<p><strong>ಇಂದೋರ್:</strong> ತುಕ್ಡೆ-ತುಕ್ಡೆ ಗ್ಯಾಂಗ್ನ ನಾಯಕರು ಹಾಗೂ ಸಂಕುಚಿತ ಮನಸ್ಥಿತಿ ಇರುವವರು ಸತತವಾಗಿ ಸೋಲನುಭವಿಸುತ್ತಿದ್ದಾರೆ ಎಂದು ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.</p><p>ಇಂದೋರ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಚುನಾವಣೆಯಲ್ಲಿ ಪದೇ ಪದೇ ಸೋಲುತ್ತಿದ್ದು, ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.</p>.Delhi Election Results: ಮನೀಶ್ ಸಿಸೋಡಿಯಾಗೆ ಸೋಲು.<p>ವಿಪಕ್ಷಗಳ ಇಂಡಿಯಾ ಒಕ್ಕೂಟದ ವಿರುದ್ಧ ಕಿಡಿ ಕಾರಿರುವ ಅವರು, ತುಕ್ಡೆ-ತುಕ್ಡೆ ಗ್ಯಾಂಗ್ನ ಭಾಗವಾಗಿರುವ, ಸಂಕುಚಿತ ಮನೋಭಾವದ ಮತ್ತು ವರ್ಷಗಳಿಂದ ರಾಜ್ಯ ಮತ್ತು ದೇಶವನ್ನು ದಾರಿ ತಪ್ಪಿಸುತ್ತಿರುವ ಶಕ್ತಿಗಳು ನಿರಂತರವಾಗಿ ಸೋಲುತ್ತಿವೆ. ಎಲ್ಲರೂ ಕೊಳಕು ತಂತ್ರಗಳನ್ನು ಬಳಸಿ ಒಂದಾಗುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.</p><p>ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ಚುನಾವಣೆಗಳ ಫಲಿತಾಂಶಗಳು 2024ರ ಲೋಕಸಭಾ ಚುನಾವಣೆಯ ಹಾದಿಯಲ್ಲಿ ಸಾಗಿವೆ ಎಂದು ಅವರು ಹೇಳಿದ್ದಾರೆ.</p>.Delhi Results Highlights: ಬಿಜೆಪಿಗೆ 48 ಸ್ಥಾನ; 22 ಕಡೆ ಗೆದ್ದ ಎಎಪಿ.<p>ಜನರನ್ನು ದಾರಿತಪ್ಪಿಸಲು ವಿರೋಧ ಪಕ್ಷಗಳು ದೇಶದಾದ್ಯಂತ ಕುತಂತ್ರ ಮಾಡುತ್ತಿದ್ದಾರೆ. ಚುನಾವಣಾ ಫಲಿತಾಂಶ ಅದಕ್ಕೆ ಪಾಠವಾಗಿದೆ. ಅವರು ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಯಾದವ್ ಹೇಳಿದ್ದಾರೆ.</p> .Delhi Election Results Live | ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ತುಕ್ಡೆ-ತುಕ್ಡೆ ಗ್ಯಾಂಗ್ನ ನಾಯಕರು ಹಾಗೂ ಸಂಕುಚಿತ ಮನಸ್ಥಿತಿ ಇರುವವರು ಸತತವಾಗಿ ಸೋಲನುಭವಿಸುತ್ತಿದ್ದಾರೆ ಎಂದು ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.</p><p>ಇಂದೋರ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಚುನಾವಣೆಯಲ್ಲಿ ಪದೇ ಪದೇ ಸೋಲುತ್ತಿದ್ದು, ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.</p>.Delhi Election Results: ಮನೀಶ್ ಸಿಸೋಡಿಯಾಗೆ ಸೋಲು.<p>ವಿಪಕ್ಷಗಳ ಇಂಡಿಯಾ ಒಕ್ಕೂಟದ ವಿರುದ್ಧ ಕಿಡಿ ಕಾರಿರುವ ಅವರು, ತುಕ್ಡೆ-ತುಕ್ಡೆ ಗ್ಯಾಂಗ್ನ ಭಾಗವಾಗಿರುವ, ಸಂಕುಚಿತ ಮನೋಭಾವದ ಮತ್ತು ವರ್ಷಗಳಿಂದ ರಾಜ್ಯ ಮತ್ತು ದೇಶವನ್ನು ದಾರಿ ತಪ್ಪಿಸುತ್ತಿರುವ ಶಕ್ತಿಗಳು ನಿರಂತರವಾಗಿ ಸೋಲುತ್ತಿವೆ. ಎಲ್ಲರೂ ಕೊಳಕು ತಂತ್ರಗಳನ್ನು ಬಳಸಿ ಒಂದಾಗುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.</p><p>ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ಚುನಾವಣೆಗಳ ಫಲಿತಾಂಶಗಳು 2024ರ ಲೋಕಸಭಾ ಚುನಾವಣೆಯ ಹಾದಿಯಲ್ಲಿ ಸಾಗಿವೆ ಎಂದು ಅವರು ಹೇಳಿದ್ದಾರೆ.</p>.Delhi Results Highlights: ಬಿಜೆಪಿಗೆ 48 ಸ್ಥಾನ; 22 ಕಡೆ ಗೆದ್ದ ಎಎಪಿ.<p>ಜನರನ್ನು ದಾರಿತಪ್ಪಿಸಲು ವಿರೋಧ ಪಕ್ಷಗಳು ದೇಶದಾದ್ಯಂತ ಕುತಂತ್ರ ಮಾಡುತ್ತಿದ್ದಾರೆ. ಚುನಾವಣಾ ಫಲಿತಾಂಶ ಅದಕ್ಕೆ ಪಾಠವಾಗಿದೆ. ಅವರು ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಯಾದವ್ ಹೇಳಿದ್ದಾರೆ.</p> .Delhi Election Results Live | ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>