<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರ ಮಿತವ್ಯಯದ ಕರೆಗೆ ಓಗೊಟ್ಟ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’ ಘೋಷಿಸಿದ್ದಾರೆ.</p><p>ಅಧಿಕಾರಿಗಳ ವಾಹನಗಳಿಗೆ ನೀಡಲಾಗುವ ಪೆಟ್ರೋಲ್ ಮತ್ತು ಡೀಸೆಲ್ ಸಹಾಯಧನ ಶೇಕಡ 20ರಷ್ಟು ಕಡಿತಗೊಳಿಸಲಾಗುವುದು. ಎಲ್ಲಾ ಸಚಿವರು ಮತ್ತು ಅಧಿಕಾರಿಗಳು ಪ್ರತಿ ಸೋಮವಾರ ಪ್ರಯಾಣಕ್ಕಾಗಿ ಮೆಟ್ರೊ ಬಳಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.</p><p>ಹೊಸ ನಿಯಮದ ಪ್ರಕಾರ, ದೆಹಲಿಯ ಎಲ್ಲಾ ಸರ್ಕಾರಿ ಉದ್ಯೋಗಿಗಳು ವಾರಕ್ಕೆ ಎರಡು ದಿನ ಮನೆಯಿಂದಲೇ ಕೆಲಸ ಮಾಡಲಿದ್ದಾರೆ. ಪ್ರಯಾಣ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡಲು ಶೇಕಡ 50ರಷ್ಟು ಅಧಿಕೃತ ಸಭೆಗಳನ್ನು ಇನ್ನು ಮುಂದೆ ಆನ್ಲೈನ್ ಮೂಲಕ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.</p><p>ಪ್ರಧಾನಿ ಮೋದಿ ಅವರು ಇಂಧನ ಬಳಕೆ ಕಡಿಮೆ ಮಾಡುವಂತೆ ಕರೆ ನೀಡಿರುವ ಬೆನ್ನಲ್ಲೇ ದೆಹಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.</p>.ಇಂಧನ ಉಳಿತಾಯಕ್ಕೆ ಆದ್ಯತೆ: ವಿಧಾನಭವನಕ್ಕೆ ಬೈಕ್ ಏರಿ ಬಂದ ಮಹಾರಾಷ್ಟ್ರ ಸಿಎಂ.ಸಂಪಾದಕೀಯ | ಜನಜೀವನದ ಮೇಲೆ ಯುದ್ಧದ ಬಿಸಿ: ಇಂಧನ ಮಿತವ್ಯಯ ವಿವೇಕದ ನಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರ ಮಿತವ್ಯಯದ ಕರೆಗೆ ಓಗೊಟ್ಟ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’ ಘೋಷಿಸಿದ್ದಾರೆ.</p><p>ಅಧಿಕಾರಿಗಳ ವಾಹನಗಳಿಗೆ ನೀಡಲಾಗುವ ಪೆಟ್ರೋಲ್ ಮತ್ತು ಡೀಸೆಲ್ ಸಹಾಯಧನ ಶೇಕಡ 20ರಷ್ಟು ಕಡಿತಗೊಳಿಸಲಾಗುವುದು. ಎಲ್ಲಾ ಸಚಿವರು ಮತ್ತು ಅಧಿಕಾರಿಗಳು ಪ್ರತಿ ಸೋಮವಾರ ಪ್ರಯಾಣಕ್ಕಾಗಿ ಮೆಟ್ರೊ ಬಳಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.</p><p>ಹೊಸ ನಿಯಮದ ಪ್ರಕಾರ, ದೆಹಲಿಯ ಎಲ್ಲಾ ಸರ್ಕಾರಿ ಉದ್ಯೋಗಿಗಳು ವಾರಕ್ಕೆ ಎರಡು ದಿನ ಮನೆಯಿಂದಲೇ ಕೆಲಸ ಮಾಡಲಿದ್ದಾರೆ. ಪ್ರಯಾಣ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡಲು ಶೇಕಡ 50ರಷ್ಟು ಅಧಿಕೃತ ಸಭೆಗಳನ್ನು ಇನ್ನು ಮುಂದೆ ಆನ್ಲೈನ್ ಮೂಲಕ ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.</p><p>ಪ್ರಧಾನಿ ಮೋದಿ ಅವರು ಇಂಧನ ಬಳಕೆ ಕಡಿಮೆ ಮಾಡುವಂತೆ ಕರೆ ನೀಡಿರುವ ಬೆನ್ನಲ್ಲೇ ದೆಹಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.</p>.ಇಂಧನ ಉಳಿತಾಯಕ್ಕೆ ಆದ್ಯತೆ: ವಿಧಾನಭವನಕ್ಕೆ ಬೈಕ್ ಏರಿ ಬಂದ ಮಹಾರಾಷ್ಟ್ರ ಸಿಎಂ.ಸಂಪಾದಕೀಯ | ಜನಜೀವನದ ಮೇಲೆ ಯುದ್ಧದ ಬಿಸಿ: ಇಂಧನ ಮಿತವ್ಯಯ ವಿವೇಕದ ನಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>