ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ದೋಷಮುಕ್ತಳಾಗಿ ಹೊರಬರುತ್ತೇನೆ- BRS ನಾಯಕಿ ಕವಿತಾ

Published 26 ಮಾರ್ಚ್ 2024, 7:27 IST
Last Updated 26 ಮಾರ್ಚ್ 2024, 7:27 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೋಷಮುಕ್ತಳಾಗಿ ಹೊರ ಬರುತ್ತೇನೆ ಎಂದು ಬಿಆರ್‌ಎಸ್‌ ನಾಯಕಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಹೇಳಿದ್ದಾರೆ.

ಇದು ಹಣ ಅಕ್ರಮ ವರ್ಗಾವಣೆ ಪ್ರಕರಣವಲ್ಲ. ರಾಜಕೀಯ ಪ್ರೇರಿತ ಪ್ರಕರಣ. ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಇ.ಡಿ ಕಸ್ಟಡಿ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಕವಿತಾ ಅವರನ್ನು ಇಂದು(ಮಂಗಳವಾರ) ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇಡಿ ಕಸ್ಟಡಿಯಲ್ಲಿದ್ದ ವೇಳೆ ಕವಿತಾ ಅವರಿಗೆ ಡಿಜಿಟಲ್‌ ದಾಖಲೆಗಳು ಸೇರಿದಂತೆ ಇನ್ನಿತರೆ ಪ್ರಶ್ನೆಗಳನ್ನೂ ಕೇಳಲಾಗಿದೆ ಹಾಗೂ ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ಉಲ್ಲೇಖಿಸಿ ಸುದ್ದಿಸಂಸ್ಥೆ ‘ಎಎನ್‌ಐ‘ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT