<p><strong>ನವದೆಹಲಿ:</strong> 2020ರ ದೆಹಲಿ ಗಲಭೆ ಪ್ರಕರಣದ ಆರೋಪಿ, ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಬುಧವಾರ ಪೊಲೀಸ್ ಮೇಲ್ವಿಚಾರಣೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.</p><p>ತಾಹಿರ್ ಹುಸೇನ್ ಅವರು ಮುಸ್ತಫಾಬಾದ್ ಕ್ಷೇತ್ರದಿಂದ ಎಐಎಂಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್, ತಾಹಿರ್ ಹುಸೇನ್ ಅವರಿಗೆ ಆರು ದಿನಗಳ ಕಸ್ಟಡಿ ಪೆರೋಲ್ ನೀಡಿದೆ.</p><p>ಇಂದು ಬೆಳಿಗ್ಗೆ ತಿಹಾರ್ ಜೈಲಿನಿಂದ ಹೊರಬಂದ ಅವರು ಬಿಗಿ ಭದ್ರತೆಯಲ್ಲಿ ಮುಸ್ತಫಾಬಾದ್ನ ಪ್ರಮುಖ ರಸ್ತೆಗಳಲ್ಲಿ ಬೆಂಬಲಿಗರೊಂದಿಗೆ ಸಂವಾದ, ಪ್ರಚಾರ ಸಭೆಗಳನ್ನು ನಡೆಸಿದ್ದಾರೆ.</p><p>2020ರಲ್ಲಿ ಗಲಭೆ ನಡೆದಿದ್ದ ಕರವಾಲ್ ನಗರದ ತಮ್ಮ ನಿವಾಸಕ್ಕೆ ಭೇಟಿ ನೀಡುವುದು ಸೇರಿದಂತೆ ತಮ್ಮ ವಿರುದ್ಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಕಟ್ಟಪ್ಪಣೆ ವಿಧಿಸಿದೆ.</p><p>ಹುಸೇನ್ ಅವರಿಗೆ ಜನವರಿ 29ರಿಂದ ಫೆಬ್ರುವರಿ 3ರವರೆಗೆ ಸುಪ್ರೀಂ ಕೋರ್ಟ್ ಕಸ್ಟಡಿ ಪೆರೋಲ್ ನೀಡಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಪ್ರತಿದಿನ 12 ಗಂಟೆಗಳ ಕಾಲ ಪೊಲೀಸರ ಮೇಲ್ವಿಚಾರಣೆಯಲ್ಲಿ ಪ್ರಚಾರ ನಡೆಸಲು ಅವಕಾಶ ನೀಡಿದೆ.</p><p>ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠವು ಪೊಲೀಸ್ ಬೆಂಗಾವಲು ಸೇರಿದಂತೆ ಭದ್ರತಾ ವೆಚ್ಚಗಳನ್ನು ಭರಿಸಲು ಹುಸೇನ್ ಅವರು ದಿನಕ್ಕೆ ₹2.47 ಲಕ್ಷ ಠೇವಣಿ ಇಡಬೇಕು ಎಂದು ತೀರ್ಪು ನೀಡಿದೆ.</p><p>ಮುಸ್ತಫಾಬಾದ್ ಕ್ಷೇತ್ರದಲ್ಲಿ 1,55,706 ಪುರುಷ ಮತದಾರರು, 1,33,193 ಮಹಿಳಾ ಮತದಾರರು ಮತ್ತು ಮೂವರು ತೃತೀಯಲಿಂಗಿ ಮತದಾರರು ಸೇರಿದಂತೆ 2,88,902 ನೋಂದಾಯಿತ ಮತದಾರರಿದ್ದಾರೆ.