<p><strong>ನವದೆಹಲಿ:</strong> ಕಾರ್ಮಿಕರ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ, ಕಾರ್ಮಿಕ ಚೌಕಗಳಲ್ಲಿ ಮೊಬೈಲ್ ಹೆಲ್ತ್ ಕ್ಲಿನಿಕ್ ಹಾಗೂ ನೇರ ಆರ್ಥಿಕ ನೆರವು ಸೇರಿದಂತೆ ಹಲವು ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಶುಕ್ರವಾರ(ಮೇ 1) ಘೋಷಿಸಿದ್ದಾರೆ. </p><p>ಅಂತರರಾಷ್ಟ್ರೀಯ ಕಾರ್ಮಿಕ ದಿನದ ಪ್ರಯುಕ್ತ ಧೀರ್ಪುರದ ಸಂತ ನಿರಂಕಾರಿ ಆಸ್ಪತ್ರೆ ನಿರ್ಮಾಣ ಸ್ಥಳದಲ್ಲಿ ಅಲ್ಲಿನ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ರೇಖಾ ಗುಪ್ತಾ, ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ನಮ್ಮ ಸರ್ಕಾರವು ಕಾರ್ಮಿಕರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಹೇಳಿದರು.</p><p>ದೆಹಲಿ ಸರ್ಕಾರದಿಂದ ಶೀಘ್ರದಲ್ಲೇ ಗರ್ಭಿಣಿ ಕಾರ್ಮಿಕರಿಗೆ ಗೌರವಧನವನ್ನು ನೀಡಲಾಗುವುದು, ಪ್ರತಿ ವರ್ಷ ಎರಡು ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು ಎಂದು ಅವರು ಘೋಷಿಸಿದರು.</p><p>ಕಾರ್ಮಿಕರ ಮದುವೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕೂ ಸಹಾಯ ಮಾಡಲು ಯೋಜನೆಗಳನ್ನು ರೂಪಿಸುತ್ತಿದೆ. ಕಾರ್ಮಿಕರು, ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ದೆಹಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಿ ಎಂದು ಹೇಳಿದರು.</p><p>ದೆಹಲಿಯಲ್ಲಿ ಮಾಲಿನ್ಯದಿಂದಾಗಿ ನಿರ್ಮಾಣ ಚಟುವಟಿಕೆಗಳು ನಿರ್ಬಂಧಿಸಲ್ಪಟ್ಟಾಗ, ರಾಜ್ಯ ಸರ್ಕಾರವು ನೋಂದಾಯಿತ ಕಾರ್ಮಿಕರಿಗೆ ₹10,000 ಆರ್ಥಿಕ ಸಹಾಯವನ್ನು ಮಾಡಿತ್ತು. ನಗರದಲ್ಲಿ ಕಾರ್ಮಿಕರ ಕೌಶಲ್ಯ ಮತ್ತು ನಿಯೋಜನೆಗಾಗಿ ಕಾರ್ಮಿಕ ಇಲಾಖೆ ಕೆಲಸ ಮಾಡುತ್ತಿದೆ ಎಂದು ಕಾರ್ಮಿಕ ಸಚಿವ ಕಪಿಲ್ ಮಿಶ್ರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾರ್ಮಿಕರ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ, ಕಾರ್ಮಿಕ ಚೌಕಗಳಲ್ಲಿ ಮೊಬೈಲ್ ಹೆಲ್ತ್ ಕ್ಲಿನಿಕ್ ಹಾಗೂ ನೇರ ಆರ್ಥಿಕ ನೆರವು ಸೇರಿದಂತೆ ಹಲವು ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಶುಕ್ರವಾರ(ಮೇ 1) ಘೋಷಿಸಿದ್ದಾರೆ. </p><p>ಅಂತರರಾಷ್ಟ್ರೀಯ ಕಾರ್ಮಿಕ ದಿನದ ಪ್ರಯುಕ್ತ ಧೀರ್ಪುರದ ಸಂತ ನಿರಂಕಾರಿ ಆಸ್ಪತ್ರೆ ನಿರ್ಮಾಣ ಸ್ಥಳದಲ್ಲಿ ಅಲ್ಲಿನ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ರೇಖಾ ಗುಪ್ತಾ, ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ನಮ್ಮ ಸರ್ಕಾರವು ಕಾರ್ಮಿಕರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಹೇಳಿದರು.</p><p>ದೆಹಲಿ ಸರ್ಕಾರದಿಂದ ಶೀಘ್ರದಲ್ಲೇ ಗರ್ಭಿಣಿ ಕಾರ್ಮಿಕರಿಗೆ ಗೌರವಧನವನ್ನು ನೀಡಲಾಗುವುದು, ಪ್ರತಿ ವರ್ಷ ಎರಡು ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು ಎಂದು ಅವರು ಘೋಷಿಸಿದರು.</p><p>ಕಾರ್ಮಿಕರ ಮದುವೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕೂ ಸಹಾಯ ಮಾಡಲು ಯೋಜನೆಗಳನ್ನು ರೂಪಿಸುತ್ತಿದೆ. ಕಾರ್ಮಿಕರು, ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ದೆಹಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಿ ಎಂದು ಹೇಳಿದರು.</p><p>ದೆಹಲಿಯಲ್ಲಿ ಮಾಲಿನ್ಯದಿಂದಾಗಿ ನಿರ್ಮಾಣ ಚಟುವಟಿಕೆಗಳು ನಿರ್ಬಂಧಿಸಲ್ಪಟ್ಟಾಗ, ರಾಜ್ಯ ಸರ್ಕಾರವು ನೋಂದಾಯಿತ ಕಾರ್ಮಿಕರಿಗೆ ₹10,000 ಆರ್ಥಿಕ ಸಹಾಯವನ್ನು ಮಾಡಿತ್ತು. ನಗರದಲ್ಲಿ ಕಾರ್ಮಿಕರ ಕೌಶಲ್ಯ ಮತ್ತು ನಿಯೋಜನೆಗಾಗಿ ಕಾರ್ಮಿಕ ಇಲಾಖೆ ಕೆಲಸ ಮಾಡುತ್ತಿದೆ ಎಂದು ಕಾರ್ಮಿಕ ಸಚಿವ ಕಪಿಲ್ ಮಿಶ್ರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>