ಈ ಕುರಿತು ಇ.ಡಿ ವಾದ ಆಲಿಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬಾವೇಜಾ ಅವರು, ಕವಿತಾ ಅವರ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ವಿಸ್ತರಿಸಿದರು. ಈ ಪ್ರಕರಣದ ಸಹ ಆರೋಪಿಗಳಾದ ಪ್ರಿನ್ಸ್, ದಾಮೋದರ್ ಮತ್ತು ಅರವಿಂದ ಸಿಂಗ್ ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಮೂವರು ಆರೋಪಿಗಳ ವಿರುದ್ಧ ಇ.ಡಿ ಚಾರ್ಜ್ಶೀಟ್ ಹಾಕಲಾಗಿದೆ. ಆದಾಗ್ಯೂ, ಅವರ ಬಂಧನ ಆಗಿರಲಿಲ್ಲ.