</p><p>ಮುಸ್ತಫಾಬಾದ್ ಕ್ಷೇತ್ರದಿಂದ ಎಎಪಿ, ಆದಿಲ್ ಅಹ್ಮದ್ ಖಾನ್ ಅವರಿಗೆ ಟಿಕೆಟ್ ನೀಡಿದೆ. ಇತ್ತ ಬಿಜೆಪಿ ಹಾಲಿ ಶಾಸಕರಾದ ಮೋಹನ್ ಸಿಂಗ್ ಬಿಶ್ತ್ ಅವರನ್ನು ಕಣಕ್ಕಿಳಿಸಿದೆ.</p><p>70 ಸದಸ್ಯ ಬಲದ ದೆಹಲಿಯಲ್ಲಿ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.</p>.Delhi Polls: ಶಿವಸೇನಾ(UBT) ತಟಸ್ಥ; ಕಾಂಗ್ರೆಸ್, AAP ಪರ ಪ್ರಚಾರ ಇಲ್ಲ; ರಾವುತ್.Delhi assembly polls: ಚುನಾವಣೆ ಗೀತೆ ಬಿಡುಗಡೆ ಮಾಡಿದ ಬಿಜೆಪಿ.Delhi Polls | AAP ಗೆದ್ದರೆ ಸಿಸೋಡಿಯಾ ಮತ್ತೆ ಡಿಸಿಎಂ ಆಗಲಿದ್ದಾರೆ: ಕೇಜ್ರಿವಾಲ್.Delhi Polls | ಇದು ಇಡೀ ದೇಶದ ಚುನಾವಣೆ, 2 ಸಿದ್ಧಾಂತಗಳ ನಡುವಿನ ಹೋರಾಟ: ಕೇಜ್ರಿ.Delhi Polls| 11 ‘ಭ್ರಷ್ಟ’ರ ಪಟ್ಟಿಯಲ್ಲಿ ರಾಹುಲ್: ಪೋಸ್ಟರ್ ಬಿಡುಗಡೆ ಮಾಡಿದ AAP.Delhi Polls | AAP ಈಗ ‘ಅಲ್ಕೋಹಾಲ್ ಅಫೆಕ್ಟೆಡ್ ಪಾರ್ಟಿ’ ಆಗಿದೆ: ಪವನ್ ಖೇರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2020ರ ದೆಹಲಿ ಗಲಭೆ ಪ್ರಕರಣದ ಆರೋಪಿ, ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಬುಧವಾರ ಪೊಲೀಸ್ ಮೇಲ್ವಿಚಾರಣೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.</p><p>ತಾಹಿರ್ ಹುಸೇನ್ ಅವರು ಮುಸ್ತಫಾಬಾದ್ ಕ್ಷೇತ್ರದಿಂದ ಎಐಎಂಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್, ತಾಹಿರ್ ಹುಸೇನ್ ಅವರಿಗೆ ಆರು ದಿನಗಳ ಕಸ್ಟಡಿ ಪೆರೋಲ್ ನೀಡಿದೆ.</p><p>ಇಂದು ಬೆಳಿಗ್ಗೆ ತಿಹಾರ್ ಜೈಲಿನಿಂದ ಹೊರಬಂದ ಅವರು ಬಿಗಿ ಭದ್ರತೆಯಲ್ಲಿ ಮುಸ್ತಫಾಬಾದ್ನ ಪ್ರಮುಖ ರಸ್ತೆಗಳಲ್ಲಿ ಬೆಂಬಲಿಗರೊಂದಿಗೆ ಸಂವಾದ, ಪ್ರಚಾರ ಸಭೆಗಳನ್ನು ನಡೆಸಿದ್ದಾರೆ.</p><p>2020ರಲ್ಲಿ ಗಲಭೆ ನಡೆದಿದ್ದ ಕರವಾಲ್ ನಗರದ ತಮ್ಮ ನಿವಾಸಕ್ಕೆ ಭೇಟಿ ನೀಡುವುದು ಸೇರಿದಂತೆ ತಮ್ಮ ವಿರುದ್ಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಕಟ್ಟಪ್ಪಣೆ ವಿಧಿಸಿದೆ.