೂ ಹೋರಾಟದ ಅಗತ್ಯವಿದೆ' ಎಂದು ಹೇಳಿದ್ದಾರೆ. </p><p>'ಮುಂಬರುವ ದಿನಗಳಲ್ಲಿ ದೆಹಲಿಯ ಮಾಲಿನ್ಯ, ಯಮುನಾ ನದಿ ಶುದ್ಧೀಕರಣ, ವಿದ್ಯುತ್, ರಸ್ತೆ, ನೀರು ಸೇರಿದಂತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೋರಾಟ ಮುಂದುವರಿಯಲಿದೆ. ನಾವು ಜನರೊಂದಿಗೆ ಇರಲಿದ್ದೇವೆ' ಎಂದು ಅವರು ತಿಳಿಸಿದ್ದಾರೆ. </p>.Delhi Election Result | ಬಿಜೆಪಿಗೆ ಗದ್ದುಗೆ: ಎಎಪಿ ಮನೆಗೆ.Delhi Election Result: ಆಮ್ ಆದ್ಮಿ ಪಕ್ಷದ ಮಹಾರಥಿಗಳ ಸೋಲು.Delhi Result ಬಿಜೆಪಿ ಮತ ಪ್ರಮಾಣ ಜಿಗಿತ; ಎಎಪಿ ಇಳಿಕೆ, ಕಾಂಗ್ರೆಸ್ಗೂ ಅಲ್ಪ ಲಾಭ.Delhi Elections: ತೀವ್ರ ಮುಖಭಂಗದ ನಡುವೆ ಕಾಂಗ್ರೆಸ್ಗೆ ಎಎಪಿ ಸೋಲಿನ ಸಮಾಧಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ನಾವು ಆಡಳಿತ ವಿರೋಧಿ ಅಲೆ ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದೆವು. ಆದರೂ ಜನರು ನಮಗೆ ಜನಾದೇಶವನ್ನು ನೀಡಲಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಫೆಬ್ರುವರಿ 8ರಂದು (ಶನಿವಾರ) ಪ್ರಕಟಗೊಂಡಿದೆ. ಬಿಜೆಪಿ 48 ಸ್ಥಾನಗಳನ್ನು ಗೆದ್ದು 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮತ್ತೊಂದೆಡೆ ಆಡಳಿತಾರೂಢ ಎಎಪಿಗೆ ಅಧಿಕಾರ ನಷ್ಟವಾಗಿದ್ದು, 22 ಸ್ಥಾನಗಳಿಗೆ ಸೀಮಿತಗೊಂಡಿದೆ. </p><p>ಕಾಂಗ್ರೆಸ್ ಸತತ ಮೂರನೇ ಸಲವೂ ಒಂದೇ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಲಿಲ್ಲ. 1998ರಿಂದ 2013ರವರೆಗೆ 15 ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿತ್ತು. </p><p>ಪಕ್ಷದ 'ಶೂನ್ಯ' ಸಾಧನೆ ಬಳಿಕ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, 'ಜನರ ಹಿತದೃಷ್ಟಿಯಲ್ಲಿ ನಾವು ಸರ್ಕಾರಿ ವಿರೋಧಿ ಅಲೆ ಸೃಷ್ಟಿಸಿದ್ದೆವು. ಆದರೆ ನಾವು ನಿರೀಕ್ಷೆ ಮಾಡಿದಂತೆ ಜನಾದೇಶ ಸಿಗಲಿಲ್ಲ. ಜನರ ತೀರ್ಪನ್ನು ನಾವು ಸ್ವೀಕರಿಸುತ್ತೇವೆ' ಎಂದು ಹೇಳಿದ್ದಾರೆ. </p><p>'ಈ ಕಠಿಣ ಪರಿಸ್ಥಿತಿಯಲ್ಲೂ ಕಾಂಗ್ರೆಸ್ನ ಪ್ರತಿಯೊಬ್ಬ ಕಾರ್ಯಕರ್ತನೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಆದರೆ ಇನ್ನೂ ಹೆಚ್ಚಿನ ಪರಿಶ್ರಮ ಹಾಗೂ ಹೋರಾಟದ ಅಗತ್ಯವಿದೆ' ಎಂದು ಹೇಳಿದ್ದಾರೆ. </p><p>'ಮುಂಬರುವ ದಿನಗಳಲ್ಲಿ ದೆಹಲಿಯ ಮಾಲಿನ್ಯ, ಯಮುನಾ ನದಿ ಶುದ್ಧೀಕರಣ, ವಿದ್ಯುತ್, ರಸ್ತೆ, ನೀರು ಸೇರಿದಂತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೋರಾಟ ಮುಂದುವರಿಯಲಿದೆ. ನಾವು ಜನರೊಂದಿಗೆ ಇರಲಿದ್ದೇವೆ' ಎಂದು ಅವರು ತಿಳಿಸಿದ್ದಾರೆ. </p>.Delhi Election Result | ಬಿಜೆಪಿಗೆ ಗದ್ದುಗೆ: ಎಎಪಿ ಮನೆಗೆ.Delhi Election Result: ಆಮ್ ಆದ್ಮಿ ಪಕ್ಷದ ಮಹಾರಥಿಗಳ ಸೋಲು.Delhi Result ಬಿಜೆಪಿ ಮತ ಪ್ರಮಾಣ ಜಿಗಿತ; ಎಎಪಿ ಇಳಿಕೆ, ಕಾಂಗ್ರೆಸ್ಗೂ ಅಲ್ಪ ಲಾಭ.Delhi Elections: ತೀವ್ರ ಮುಖಭಂಗದ ನಡುವೆ ಕಾಂಗ್ರೆಸ್ಗೆ ಎಎಪಿ ಸೋಲಿನ ಸಮಾಧಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>