<p class="title"><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಜಾಹೀರಾತು ಕಂಪನಿಯ ನಿರ್ದೇಶಕರೊಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p class="bodytext">ಚಾರಿಯಟ್ ಪ್ರೊಡಕ್ಷನ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ರಾಜೇಶ್ ಜೋಶಿ ಬಂಧಿತ ಆರೋಪಿ. ಇವರ ವಿರುದ್ಧ ಇ.ಡಿಯು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಕೇಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p class="bodytext">ಅಬಕಾರಿ ಗುತ್ತಿಗೆ ಲಂಚದ ಹಣವು 2022ರಲ್ಲಿ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪರ ಪ್ರಚಾರಕ್ಕೆ ಬಳಕೆಯಾಗಿದೆ. ಇದರಲ್ಲಿ ಜಾಹೀರಾತು ಕಂಪನಿ ಹೊಂದಿರುವ ಸಂಪರ್ಕದ ಬಗ್ಗೆ ಕಂಪನಿಯ ಪ್ರವರ್ತಕ ರಾಜೇಶ್ ಜೋಶಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>ಅಬಕಾರಿ ಗುತ್ತಿಗೆಯಲ್ಲಿ ಪಡೆದ ₹100 ಕೋಟಿ ‘ಕಿಕ್ಬ್ಯಾಕ್’ನಲ್ಲಿ ಒಂದು ಭಾಗವು ಗೋವಾ ವಿಧಾನಸಭಾ ಚುನಾವಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ಪರ ಪ್ರಚಾರಕ್ಕೆ ಬಳಕೆಯಾಗಿದೆ ಎಂದು ಇ.ಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಸಿದ್ದಾರೆ. </p>.<p>ಇ.ಡಿ ಇದುವರೆಗೆ ಜೋಶಿ ಸೇರಿ ಎಂಟು ಆರೋಪಿಗಳನ್ನು ಬಂಧಿಸಿದೆ. ಪಂಜಾಬ್ನ ಶಿರೋಮಣಿ ಅಕಾಲಿ ದಳದ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾನನ್ನು ಮಂಗಳವಾರವಷ್ಟೇ ಬಂಧಿಸಲಾಗಿತ್ತು. </p>.<p>ದೂರವಾಣಿ ಕರೆ ವಿವರದ ದಾಖಲೆ (ಸಿಡಿಆರ್) ಪರಿಶೀಲನೆಯಲ್ಲಿ ಆರೋಪಿ ದಿನೇಶ್ ಅರೋರಾ ಜತೆಗೆ ರಾಜೇಶ್ ಜೋಶಿ ಸಂಪರ್ಕದಲ್ಲಿರುವುದು ಧೃಡಪಟ್ಟಿದೆ ಎಂದು ಇ.ಡಿ ಸಲ್ಲಿಸಿರುವ ಎರಡನೇ ಚಾರ್ಜ್ಶೀಟ್ನಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಜಾಹೀರಾತು ಕಂಪನಿಯ ನಿರ್ದೇಶಕರೊಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p class="bodytext">ಚಾರಿಯಟ್ ಪ್ರೊಡಕ್ಷನ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ರಾಜೇಶ್ ಜೋಶಿ ಬಂಧಿತ ಆರೋಪಿ. ಇವರ ವಿರುದ್ಧ ಇ.ಡಿಯು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಕೇಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p class="bodytext">ಅಬಕಾರಿ ಗುತ್ತಿಗೆ ಲಂಚದ ಹಣವು 2022ರಲ್ಲಿ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪರ ಪ್ರಚಾರಕ್ಕೆ ಬಳಕೆಯಾಗಿದೆ. ಇದರಲ್ಲಿ ಜಾಹೀರಾತು ಕಂಪನಿ ಹೊಂದಿರುವ ಸಂಪರ್ಕದ ಬಗ್ಗೆ ಕಂಪನಿಯ ಪ್ರವರ್ತಕ ರಾಜೇಶ್ ಜೋಶಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>ಅಬಕಾರಿ ಗುತ್ತಿಗೆಯಲ್ಲಿ ಪಡೆದ ₹100 ಕೋಟಿ ‘ಕಿಕ್ಬ್ಯಾಕ್’ನಲ್ಲಿ ಒಂದು ಭಾಗವು ಗೋವಾ ವಿಧಾನಸಭಾ ಚುನಾವಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ಪರ ಪ್ರಚಾರಕ್ಕೆ ಬಳಕೆಯಾಗಿದೆ ಎಂದು ಇ.ಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಸಿದ್ದಾರೆ. </p>.<p>ಇ.ಡಿ ಇದುವರೆಗೆ ಜೋಶಿ ಸೇರಿ ಎಂಟು ಆರೋಪಿಗಳನ್ನು ಬಂಧಿಸಿದೆ. ಪಂಜಾಬ್ನ ಶಿರೋಮಣಿ ಅಕಾಲಿ ದಳದ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾನನ್ನು ಮಂಗಳವಾರವಷ್ಟೇ ಬಂಧಿಸಲಾಗಿತ್ತು. </p>.<p>ದೂರವಾಣಿ ಕರೆ ವಿವರದ ದಾಖಲೆ (ಸಿಡಿಆರ್) ಪರಿಶೀಲನೆಯಲ್ಲಿ ಆರೋಪಿ ದಿನೇಶ್ ಅರೋರಾ ಜತೆಗೆ ರಾಜೇಶ್ ಜೋಶಿ ಸಂಪರ್ಕದಲ್ಲಿರುವುದು ಧೃಡಪಟ್ಟಿದೆ ಎಂದು ಇ.ಡಿ ಸಲ್ಲಿಸಿರುವ ಎರಡನೇ ಚಾರ್ಜ್ಶೀಟ್ನಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>