<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತರೂಢ ಆಮ್ ಆದ್ಮಿ ಪಕ್ಷವು (ಎಎಪಿ) ನೆಲಕಚ್ಚಿದೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 48 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ, 26 ವರ್ಷಗಳ ಬಳಿಕ ಅಧಿಕಾರ ಹಿಡಿಯಲು ಸಜ್ಜಾಗಿದೆ. </p><p>ಮತ್ತೊಂದೆಡೆ ಎಎಪಿ 22 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಹಿನ್ನಡೆಗೆ ಕಾರಣವಾಗಿದೆ. </p><p>ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಸೋಲಿನ ಆಘಾತ ಎದುರಿಸಿರುವುದು ಪಕ್ಷವು ತೀವ್ರ ಮುಜುಗರಕ್ಕೊಳಗಾಗಿದೆ. </p>.Delhi Results | ದೆಹಲಿಯ ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ: ಕೇಜ್ರಿವಾಲ್.ಬಿಜೆಪಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರಿಯಲಿದೆ: ಆತಿಶಿ.<p><strong>ಎಎಪಿ ಸೋಲಿಗೆ ಪ್ರಮುಖ ಕಾರಣಗಳೇನು?</strong></p><p>ವಿಶ್ಲೇಷಕರ ಪ್ರಕಾರ, ಆಡಳಿತದಲ್ಲಿರುವ ಎಎಪಿ ನಾಯಕರ ವಿರುದ್ಧದ ನಿರಂತರವಾಗಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ.</p><p>ಕಳಪೆ ಮೂಲಸೌಕರ್ಯ ಮತ್ತು ಕೆಟ್ಟ ಆಡಳಿತವು ಎಎಪಿಗೆ ಮುಳುವಾಗಿ ಪರಿಣಮಿಸಿದೆ. ಎಎಪಿ ನಾಯಕರು ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ನಿರಂತರ ವಾಕ್ಸಮರದಲ್ಲಿ ಭಾಗಿಯಾಗಿದ್ದರು. ಮತ್ತೊಂದೆಡೆ ಬಿಜೆಪಿ ಉತ್ಸಾಹದೊಂದಿಗೆ ಪ್ರಚಾರದಲ್ಲಿ ಭಾಗವಹಿಸಿತ್ತು. ಇದು ಫಲಿತಾಂಶದಲ್ಲಿ ಎದ್ದು ಕಾಣಿಸುತ್ತಿದೆ. </p><p>2015 ಹಾಗೂ 2020ರ ವಿಧಾನಸಭೆ ಚುನಾವಣೆಗಳಲ್ಲಿ ಎಎಪಿ ಅಭೂತಪೂರ್ವ ಸಾಧನೆ ಮಾಡಿತ್ತು. ಅನುಕ್ರಮವಾಗಿ 67 ಹಾಗೂ 62 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿತ್ತು. ಈಗ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಬೇಕಿದೆ. </p><p>ಹಲವು ಜನಪರ ಘೋಷಣೆಗಳನ್ನು ಮಾಡಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೆಚ್ಚಿನ ಜನಪ್ರಿಯತೆ ಸಾಧಿಸಿದ್ದರು. ಆದರೆ ದೆಹಲಿ ಅಬಕಾರಿ ನೀತಿ ಹಗರಣದಂತಹ ಆರೋಪಗಳು ಇಕ್ಕಟ್ಟಿಗೆ ಸಿಲುಕಿಸಿದ್ದವು. ಇದೇ ಪ್ರಕರಣದಲ್ಲಿ ಜೈಲಿಗೆ ಹೋಗಬೇಕಾಯಿತು. </p><p>ದೆಹಲಿ ಸಿಎಂ ಅಧಿಕೃತ ಬಂಗಲೆಯ ನವೀಕರಣದಲ್ಲೂ ಭಾರಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿತ್ತು. ನಿರಂತರವಾದ ಭ್ರಷ್ಟಾಚಾರ ಆರೋಪಗಳಿಂದಾಗಿ ಜನಪ್ರಿಯತೆ ಕುಸಿಯಲು ಕಾರಣವಾಯಿತು ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. </p><p>ಕೇಜ್ರಿವಾಲ್ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನವನ್ನು ಆತಿಶಿ ಅವರಿಗೆ ಬಿಟ್ಟುಕೊಟ್ಟರೂ ಹೆಚ್ಚಿನ ಪ್ರಯೋಜನ ಉಂಟಾಗಲಿಲ್ಲ. 'ಇಂಡಿಯಾ' ಮೈತ್ರಿಕೂಟದೊಂದಿಗಿನ ವಿಶೇಷವಾಗಿಯೂ ಕಾಂಗ್ರೆಸ್ ಪಕ್ಷದೊಂದಿಗಿನ ಭಿನ್ನಾಭಿಪ್ರಾಯವು ಹಿನ್ನಡೆಗೆ ಕಾರಣವಾಯಿತು. </p>.Delhi: ಬಿಜೆಪಿಗೆ ಭಾರಿ ಬಹುಮತ, ಮುಗ್ಗರಿಸಿದ ಎಎಪಿ; ಖಾತೆ ತೆರೆಯದ ಕಾಂಗ್ರೆಸ್.