<p><strong>ನವದೆಹಲಿ</strong>: 1984ರ ಸಿಖ್ ವಿರೋಧಿ ಗಲಭೆಯಲ್ಲಿ ನಲುಗಿದ ಕುಟುಂಬಗಳ 36 ಮಂದಿ ಅವಲಂಬಿತರಿಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಶುಕ್ರವಾರ ಉದ್ಯೋಗ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.</p>.<p>‘ಇದು ದೆಹಲಿ ಸರ್ಕಾರ ನೀಡುತ್ತಿರುವ ಉದ್ಯೋಗ ಮಾತ್ರವಲ್ಲ, ಈ ಕಾರ್ಯವು ಮಾನವ ಘನತೆಯನ್ನು ಪುನಃಸ್ಥಾಪಿಸುವುದಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<p class="bodytext">‘1984ರ ಸಿಖ್ ಗಲಭೆಯು ಮರೆಯಲಾಗದ ದುರಂತ. ಈ ಕುಟುಂಬಗಳು ಅನುಭವಿಸಿದ ನಷ್ಟವನ್ನು ಯಾವುದೇ ಪರಿಹಾರದಿಂದ ತುಂಬಿಕೊಡಲು ಸಾಧ್ಯವಿಲ್ಲ. ದೆಹಲಿ ಸರ್ಕಾರವು ಈ ಕುಟುಂಬಗಳ ಅವಲಂಬಿತರಿಗೆ ಘನತೆಯ ಬದುಕನ್ನು ಕಟ್ಟಿಕೊಡಲು ಬದ್ಧವಾಗಿದೆ’ ಎಂದು ರೇಖಾ ಗುಪ್ತಾ ಹೇಳಿದರು. </p>.<p class="bodytext">ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ರಚಿಸುವ ಮೂಲಕ ಪ್ರಧಾನಿ ಮೋದಿ ಅವರು ಸಂತ್ರಸ್ತ ಕುಟುಂಬಗಳಿಗೆ ತ್ವರಿತವಾಗಿ ನ್ಯಾಯ ಲಭಿಸುವಂತೆ ಮಾಡಿದ್ದಾರೆ. ಗಲಭೆಯಿಂದ ಸಂಕಷ್ಟಕ್ಕೀಡಾದ ಕುಟುಂಬದ ಒಟ್ಟು 55 ಮಂದಿಗೆ ವಿವಿಧ ಇಲಾಖೆಗಳಲ್ಲಿ ಬಹು ಕಾರ್ಯ ಸಿಬ್ಬಂದಿ (ಎಂಟಿಎಸ್) ಉದ್ಯೋಗ ಲಭಿಸಿದೆ ಎಂದರು. </p>.<p class="bodytext">‘ದೆಹಲಿ ಸರ್ಕಾರದ ಕ್ರಮವು ನ್ಯಾಯಕ್ಕಾಗಿ ದಶಕಗಳಿಂದ ಹೋರಾಡುತ್ತಿದ್ದ ಜನರ ಆಳವಾದ ಗಾಯದ ಮೇಲೆ ಹೆಚ್ಚಿರುವ ನಿಜವಾದ ಮುಲಾಮು’ ಎಂದು ಸಚಿವ ಮಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 1984ರ ಸಿಖ್ ವಿರೋಧಿ ಗಲಭೆಯಲ್ಲಿ ನಲುಗಿದ ಕುಟುಂಬಗಳ 36 ಮಂದಿ ಅವಲಂಬಿತರಿಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಶುಕ್ರವಾರ ಉದ್ಯೋಗ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.</p>.<p>‘ಇದು ದೆಹಲಿ ಸರ್ಕಾರ ನೀಡುತ್ತಿರುವ ಉದ್ಯೋಗ ಮಾತ್ರವಲ್ಲ, ಈ ಕಾರ್ಯವು ಮಾನವ ಘನತೆಯನ್ನು ಪುನಃಸ್ಥಾಪಿಸುವುದಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<p class="bodytext">‘1984ರ ಸಿಖ್ ಗಲಭೆಯು ಮರೆಯಲಾಗದ ದುರಂತ. ಈ ಕುಟುಂಬಗಳು ಅನುಭವಿಸಿದ ನಷ್ಟವನ್ನು ಯಾವುದೇ ಪರಿಹಾರದಿಂದ ತುಂಬಿಕೊಡಲು ಸಾಧ್ಯವಿಲ್ಲ. ದೆಹಲಿ ಸರ್ಕಾರವು ಈ ಕುಟುಂಬಗಳ ಅವಲಂಬಿತರಿಗೆ ಘನತೆಯ ಬದುಕನ್ನು ಕಟ್ಟಿಕೊಡಲು ಬದ್ಧವಾಗಿದೆ’ ಎಂದು ರೇಖಾ ಗುಪ್ತಾ ಹೇಳಿದರು. </p>.<p class="bodytext">ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ರಚಿಸುವ ಮೂಲಕ ಪ್ರಧಾನಿ ಮೋದಿ ಅವರು ಸಂತ್ರಸ್ತ ಕುಟುಂಬಗಳಿಗೆ ತ್ವರಿತವಾಗಿ ನ್ಯಾಯ ಲಭಿಸುವಂತೆ ಮಾಡಿದ್ದಾರೆ. ಗಲಭೆಯಿಂದ ಸಂಕಷ್ಟಕ್ಕೀಡಾದ ಕುಟುಂಬದ ಒಟ್ಟು 55 ಮಂದಿಗೆ ವಿವಿಧ ಇಲಾಖೆಗಳಲ್ಲಿ ಬಹು ಕಾರ್ಯ ಸಿಬ್ಬಂದಿ (ಎಂಟಿಎಸ್) ಉದ್ಯೋಗ ಲಭಿಸಿದೆ ಎಂದರು. </p>.<p class="bodytext">‘ದೆಹಲಿ ಸರ್ಕಾರದ ಕ್ರಮವು ನ್ಯಾಯಕ್ಕಾಗಿ ದಶಕಗಳಿಂದ ಹೋರಾಡುತ್ತಿದ್ದ ಜನರ ಆಳವಾದ ಗಾಯದ ಮೇಲೆ ಹೆಚ್ಚಿರುವ ನಿಜವಾದ ಮುಲಾಮು’ ಎಂದು ಸಚಿವ ಮಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>