<p><strong>ನವದೆಹಲಿ</strong>: ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ನಾಯಕಿ ಕೆ. ಕವಿತಾ ಅವರು ದೆಹಲಿಯ ಅಬಕಾರಿ ನೀತಿ ಹಗರಣ ಸಂಬಂಧ ವಿಚಾರಣೆ ಎದುರಿಸಲು ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಶನಿವಾರ ಹಾಜರಾದರು.</p>.<p>ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಪುತ್ರಿಯಾದ ಕವಿತಾ ಅವರು ತುಘಲಕ್ ರಸ್ತೆಯಲ್ಲಿರುವ ತಮ್ಮ ತಂದೆಯ ಅಧಿಕೃತ ನಿವಾಸದಿಂದ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇ.ಡಿ ಪ್ರಧಾನ ಕಚೇರಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಂದರು.</p>.<p>ಕವಿತಾ ಅವರ ವಿಚಾರಣೆಯನ್ನು ವಿರೋಧಿಸಿ ಬಿಆರ್ಎಸ್ ಬೆಂಬಲಿಗರು ಇ.ಡಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ದೆಹಲಿ ಪೊಲೀಸರು ಮತ್ತು ಕೇಂದ್ರ ಅರೆಸೇನಾ ಪಡೆ ಸಿಬ್ಬಂದಿ ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಜಮಾಯಿಸಿದ್ದರು. </p>.<p>ಮಾರ್ಚ್ 9 ರಂದು ವಿಚಾರಣೆಗೆ ಹಾಜರಾಗುವಂತೆ ಕವಿತಾ ಅವರಿಗೆ ಇ.ಡಿ ಸಮನ್ಸ್ ನೀಡಿತ್ತು. ಆದರೆ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಆಗ್ರಹಿಸಿ ಅವರು ಅದೇ ದಿನ (ಶುಕ್ರವಾರ) ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದ ಕಾರಣ ಬೇರೊಂದು ದಿನ ನಿಗದಿಗೆ ಕೋರಿದ್ದರು.</p>.<p>ಈ ಪ್ರಕರಣದಲ್ಲಿ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಅವರ ಬಂಧನದ ಬಳಿಕ ಕವಿತಾ ಅವರ ವಿಚಾರಣೆ ನಡೆದಿದೆ.</p>.<p>ಕವಿತಾ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿರುವ ಅರುಣ್ ರಾಮಚಂದ್ರನ್ ಪಿಳ್ಳೈ ಅವರನ್ನು ಇ.ಡಿ ಇತ್ತೀಚೆಗಷ್ಟೇ ಬಂಧಿಸಿತ್ತು. ಇದಕ್ಕೆ ಪೂರಕವಾಗಿ ಕವಿತಾ ಅವರ ವಿಚಾರಣೆಯನ್ನು ಇ.ಡಿ ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ನಾಯಕಿ ಕೆ. ಕವಿತಾ ಅವರು ದೆಹಲಿಯ ಅಬಕಾರಿ ನೀತಿ ಹಗರಣ ಸಂಬಂಧ ವಿಚಾರಣೆ ಎದುರಿಸಲು ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಶನಿವಾರ ಹಾಜರಾದರು.</p>.<p>ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಪುತ್ರಿಯಾದ ಕವಿತಾ ಅವರು ತುಘಲಕ್ ರಸ್ತೆಯಲ್ಲಿರುವ ತಮ್ಮ ತಂದೆಯ ಅಧಿಕೃತ ನಿವಾಸದಿಂದ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇ.ಡಿ ಪ್ರಧಾನ ಕಚೇರಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಂದರು.</p>.<p>ಕವಿತಾ ಅವರ ವಿಚಾರಣೆಯನ್ನು ವಿರೋಧಿಸಿ ಬಿಆರ್ಎಸ್ ಬೆಂಬಲಿಗರು ಇ.ಡಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ದೆಹಲಿ ಪೊಲೀಸರು ಮತ್ತು ಕೇಂದ್ರ ಅರೆಸೇನಾ ಪಡೆ ಸಿಬ್ಬಂದಿ ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಜಮಾಯಿಸಿದ್ದರು. </p>.<p>ಮಾರ್ಚ್ 9 ರಂದು ವಿಚಾರಣೆಗೆ ಹಾಜರಾಗುವಂತೆ ಕವಿತಾ ಅವರಿಗೆ ಇ.ಡಿ ಸಮನ್ಸ್ ನೀಡಿತ್ತು. ಆದರೆ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಆಗ್ರಹಿಸಿ ಅವರು ಅದೇ ದಿನ (ಶುಕ್ರವಾರ) ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದ ಕಾರಣ ಬೇರೊಂದು ದಿನ ನಿಗದಿಗೆ ಕೋರಿದ್ದರು.</p>.<p>ಈ ಪ್ರಕರಣದಲ್ಲಿ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಅವರ ಬಂಧನದ ಬಳಿಕ ಕವಿತಾ ಅವರ ವಿಚಾರಣೆ ನಡೆದಿದೆ.</p>.<p>ಕವಿತಾ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿರುವ ಅರುಣ್ ರಾಮಚಂದ್ರನ್ ಪಿಳ್ಳೈ ಅವರನ್ನು ಇ.ಡಿ ಇತ್ತೀಚೆಗಷ್ಟೇ ಬಂಧಿಸಿತ್ತು. ಇದಕ್ಕೆ ಪೂರಕವಾಗಿ ಕವಿತಾ ಅವರ ವಿಚಾರಣೆಯನ್ನು ಇ.ಡಿ ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>