ದೆಹಲಿಯಲ್ಲಿ ಬಿಜೆಪಿಗೆ ಗದ್ದುಗೆ, ಎಎಪಿಗೆ ಹಿನ್ನಡೆ: ನಿಜವಾಯ್ತು ಮತಗಟ್ಟೆ ಸಮೀಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತರೂಢ ಆಮ್ ಆದ್ಮಿ ಪಕ್ಷವು (ಎಎಪಿ) ನೆಲಕಚ್ಚಿದೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 48 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ, 26 ವರ್ಷಗಳ ಬಳಿಕ ಅಧಿಕಾರ ಹಿಡಿಯಲು ಸಜ್ಜಾಗಿದೆ. </p><p>ಮತ್ತೊಂದೆಡೆ ಎಎಪಿ 22 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಹಿನ್ನಡೆಗೆ ಕಾರಣವಾಗಿದೆ. </p><p>ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಸೋಲಿನ ಆಘಾತ ಎದುರಿಸಿರುವುದು ಪಕ್ಷವು ತೀವ್ರ ಮುಜುಗರಕ್ಕೊಳಗಾಗಿದೆ. </p>.Delhi Results | ದೆಹಲಿಯ ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ: ಕೇಜ್ರಿವಾಲ್.ಬಿಜೆಪಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರಿಯಲಿದೆ: ಆತಿಶಿ.<p><strong>ಎಎಪಿ ಸೋಲಿಗೆ ಪ್ರಮುಖ ಕಾರಣಗಳೇನು?</strong></p><p>ವಿಶ್ಲೇಷಕರ ಪ್ರಕಾರ, ಆಡಳಿತದಲ್ಲಿರುವ ಎಎಪಿ ನಾಯಕರ ವಿರುದ್ಧದ ನಿರಂತರವಾಗಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ.</p><p>ಕಳಪೆ ಮೂಲಸೌಕರ್ಯ ಮತ್ತು ಕೆಟ್ಟ ಆಡಳಿತವು ಎಎಪಿಗೆ ಮುಳುವಾಗಿ ಪರಿಣಮಿಸಿದೆ. ಎಎಪಿ ನಾಯಕರು ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ನಿರಂತರ ವಾಕ್ಸಮರದಲ್ಲಿ ಭಾಗಿಯಾಗಿದ್ದರು. ಮತ್ತೊಂದೆಡೆ ಬಿಜೆಪಿ ಉತ್ಸಾಹದೊಂದಿಗೆ ಪ್ರಚಾರದಲ್ಲಿ ಭಾಗವಹಿಸಿತ್ತು. ಇದು ಫಲಿತಾಂಶದಲ್ಲಿ ಎದ್ದು ಕಾಣಿಸುತ್ತಿದೆ. </p><p>2015 ಹಾಗೂ 2020ರ ವಿಧಾನಸಭೆ ಚುನಾವಣೆಗಳಲ್ಲಿ ಎಎಪಿ ಅಭೂತಪೂರ್ವ ಸಾಧನೆ ಮಾಡಿತ್ತು. ಅನುಕ್ರಮವಾಗಿ 67 ಹಾಗೂ 62 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿತ್ತು. ಈಗ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಬೇಕಿದೆ. </p><p>ಹಲವು ಜನಪರ ಘೋಷಣೆಗಳನ್ನು ಮಾಡಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೆಚ್ಚಿನ ಜನಪ್ರಿಯತೆ ಸಾಧಿಸಿದ್ದರು. ಆದರೆ ದೆಹಲಿ ಅಬಕಾರಿ ನೀತಿ ಹಗರಣದಂತಹ ಆರೋಪಗಳು ಇಕ್ಕಟ್ಟಿಗೆ ಸಿಲುಕಿಸಿದ್ದವು. ಇದೇ ಪ್ರಕರಣದಲ್ಲಿ ಜೈಲಿಗೆ ಹೋಗಬೇಕಾಯಿತು. </p><p>ದೆಹಲಿ ಸಿಎಂ ಅಧಿಕೃತ ಬಂಗಲೆಯ ನವೀಕರಣದಲ್ಲೂ ಭಾರಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿತ್ತು. ನಿರಂತರವಾದ ಭ್ರಷ್ಟಾಚಾರ ಆರೋಪಗಳಿಂದಾಗಿ ಜನಪ್ರಿಯತೆ ಕುಸಿಯಲು ಕಾರಣವಾಯಿತು ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. </p><p>ಕೇಜ್ರಿವಾಲ್ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನವನ್ನು ಆತಿಶಿ ಅವರಿಗೆ ಬಿಟ್ಟುಕೊಟ್ಟರೂ ಹೆಚ್ಚಿನ ಪ್ರಯೋಜನ ಉಂಟಾಗಲಿಲ್ಲ. 'ಇಂಡಿಯಾ' ಮೈತ್ರಿಕೂಟದೊಂದಿಗಿನ ವಿಶೇಷವಾಗಿಯೂ ಕಾಂಗ್ರೆಸ್ ಪಕ್ಷದೊಂದಿಗಿನ ಭಿನ್ನಾಭಿಪ್ರಾಯವು ಹಿನ್ನಡೆಗೆ ಕಾರಣವಾಯಿತು. </p>.Delhi: ಬಿಜೆಪಿಗೆ ಭಾರಿ ಬಹುಮತ, ಮುಗ್ಗರಿಸಿದ ಎಎಪಿ; ಖಾತೆ ತೆರೆಯದ ಕಾಂಗ್ರೆಸ್.ದೆಹಲಿಯಲ್ಲಿ ಬಿಜೆಪಿಗೆ ಗದ್ದುಗೆ, ಎಎಪಿಗೆ ಹಿನ್ನಡೆ: ನಿಜವಾಯ್ತು ಮತಗಟ್ಟೆ ಸಮೀಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>