<p><strong>ನವದೆಹಲಿ:</strong> ‘ಭ್ರಷ್ಟಾಚಾರಿಗಳು’ ಎಂಬ ಶೀರ್ಷಿಕೆಯೊಂದಿಗೆ 11 ನಾಯಕರ ಭಾವಚಿತ್ರಗಳುಳ್ಳ ಭಿತ್ತಿಪತ್ರವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾವಚಿತ್ರಗಳು ಈ ಭಿತ್ರಿಪತ್ರದಲ್ಲಿವೆ. </p><p>‘ರಾಹುಲ್ ಗಾಂಧಿ ಅವರ ಟೀಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಅರವಿಂದ ಕೇಜ್ರಿವಾಲ್ ಹೇಳಿಕೆ ನೀಡಿದ್ದ ಮಾರನೇ ದಿನವೇ ಎಎಪಿ ಈ ಭಿತ್ತಿಪತ್ರವನ್ನು ಬಿಡುಗಡೆ ಮಾಡಿರುವುದು ಗಮನಾರ್ಹ.</p><p>ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ, ಬಿಜೆಪಿ ನಾಯಕರಾದ ವಿರೇಂದ್ರ ಸಚ್ದೇವ, ಅನುರಾಗ್ ಠಾಕೂರ್, ಪರ್ವೇಶ್ ವರ್ಮಾ, ವಿಜೇಂದರ್ ಗುಪ್ತಾ, ರಮೇಶ್ ಬಿಢೂಡಿ ಮತ್ತು ಕಾಂಗ್ರೆಸ್ ಮುಖಂಡರಾದ ಅಜಯ್ ಮಾಕನ್, ಸಂದೀಪ್ ದೀಕ್ಷಿತ್ ಚಿತ್ರಗಳೂ ಇವೆ.</p><p>ಭಿತ್ತಿಪತ್ರದ ಮೇಲೆ ಕೇಜ್ರಿವಾಲ್ ಮತ್ತು ಅವರ ಪತ್ನಿ ಸುನಿತಾ ನಡೆದುಬರುತ್ತಿರುವ ಭಂಗಿಯ ಚಿತ್ರವಿದ್ದು, ‘ಕೇಜ್ರಿವಾಲ್ರ ಪ್ರಾಮಾಣಿಕತೆ ಭ್ರಷ್ಟಾಚಾರಿಗಳಿಗೆ ಸಮಸ್ಯೆ ತರಲಿದೆ’ ಎಂಬ ಅಡಿಬರಹ ಹೊಂದಿದೆ.</p><p>ಕಾಂಗ್ರೆಸ್ ಮತ್ತು ಬಿಜೆಪಿ ಗೋಪ್ಯ ಒಪ್ಪಂದ ಮಾಡಿಕೊಂಡಿವೆ ಎಂದು ಕೇಜ್ರಿವಾಲ್ ಹಿಂದೆ ಆರೋಪಿಸಿದ್ದರು. ಆದರೆ, ರಾಹುಲ್ಗಾಂಧಿ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ನೇರವಾಗಿ ಪ್ರತಿಕ್ರಿಯಿಸಿಲ್ಲ.</p><p>ಭ್ರಷ್ಟರ ಪಟ್ಟಿಯಲ್ಲಿ ರಾಹುಲ್ ಹೆಸರು ಸೇರಿಸಿ ಈಗ ಭಿತ್ತಿಪತ್ರ ಬಿಡುಗಡೆ ಮಾಡಿರುವುದು, ರಾಷ್ಟ್ರೀಯ ಮಟ್ಟದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಮೇಲೆಯೂ ಪರಿಣಾಮ ಬೀರಬಹುದು ಎನ್ನಲಾಗಿದೆ.</p><p>ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮತ್ತು ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿ ಆಲ್ಕಾ ಲಾಂಬಾ ಅವರು, ‘ಇಂಡಿಯಾ’ ಮೈತ್ರಿಕೂಟ ತೊರೆಯುವಂತೆ ಎಎಪಿಗೆ ಸವಾಲೆಸೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಭ್ರಷ್ಟಾಚಾರಿಗಳು’ ಎಂಬ ಶೀರ್ಷಿಕೆಯೊಂದಿಗೆ 11 ನಾಯಕರ ಭಾವಚಿತ್ರಗಳುಳ್ಳ ಭಿತ್ತಿಪತ್ರವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾವಚಿತ್ರಗಳು ಈ ಭಿತ್ರಿಪತ್ರದಲ್ಲಿವೆ. </p><p>‘ರಾಹುಲ್ ಗಾಂಧಿ ಅವರ ಟೀಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಅರವಿಂದ ಕೇಜ್ರಿವಾಲ್ ಹೇಳಿಕೆ ನೀಡಿದ್ದ ಮಾರನೇ ದಿನವೇ ಎಎಪಿ ಈ ಭಿತ್ತಿಪತ್ರವನ್ನು ಬಿಡುಗಡೆ ಮಾಡಿರುವುದು ಗಮನಾರ್ಹ.</p><p>ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ, ಬಿಜೆಪಿ ನಾಯಕರಾದ ವಿರೇಂದ್ರ ಸಚ್ದೇವ, ಅನುರಾಗ್ ಠಾಕೂರ್, ಪರ್ವೇಶ್ ವರ್ಮಾ, ವಿಜೇಂದರ್ ಗುಪ್ತಾ, ರಮೇಶ್ ಬಿಢೂಡಿ ಮತ್ತು ಕಾಂಗ್ರೆಸ್ ಮುಖಂಡರಾದ ಅಜಯ್ ಮಾಕನ್, ಸಂದೀಪ್ ದೀಕ್ಷಿತ್ ಚಿತ್ರಗಳೂ ಇವೆ.</p><p>ಭಿತ್ತಿಪತ್ರದ ಮೇಲೆ ಕೇಜ್ರಿವಾಲ್ ಮತ್ತು ಅವರ ಪತ್ನಿ ಸುನಿತಾ ನಡೆದುಬರುತ್ತಿರುವ ಭಂಗಿಯ ಚಿತ್ರವಿದ್ದು, ‘ಕೇಜ್ರಿವಾಲ್ರ ಪ್ರಾಮಾಣಿಕತೆ ಭ್ರಷ್ಟಾಚಾರಿಗಳಿಗೆ ಸಮಸ್ಯೆ ತರಲಿದೆ’ ಎಂಬ ಅಡಿಬರಹ ಹೊಂದಿದೆ.</p><p>ಕಾಂಗ್ರೆಸ್ ಮತ್ತು ಬಿಜೆಪಿ ಗೋಪ್ಯ ಒಪ್ಪಂದ ಮಾಡಿಕೊಂಡಿವೆ ಎಂದು ಕೇಜ್ರಿವಾಲ್ ಹಿಂದೆ ಆರೋಪಿಸಿದ್ದರು. ಆದರೆ, ರಾಹುಲ್ಗಾಂಧಿ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ನೇರವಾಗಿ ಪ್ರತಿಕ್ರಿಯಿಸಿಲ್ಲ.</p><p>ಭ್ರಷ್ಟರ ಪಟ್ಟಿಯಲ್ಲಿ ರಾಹುಲ್ ಹೆಸರು ಸೇರಿಸಿ ಈಗ ಭಿತ್ತಿಪತ್ರ ಬಿಡುಗಡೆ ಮಾಡಿರುವುದು, ರಾಷ್ಟ್ರೀಯ ಮಟ್ಟದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಮೇಲೆಯೂ ಪರಿಣಾಮ ಬೀರಬಹುದು ಎನ್ನಲಾಗಿದೆ.</p><p>ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮತ್ತು ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿ ಆಲ್ಕಾ ಲಾಂಬಾ ಅವರು, ‘ಇಂಡಿಯಾ’ ಮೈತ್ರಿಕೂಟ ತೊರೆಯುವಂತೆ ಎಎಪಿಗೆ ಸವಾಲೆಸೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>