ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ನೀತಿ ಹಗರಣ: BRS ನಾಯಕಿ ಕವಿತಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ

Published 26 ಮಾರ್ಚ್ 2024, 7:26 IST
Last Updated 26 ಮಾರ್ಚ್ 2024, 7:26 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಮಂಗಳವಾರ) ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ.

ನ್ಯಾಯಾಲಯಕ್ಕೆ ಪ್ರವೇಶಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿ ಬಿಆರ್‌ಎಸ್‌ ನಾಯಕಿ, ‘ಇದು ಕಾನೂನುಬಾಹಿರ ಪ್ರಕರಣವಾಗಿದೆ. ನಾವು ಇದರ ವಿರುದ್ಧ ಹೋರಾಡುತ್ತೇವೆ. ಜೈ ತೆಲಂಗಾಣ’ ಎಂದು ಹೇಳಿದ್ದಾರೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ, 46 ವರ್ಷದ ಕವಿತಾ ಅವರನ್ನು ಇ.ಡಿ ಅಧಿಕಾರಿಗಳು ಮಾರ್ಚ್ 15ರಂದು ಹೈದರಾಬಾದ್‌ನ ಅವರ ನಿವಾಸದಲ್ಲಿಯೇ ಬಂಧಿಸಿತ್ತು. ‌ಕವಿತಾ ಅವರನ್ನು ಮಾರ್ಚ್ 23ರವರೆಗೆ ಇ.ಡಿ ವಶಕ್ಕೆ ಒಪ್ಪಿಸಲಾಗಿತ್ತು.

ಕೆ.ಕವಿತಾ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ಮಾರ್ಚ್ 26ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಜಾರಿ ನಿರ್ದೇಶನಾಲಯಕ್ಕೆ ಮಾರ್ಚ್‌ 23ರಂದು (ಶನಿವಾರ) ಅನುಮತಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT