<p><strong>ನವದೆಹಲಿ:</strong> ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 67 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.</p><p>ಕಾಂಗ್ರೆಸ್ ಪಕ್ಷ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು. ಈ ಪೈಕಿ 67 ಅಭ್ಯರ್ಥಿಗಳು ತಾವು ಇಟ್ಟಿದ ಠೇವಣಿ ಹಣವನ್ನು ಕಳೆದುಕೊಂಡಿದ್ದಾರೆ. ಈ ಹಣವನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿಕೊಂಡಿದೆ. </p>.Delhi Election Results | ಬಿಜೆಪಿಗೆ ವರದಾನ, ಎಎಪಿಗೆ ಮುಳುವಾಗಿದ್ದೇನು?.Delhi Election Result: ‘ಪಂದ್ಯಶ್ರೇಷ್ಠ’ ಪರ್ವೇಶ್ಗೆ ಸಿಎಂ ಗಾದಿ?.<p>ಕಸ್ತೂರ್ ಬಾ ನಗರ ವಿಧಾನಸಭಾ ಕ್ಷೇತ್ರದ ಅಭಿಷೇಕ್ ದತ್, ಎನ್. ಜತ್ ಕ್ಷೇತ್ರದ ರೋಹಿತ್ ಚೌಧರಿ ಮತ್ತು ಬದ್ಲಿ ವಿಧಾನಸಭಾ ಕ್ಷೇತ್ರದಿಂದ ದೇವೇಂದ್ರ ಯಾದವ್ ಮಾತ್ರ ತಮ್ಮ ಠೇವಣಿ ಉಳಿಸಿಕೊಂಡಿದ್ದಾರೆ. ಉಳಿದ 67 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.</p><p>ಅಭಿಷೇಕ್ ದತ್ ಮಾತ್ರ ಬಿಜೆಪಿ ಎದುರು 11 ಸಾವಿರ ಮತಗಳ ಅಂತರದಿಂದ ಸೋಲುಂಡರು. ಉಳಿದಂತೆ ಯಾವ ಅಭ್ಯರ್ಥಿಯೂ ಎರಡನೇ ಸ್ಥಾನಕ್ಕೆ ಏರಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ಈ ಚುನಾವಣೆಯಲ್ಲಿ ಸ್ಪರ್ಧಿಸಿದ 699 ಅಭ್ಯರ್ಥಿಗಳ ಪೈಕಿ 555 (ಶೇ 79.39) ಅಭ್ಯರ್ಥಿಗಳ ಠೇವಣಿ ಕಳೆದುಕೊಂಡರು. 1951ರ ಜನತಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಚುನಾವಣಾ ಆಯೋಗಕ್ಕೆ ಸಾಮಾನ್ಯ ವರ್ಗದವರು ₹10 ಸಾವಿರ, ಪರಿಶಿಷ್ಠ ಜಾತಿ ಮತ್ತು ಬುಡಕಟ್ಟು ಜನಾಂಗದ ಅಭ್ಯರ್ಥಿಗಳು ₹5 ಸಾವಿರ ಠೇವಣಿ ಇಡಬೇಕು. </p>.Delhi Election Result | ಬಿಜೆಪಿಗೆ ಗದ್ದುಗೆ: ಎಎಪಿ ಮನೆಗೆ.Delhi Elections Results | ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ: ಪ್ರಿಯಾಂಕಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 67 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.</p><p>ಕಾಂಗ್ರೆಸ್ ಪಕ್ಷ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು. ಈ ಪೈಕಿ 67 ಅಭ್ಯರ್ಥಿಗಳು ತಾವು ಇಟ್ಟಿದ ಠೇವಣಿ ಹಣವನ್ನು ಕಳೆದುಕೊಂಡಿದ್ದಾರೆ. ಈ ಹಣವನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿಕೊಂಡಿದೆ. </p>.Delhi Election Results | ಬಿಜೆಪಿಗೆ ವರದಾನ, ಎಎಪಿಗೆ ಮುಳುವಾಗಿದ್ದೇನು?.Delhi Election Result: ‘ಪಂದ್ಯಶ್ರೇಷ್ಠ’ ಪರ್ವೇಶ್ಗೆ ಸಿಎಂ ಗಾದಿ?.<p>ಕಸ್ತೂರ್ ಬಾ ನಗರ ವಿಧಾನಸಭಾ ಕ್ಷೇತ್ರದ ಅಭಿಷೇಕ್ ದತ್, ಎನ್. ಜತ್ ಕ್ಷೇತ್ರದ ರೋಹಿತ್ ಚೌಧರಿ ಮತ್ತು ಬದ್ಲಿ ವಿಧಾನಸಭಾ ಕ್ಷೇತ್ರದಿಂದ ದೇವೇಂದ್ರ ಯಾದವ್ ಮಾತ್ರ ತಮ್ಮ ಠೇವಣಿ ಉಳಿಸಿಕೊಂಡಿದ್ದಾರೆ. ಉಳಿದ 67 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.</p><p>ಅಭಿಷೇಕ್ ದತ್ ಮಾತ್ರ ಬಿಜೆಪಿ ಎದುರು 11 ಸಾವಿರ ಮತಗಳ ಅಂತರದಿಂದ ಸೋಲುಂಡರು. ಉಳಿದಂತೆ ಯಾವ ಅಭ್ಯರ್ಥಿಯೂ ಎರಡನೇ ಸ್ಥಾನಕ್ಕೆ ಏರಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ಈ ಚುನಾವಣೆಯಲ್ಲಿ ಸ್ಪರ್ಧಿಸಿದ 699 ಅಭ್ಯರ್ಥಿಗಳ ಪೈಕಿ 555 (ಶೇ 79.39) ಅಭ್ಯರ್ಥಿಗಳ ಠೇವಣಿ ಕಳೆದುಕೊಂಡರು. 1951ರ ಜನತಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಚುನಾವಣಾ ಆಯೋಗಕ್ಕೆ ಸಾಮಾನ್ಯ ವರ್ಗದವರು ₹10 ಸಾವಿರ, ಪರಿಶಿಷ್ಠ ಜಾತಿ ಮತ್ತು ಬುಡಕಟ್ಟು ಜನಾಂಗದ ಅಭ್ಯರ್ಥಿಗಳು ₹5 ಸಾವಿರ ಠೇವಣಿ ಇಡಬೇಕು. </p>.Delhi Election Result | ಬಿಜೆಪಿಗೆ ಗದ್ದುಗೆ: ಎಎಪಿ ಮನೆಗೆ.Delhi Elections Results | ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ: ಪ್ರಿಯಾಂಕಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>