</p><p>ಹುಸೇನ್ ಅವರಿಗೆ ಜನವರಿ 29ರಿಂದ ಫೆಬ್ರುವರಿ 3ರವರೆಗೆ ಸುಪ್ರೀಂ ಕೋರ್ಟ್ ಕಸ್ಟಡಿ ಪೆರೋಲ್ ನೀಡಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಪ್ರತಿದಿನ 12 ಗಂಟೆಗಳ ಕಾಲ ಪೊಲೀಸರ ಮೇಲ್ವಿಚಾರಣೆಯಲ್ಲಿ ಪ್ರಚಾರ ನಡೆಸಲು ಅವಕಾಶ ನೀಡಿದೆ.</p><p>ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠವು ಪೊಲೀಸ್ ಬೆಂಗಾವಲು ಸೇರಿದಂತೆ ಭದ್ರತಾ ವೆಚ್ಚಗಳನ್ನು ಭರಿಸಲು ಹುಸೇನ್ ಅವರು ದಿನಕ್ಕೆ ₹2.47 ಲಕ್ಷ ಠೇವಣಿ ಇಡಬೇಕು ಎಂದು ತೀರ್ಪು ನೀಡಿದೆ.</p><p>ಮುಸ್ತಫಾಬಾದ್ ಕ್ಷೇತ್ರದಲ್ಲಿ 1,55,706 ಪುರುಷ ಮತದಾರರು, 1,33,193 ಮಹಿಳಾ ಮತದಾರರು ಮತ್ತು ಮೂವರು ತೃತೀಯಲಿಂಗಿ ಮತದಾರರು ಸೇರಿದಂತೆ 2,88,902 ನೋಂದಾಯಿತ ಮತದಾರರಿದ್ದಾರೆ.</p><p>ಮುಸ್ತಫಾಬಾದ್ ಕ್ಷೇತ್ರದಿಂದ ಎಎಪಿ, ಆದಿಲ್ ಅಹ್ಮದ್ ಖಾನ್ ಅವರಿಗೆ ಟಿಕೆಟ್ ನೀಡಿದೆ. ಇತ್ತ ಬಿಜೆಪಿ ಹಾಲಿ ಶಾಸಕರಾದ ಮೋಹನ್ ಸಿಂಗ್ ಬಿಶ್ತ್ ಅವರನ್ನು ಕಣಕ್ಕಿಳಿಸಿದೆ.</p><p>70 ಸದಸ್ಯ ಬಲದ ದೆಹಲಿಯಲ್ಲಿ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.</p>.Delhi Polls: ಶಿವಸೇನಾ(UBT) ತಟಸ್ಥ; ಕಾಂಗ್ರೆಸ್, AAP ಪರ ಪ್ರಚಾರ ಇಲ್ಲ; ರಾವುತ್.Delhi assembly polls: ಚುನಾವಣೆ ಗೀತೆ ಬಿಡುಗಡೆ ಮಾಡಿದ ಬಿಜೆಪಿ.Delhi Polls | AAP ಗೆದ್ದರೆ ಸಿಸೋಡಿಯಾ ಮತ್ತೆ ಡಿಸಿಎಂ ಆಗಲಿದ್ದಾರೆ: ಕೇಜ್ರಿವಾಲ್.Delhi Polls | ಇದು ಇಡೀ ದೇಶದ ಚುನಾವಣೆ, 2 ಸಿದ್ಧಾಂತಗಳ ನಡುವಿನ ಹೋರಾಟ: ಕೇಜ್ರಿ.Delhi Polls| 11 ‘ಭ್ರಷ್ಟ’ರ ಪಟ್ಟಿಯಲ್ಲಿ ರಾಹುಲ್: ಪೋಸ್ಟರ್ ಬಿಡುಗಡೆ ಮಾಡಿದ AAP.Delhi Polls | AAP ಈಗ ‘ಅಲ್ಕೋಹಾಲ್ ಅಫೆಕ್ಟೆಡ್ ಪಾರ್ಟಿ’ ಆಗಿದೆ: ಪವನ್ ಖೇರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>