<p class="title"><strong>ನವದೆಹಲಿ (ಪಿಟಿಐ)</strong>: ದೆಹಲಿಯ ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಹಾಗೂ ದುರ್ಬಳಕೆ ಆರೋಪಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ 35 ಕಡೆ ಏಕಕಾಲದಲ್ಲಿ ದಾಳಿ ನಡೆಸಿದರು.</p>.<p class="title">ದೆಹಲಿ, ಪಂಜಾಬ್, ಹೈದರಾಬಾದ್ನಲ್ಲಿಮದ್ಯ ವಿತರಕರು, ಕಂಪನಿಗಳು, ಭಾಗಿದಾರ ಸಂಸ್ಥೆಗಳಿಗೆ ಸೇರಿದ ವಿವಿಧೆಡೆ ದಾಳಿ ನಡೆಯಿತು. ಕೆಲ ಆರೋಪಿಗಳನ್ನು ತನಿಖೆಗೆ ಒಳಪಡಿಸಿದ್ದು, ದಾಖಲೆಗಳನ್ನೂ ವಶಕ್ಕೆ ಪಡೆಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಜಾರಿ ನಿರ್ದೇಶನಾಲಯವು ಈ ಹಗರಣಕ್ಕೆ ಸಂಬಂಧಿಸಿ ಇದುವರೆಗೂ ಸುಮಾರು 103 ದಾಳಿ ನಡೆಸಿದೆ. ಅಲ್ಲದೆ, ಇಂಡೊಸ್ಪಿರಿಟ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಉದ್ಯಮಿ ಸಮೀರ್ ಮಹಾಂದ್ರು ಅವರನ್ನೂ ಬಂಧಿಸಿದೆ.</p>.<p class="title">ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.</p>.<p class="title"><strong>ಕೆಟ್ಟ ರಾಜಕಾರಣ –ಕೇಜ್ರಿವಾಲ್</strong></p>.<p>ನವದೆಹಲಿ(ಪಿಟಿಐ): ಇ.ಡಿ ಅಧಿಕಾರಿಗಳು ಶುಕ್ರವಾರ ವಿವಿಧೆಡೆ ದಾಳಿ ನಡೆಸಿದ್ದಾರೆ. ಮನೀಶ್ ಸಿಸೋಡಿಯಾ ವಿರುದ್ಧ ಸಾಕ್ಷ್ಯ ಸಂಗ್ರಹಿಸುವ ಗುರಿ ಇದ್ದರೂ ಅಧಿಕಾರಿಗಳು ದಾಳಿಯಲ್ಲಿ ಏನೂ ಸಿಕ್ಕಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.</p>.<p>ಕೆಟ್ಟ ರಾಜಕಾರಣದ ಭಾಗವಾಗಿ ಸಿಬಿಐ ಮತ್ತು ಇ.ಡಿಗೆ ಸೇರಿದ ನೂರಾರು ಅಧಿಕಾರಿಗಳ ಸಮಯವನ್ನು ವ್ಯರ್ಥ ಮಾಡಲಾಗುತ್ತಿದೆ. ಇಂತಹ ಮನಸ್ಥಿತಿಯಿಂದ ದೇಶದ ಅಭಿವೃದ್ಧಿ ಹೇಗೆ ಸಾಧ್ಯ ಎಂದೂ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ)</strong>: ದೆಹಲಿಯ ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಹಾಗೂ ದುರ್ಬಳಕೆ ಆರೋಪಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ 35 ಕಡೆ ಏಕಕಾಲದಲ್ಲಿ ದಾಳಿ ನಡೆಸಿದರು.</p>.<p class="title">ದೆಹಲಿ, ಪಂಜಾಬ್, ಹೈದರಾಬಾದ್ನಲ್ಲಿಮದ್ಯ ವಿತರಕರು, ಕಂಪನಿಗಳು, ಭಾಗಿದಾರ ಸಂಸ್ಥೆಗಳಿಗೆ ಸೇರಿದ ವಿವಿಧೆಡೆ ದಾಳಿ ನಡೆಯಿತು. ಕೆಲ ಆರೋಪಿಗಳನ್ನು ತನಿಖೆಗೆ ಒಳಪಡಿಸಿದ್ದು, ದಾಖಲೆಗಳನ್ನೂ ವಶಕ್ಕೆ ಪಡೆಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಜಾರಿ ನಿರ್ದೇಶನಾಲಯವು ಈ ಹಗರಣಕ್ಕೆ ಸಂಬಂಧಿಸಿ ಇದುವರೆಗೂ ಸುಮಾರು 103 ದಾಳಿ ನಡೆಸಿದೆ. ಅಲ್ಲದೆ, ಇಂಡೊಸ್ಪಿರಿಟ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಉದ್ಯಮಿ ಸಮೀರ್ ಮಹಾಂದ್ರು ಅವರನ್ನೂ ಬಂಧಿಸಿದೆ.</p>.<p class="title">ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.</p>.<p class="title"><strong>ಕೆಟ್ಟ ರಾಜಕಾರಣ –ಕೇಜ್ರಿವಾಲ್</strong></p>.<p>ನವದೆಹಲಿ(ಪಿಟಿಐ): ಇ.ಡಿ ಅಧಿಕಾರಿಗಳು ಶುಕ್ರವಾರ ವಿವಿಧೆಡೆ ದಾಳಿ ನಡೆಸಿದ್ದಾರೆ. ಮನೀಶ್ ಸಿಸೋಡಿಯಾ ವಿರುದ್ಧ ಸಾಕ್ಷ್ಯ ಸಂಗ್ರಹಿಸುವ ಗುರಿ ಇದ್ದರೂ ಅಧಿಕಾರಿಗಳು ದಾಳಿಯಲ್ಲಿ ಏನೂ ಸಿಕ್ಕಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.</p>.<p>ಕೆಟ್ಟ ರಾಜಕಾರಣದ ಭಾಗವಾಗಿ ಸಿಬಿಐ ಮತ್ತು ಇ.ಡಿಗೆ ಸೇರಿದ ನೂರಾರು ಅಧಿಕಾರಿಗಳ ಸಮಯವನ್ನು ವ್ಯರ್ಥ ಮಾಡಲಾಗುತ್ತಿದೆ. ಇಂತಹ ಮನಸ್ಥಿತಿಯಿಂದ ದೇಶದ ಅಭಿವೃದ್ಧಿ ಹೇಗೆ ಸಾಧ್ಯ ಎಂದೂ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>