<p><strong>ನವದೆಹಲಿ</strong>: ‘ದೆಹಲಿ ಸರ್ಕಾರವನ್ನು ಜೈಲಿನಿಂದ ಮನ್ನಡೆಸಲು ಸಾಧ್ಯ ಇಲ್ಲ’ ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಬುಧವಾರ ಹೇಳಿದ್ದಾರೆ.</p>.<p>‘ಜೈಲಿನಲ್ಲಿದ್ದರೂ ಅರವಿಂದ ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವರು’ ಎಂಬ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.</p>.<p>ಟೈಮ್ಸ್ ನೌ ಸುದ್ದಿವಾಹಿನಿ ಆಯೋಜಿಸಿದ್ದ ಶೃಂಗಸಭೆಯಲ್ಲಿ ಮಾತನಾಡಿರುವ ಸಕ್ಸೇನಾ,‘ಜೈಲಿನಿಂದ ಸರ್ಕಾರ ಮುನ್ನಡೆಸಲು ಅವಕಾಶ ನೀಡುವುದಿಲ್ಲ ಎಂಬುದಾಗಿ ದೆಹಲಿ ನಿವಾಸಿಗಳಿಗೆ ನಾನು ಭರವಸೆ ನೀಡುತ್ತೇನೆ’ ಎಂದು ಹೇಳಿದ್ದಾರೆ.</p>.<p>‘ಜೀವನದಲ್ಲಿ ಕಠಿಣ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ (ಲೋಹೆ ಕೆ ಚನೆ ಚಬಾನಾ) ಎಂಬ ಗಾದೆಮಾತನ್ನು ನಾವೆಲ್ಲಾ ಚಿಕ್ಕವರಿದ್ದಾಗ ಕೇಳಿದ್ದೇವೆ. ದೆಹಲಿಗೆ ಬಂದ ನಂತರ ಈ ಗಾದೆಮಾತಿನ ಅರ್ಥ ನನಗೆ ಮನವರಿಕೆಯಾಯಿತು’ ಎಂದು ಹೇಳಿದ್ದಾರೆ.</p>.<p>‘ದೆಹಲಿಯಲ್ಲಿ ಯಾವುದೇ ಕೆಲಸ ಕಾರ್ಯಗತಗೊಳಿಸಬೇಕು ಎಂದಾಗ ಈ ಗಾದೆಮಾತು ಅನುಭವಕ್ಕೆ ಬರುತ್ತದೆ. ಕೆಲ ಶಕ್ತಿಗಳು ಅಡ್ಡಿಯನ್ನುಂಟು ಮಾಡುತ್ತವೆ. ಒಂದು ವೇಳೆ ನೀವು ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿದಲ್ಲಿ, ಅದರ ಶ್ರೇಯವನ್ನು ತಮ್ಮ ಮುಡಿಗೇರಿಸಿಕೊಳ್ಳಲು ಈ ಶಕ್ತಿಗಳು ಯತ್ನಿಸುತ್ತವೆ’ ಎಂದು ಪರೋಕ್ಷವಾಗಿ ಎಎಪಿ ನೇತೃತ್ವದ ಆಡಳಿತಕ್ಕೆ ಚಾಟಿ ಬೀಸಿದ್ದಾರೆ.</p>.<div><blockquote>ಅರವಿಂದ ಕೇಜ್ರಿವಾಲ್ ಬಂಧನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಒಂದು ವೇಳೆ ರಾಷ್ಟ್ರಪತಿ ಆಡಳಿತ ಹೇರಿದಲ್ಲಿ ಅದು ರಾಜಕೀಯ ಸೇಡು ಎಂಬುದು ಸ್ಪಷ್ಟವಾಗಲಿದೆ.</blockquote><span class="attribution">ಆತಿಶಿ ಮರ್ಲೆನಾ, ದೆಹಲಿ ಸಚಿವೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ದೆಹಲಿ ಸರ್ಕಾರವನ್ನು ಜೈಲಿನಿಂದ ಮನ್ನಡೆಸಲು ಸಾಧ್ಯ ಇಲ್ಲ’ ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಬುಧವಾರ ಹೇಳಿದ್ದಾರೆ.</p>.<p>‘ಜೈಲಿನಲ್ಲಿದ್ದರೂ ಅರವಿಂದ ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವರು’ ಎಂಬ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.</p>.<p>ಟೈಮ್ಸ್ ನೌ ಸುದ್ದಿವಾಹಿನಿ ಆಯೋಜಿಸಿದ್ದ ಶೃಂಗಸಭೆಯಲ್ಲಿ ಮಾತನಾಡಿರುವ ಸಕ್ಸೇನಾ,‘ಜೈಲಿನಿಂದ ಸರ್ಕಾರ ಮುನ್ನಡೆಸಲು ಅವಕಾಶ ನೀಡುವುದಿಲ್ಲ ಎಂಬುದಾಗಿ ದೆಹಲಿ ನಿವಾಸಿಗಳಿಗೆ ನಾನು ಭರವಸೆ ನೀಡುತ್ತೇನೆ’ ಎಂದು ಹೇಳಿದ್ದಾರೆ.</p>.<p>‘ಜೀವನದಲ್ಲಿ ಕಠಿಣ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ (ಲೋಹೆ ಕೆ ಚನೆ ಚಬಾನಾ) ಎಂಬ ಗಾದೆಮಾತನ್ನು ನಾವೆಲ್ಲಾ ಚಿಕ್ಕವರಿದ್ದಾಗ ಕೇಳಿದ್ದೇವೆ. ದೆಹಲಿಗೆ ಬಂದ ನಂತರ ಈ ಗಾದೆಮಾತಿನ ಅರ್ಥ ನನಗೆ ಮನವರಿಕೆಯಾಯಿತು’ ಎಂದು ಹೇಳಿದ್ದಾರೆ.</p>.<p>‘ದೆಹಲಿಯಲ್ಲಿ ಯಾವುದೇ ಕೆಲಸ ಕಾರ್ಯಗತಗೊಳಿಸಬೇಕು ಎಂದಾಗ ಈ ಗಾದೆಮಾತು ಅನುಭವಕ್ಕೆ ಬರುತ್ತದೆ. ಕೆಲ ಶಕ್ತಿಗಳು ಅಡ್ಡಿಯನ್ನುಂಟು ಮಾಡುತ್ತವೆ. ಒಂದು ವೇಳೆ ನೀವು ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿದಲ್ಲಿ, ಅದರ ಶ್ರೇಯವನ್ನು ತಮ್ಮ ಮುಡಿಗೇರಿಸಿಕೊಳ್ಳಲು ಈ ಶಕ್ತಿಗಳು ಯತ್ನಿಸುತ್ತವೆ’ ಎಂದು ಪರೋಕ್ಷವಾಗಿ ಎಎಪಿ ನೇತೃತ್ವದ ಆಡಳಿತಕ್ಕೆ ಚಾಟಿ ಬೀಸಿದ್ದಾರೆ.</p>.<div><blockquote>ಅರವಿಂದ ಕೇಜ್ರಿವಾಲ್ ಬಂಧನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಒಂದು ವೇಳೆ ರಾಷ್ಟ್ರಪತಿ ಆಡಳಿತ ಹೇರಿದಲ್ಲಿ ಅದು ರಾಜಕೀಯ ಸೇಡು ಎಂಬುದು ಸ್ಪಷ್ಟವಾಗಲಿದೆ.</blockquote><span class="attribution">ಆತಿಶಿ ಮರ್ಲೆನಾ, ದೆಹಲಿ ಸಚಿವೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>