<p><strong>ನವದೆಹಲಿ</strong>: 2021-2022ರ ಅಬಕಾರಿ ನೀತಿಯ ದುರ್ಬಲ ನೀತಿ ಚೌಕಟ್ಟಿನಿಂದ ಹಿಡಿದು ಕೊರತೆಯ ಅನುಷ್ಠಾನದವರೆಗಿನ ವಿವಿಧ ಕಾರಣಗಳಿಂದಾಗಿ ದೆಹಲಿ ಸರ್ಕಾರವು ₹2,000 ಕೋಟಿಯಷ್ಟು ಸಂಚಿತ ನಷ್ಟವನ್ನು ಅನುಭವಿಸಿದೆ ಎಂದು ಮಂಗಳವಾರ(ಫೆ.25) ವಿಧಾನಸಭೆಯಲ್ಲಿ ಮಂಡಿಸಿದ ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p><p>ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ದೆಹಲಿ ವಿಧಾನಸಭೆಯಲ್ಲಿ ಸಿಎಜಿ ವರದಿಯನ್ನು ಮಂಡಿಸಿದರು.</p><p>ಆಮ್ ಆದ್ಮಿ ಪಕ್ಷದ ನೇತೃತ್ವದ ಹಿಂದಿನ ಸರ್ಕಾರದ ಕಾರ್ಯಕ್ಷಮತೆಯ ಕುರಿತಾದ 14 ವರದಿಗಳ ಪೈಕಿ ಒಂದನ್ನು ಮಂಡಿಸಲಾಗಿದ್ದು, ಅಬಕಾರಿ ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಆಗಿರುವುದನ್ನೂ ಉಲ್ಲೇಖಿಸಿದೆ.</p><p>ಈಗ ರದ್ದಾಗಿರುವ ಅಬಕಾರಿ ನೀತಿಯ ರಚನೆಗೆ ಬದಲಾವಣೆಗಳನ್ನು ಸೂಚಿಸಲು ರಚಿಸಲಾಗಿದ್ದ ತಜ್ಞರ ಸಮಿತಿಯು ನೀಡಿದ್ದ ಶಿಫಾರಸುಗಳನ್ನು ಆಗಿನ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ಅವರು ನಿರ್ಲಕ್ಷಿಸಿದ್ದಾರೆ ಎಂದು ಅದು ಹೇಳಿದೆ.</p><p>ಇದೇ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ ಹಲವರನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2021-2022ರ ಅಬಕಾರಿ ನೀತಿಯ ದುರ್ಬಲ ನೀತಿ ಚೌಕಟ್ಟಿನಿಂದ ಹಿಡಿದು ಕೊರತೆಯ ಅನುಷ್ಠಾನದವರೆಗಿನ ವಿವಿಧ ಕಾರಣಗಳಿಂದಾಗಿ ದೆಹಲಿ ಸರ್ಕಾರವು ₹2,000 ಕೋಟಿಯಷ್ಟು ಸಂಚಿತ ನಷ್ಟವನ್ನು ಅನುಭವಿಸಿದೆ ಎಂದು ಮಂಗಳವಾರ(ಫೆ.25) ವಿಧಾನಸಭೆಯಲ್ಲಿ ಮಂಡಿಸಿದ ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p><p>ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ದೆಹಲಿ ವಿಧಾನಸಭೆಯಲ್ಲಿ ಸಿಎಜಿ ವರದಿಯನ್ನು ಮಂಡಿಸಿದರು.</p><p>ಆಮ್ ಆದ್ಮಿ ಪಕ್ಷದ ನೇತೃತ್ವದ ಹಿಂದಿನ ಸರ್ಕಾರದ ಕಾರ್ಯಕ್ಷಮತೆಯ ಕುರಿತಾದ 14 ವರದಿಗಳ ಪೈಕಿ ಒಂದನ್ನು ಮಂಡಿಸಲಾಗಿದ್ದು, ಅಬಕಾರಿ ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಆಗಿರುವುದನ್ನೂ ಉಲ್ಲೇಖಿಸಿದೆ.</p><p>ಈಗ ರದ್ದಾಗಿರುವ ಅಬಕಾರಿ ನೀತಿಯ ರಚನೆಗೆ ಬದಲಾವಣೆಗಳನ್ನು ಸೂಚಿಸಲು ರಚಿಸಲಾಗಿದ್ದ ತಜ್ಞರ ಸಮಿತಿಯು ನೀಡಿದ್ದ ಶಿಫಾರಸುಗಳನ್ನು ಆಗಿನ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ಅವರು ನಿರ್ಲಕ್ಷಿಸಿದ್ದಾರೆ ಎಂದು ಅದು ಹೇಳಿದೆ.</p><p>ಇದೇ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ ಹಲವರನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>