<p><strong>ನವದೆಹಲಿ:</strong> ನಗರದಾದ್ಯಂತ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ಬಂಕ್ಗಳು ನಿಲ್ಲಿಸಲಿದೆ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ.</p><p>ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ವಾಹನಗಳ ಹೊರಸೂಸುವಿಕೆ ಮತ್ತು ಮಾಲಿನ್ಯವನ್ನು ತಡೆಯಲು ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಿರ್ಸಾ ಹೇಳಿದ್ದಾರೆ.</p>.ವಾಯು ಮಾಲಿನ್ಯ: ದೆಹಲಿ ನಿವಾಸಿಗಳಿಗೆ ಆರೋಗ್ಯ ವಿಮೆ ದುಬಾರಿ?. <p>ಹಳೆಯ ವಾಹನಗಳ ಮೇಲೆ ನಿರ್ಬಂಧ, ಕಡ್ಡಾಯ ಹೊಗೆ ವಿರೋಧಿ ಕ್ರಮಗಳು ಮತ್ತು ಸಾರ್ವಜನಿಕ ಸಾರಿಗೆಗೆಗಳನ್ನು ವಿದ್ಯುತ್ ಚಾಲಿತವಾಗಿ ಪರಿವರ್ತಿಸುವುದು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.</p><p>‘15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಗುರುತಿಸಲು ನಾವು ಪೆಟ್ರೋಲ್ ಪಂಪ್ಗಳಲ್ಲಿ ಗ್ಯಾಜೆಟ್ಗಳನ್ನು ಸ್ಥಾಪಿಸುತ್ತೇವೆ. 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಇಂಧನ ನೀಡಲಾಗುವುದಿಲ್ಲ’ ಎಂದು ಸಭೆಯ ನಂತರ ಸಿರ್ಸಾ ಹೇಳಿದ್ದಾರೆ.</p>.ದೆಹಲಿ | ವಾಯು ಮಾಲಿನ್ಯ ತಗ್ಗಿಸಲು ಟ್ರಕ್–ಮೌಂಟ್ ವಾಟರ್ ಸ್ಪ್ರಿಂಕ್ಲರ್ ಬಳಕೆ.<p>ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>ಹಳೆಯ ವಾಹನಗಳಿಗೆ ಇಂಧನ ಪೂರೈಕೆಯನ್ನು ನಿರ್ಬಂಧಿಸುವುದರ ಜೊತೆಗೆ, ರಾಜಧಾನಿಯಲ್ಲಿರುವ ಎಲ್ಲಾ ಬಹುಮಹಡಿ ಕಟ್ಟಡಗಳು, ಹೋಟೆಲ್ಗಳು ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ವಾಯು ಮಾಲಿನ್ಯದ ಮಟ್ಟವನ್ನು ನಿಗ್ರಹಿಸಲು ಹೊಗೆ ನಿರೋಧಕಗಳನ್ನು ಅಳವಡಿಸಬೇಕು ಎಂದು ಸಿರ್ಸಾ ಹೇಳಿದ್ದಾರೆ.</p> .ವಾಯು ಮಾಲಿನ್ಯ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಗರದಾದ್ಯಂತ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ಬಂಕ್ಗಳು ನಿಲ್ಲಿಸಲಿದೆ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ.</p><p>ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ವಾಹನಗಳ ಹೊರಸೂಸುವಿಕೆ ಮತ್ತು ಮಾಲಿನ್ಯವನ್ನು ತಡೆಯಲು ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಿರ್ಸಾ ಹೇಳಿದ್ದಾರೆ.</p>.ವಾಯು ಮಾಲಿನ್ಯ: ದೆಹಲಿ ನಿವಾಸಿಗಳಿಗೆ ಆರೋಗ್ಯ ವಿಮೆ ದುಬಾರಿ?. <p>ಹಳೆಯ ವಾಹನಗಳ ಮೇಲೆ ನಿರ್ಬಂಧ, ಕಡ್ಡಾಯ ಹೊಗೆ ವಿರೋಧಿ ಕ್ರಮಗಳು ಮತ್ತು ಸಾರ್ವಜನಿಕ ಸಾರಿಗೆಗೆಗಳನ್ನು ವಿದ್ಯುತ್ ಚಾಲಿತವಾಗಿ ಪರಿವರ್ತಿಸುವುದು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.</p><p>‘15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಗುರುತಿಸಲು ನಾವು ಪೆಟ್ರೋಲ್ ಪಂಪ್ಗಳಲ್ಲಿ ಗ್ಯಾಜೆಟ್ಗಳನ್ನು ಸ್ಥಾಪಿಸುತ್ತೇವೆ. 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಇಂಧನ ನೀಡಲಾಗುವುದಿಲ್ಲ’ ಎಂದು ಸಭೆಯ ನಂತರ ಸಿರ್ಸಾ ಹೇಳಿದ್ದಾರೆ.</p>.ದೆಹಲಿ | ವಾಯು ಮಾಲಿನ್ಯ ತಗ್ಗಿಸಲು ಟ್ರಕ್–ಮೌಂಟ್ ವಾಟರ್ ಸ್ಪ್ರಿಂಕ್ಲರ್ ಬಳಕೆ.<p>ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p><p>ಹಳೆಯ ವಾಹನಗಳಿಗೆ ಇಂಧನ ಪೂರೈಕೆಯನ್ನು ನಿರ್ಬಂಧಿಸುವುದರ ಜೊತೆಗೆ, ರಾಜಧಾನಿಯಲ್ಲಿರುವ ಎಲ್ಲಾ ಬಹುಮಹಡಿ ಕಟ್ಟಡಗಳು, ಹೋಟೆಲ್ಗಳು ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ವಾಯು ಮಾಲಿನ್ಯದ ಮಟ್ಟವನ್ನು ನಿಗ್ರಹಿಸಲು ಹೊಗೆ ನಿರೋಧಕಗಳನ್ನು ಅಳವಡಿಸಬೇಕು ಎಂದು ಸಿರ್ಸಾ ಹೇಳಿದ್ದಾರೆ.</p> .ವಾಯು ಮಾಲಿನ್ಯ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>