<p><strong>ನವದೆಹಲಿ:</strong> 2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಹಾಗೂ ಇತರರನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ದೆಹಲಿ ಹೈಕೋರ್ಟ್ ಶುಕ್ರವಾರ ಸಮ್ಮತಿಸಿದೆ.</p>.<p>ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ, ‘ಲಭ್ಯವಿರುವ ದಾಖಲೆಗಳು, ಕಕ್ಷಿದಾರರ ವಕೀಲರು ಸಲ್ಲಿಸಿರುವ ಹೇಳಿಕೆಗಳನ್ನು ಪರಿಶೀಲಿಸಿದಾಗ, ಸಿಬಿಐ ದಾಖಲಿಸಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ವಿಸ್ತೃತ ವಿಚಾರಣೆ ಅಗತ್ಯವಿದೆ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ, ‘ಮೇ ನಲ್ಲಿ ಅರ್ಜಿ ವಿಚಾರಣೆಗೆ ಪಟ್ಟಿ ಮಾಡಿ’ ಎಂದು ತಿಳಿಸಿದರು. ಹಾಗೆಯೇ ಪ್ರಕರಣದ ಬಗ್ಗೆ ಉನ್ನತ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲೂ ಅನುಮತಿ ಇದೆ ಎಂದರು.</p>.<p>ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕೆಂದು ಸಿಬಿಐ 2018ರಲ್ಲಿ ಅರ್ಜಿ ಸಲ್ಲಿಸಿತ್ತು. ಆರು ವರ್ಷಗಳ ನಂತರ ಹೈಕೋರ್ಟ್ ಅನುಮತಿ ನೀಡಿದೆ. 2017ರಲ್ಲಿ ವಿಶೇಷ ನ್ಯಾಯಾಲಯವೊಂದು ರಾಜಾ, ಡಿಎಂಕೆ ಸಂಸದ ಕನಿಮೋಳಿ ಮತ್ತು ಇತರರನ್ನು ಖುಲಾಸೆಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಹಾಗೂ ಇತರರನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ದೆಹಲಿ ಹೈಕೋರ್ಟ್ ಶುಕ್ರವಾರ ಸಮ್ಮತಿಸಿದೆ.</p>.<p>ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ, ‘ಲಭ್ಯವಿರುವ ದಾಖಲೆಗಳು, ಕಕ್ಷಿದಾರರ ವಕೀಲರು ಸಲ್ಲಿಸಿರುವ ಹೇಳಿಕೆಗಳನ್ನು ಪರಿಶೀಲಿಸಿದಾಗ, ಸಿಬಿಐ ದಾಖಲಿಸಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ವಿಸ್ತೃತ ವಿಚಾರಣೆ ಅಗತ್ಯವಿದೆ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿ, ‘ಮೇ ನಲ್ಲಿ ಅರ್ಜಿ ವಿಚಾರಣೆಗೆ ಪಟ್ಟಿ ಮಾಡಿ’ ಎಂದು ತಿಳಿಸಿದರು. ಹಾಗೆಯೇ ಪ್ರಕರಣದ ಬಗ್ಗೆ ಉನ್ನತ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲೂ ಅನುಮತಿ ಇದೆ ಎಂದರು.</p>.<p>ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕೆಂದು ಸಿಬಿಐ 2018ರಲ್ಲಿ ಅರ್ಜಿ ಸಲ್ಲಿಸಿತ್ತು. ಆರು ವರ್ಷಗಳ ನಂತರ ಹೈಕೋರ್ಟ್ ಅನುಮತಿ ನೀಡಿದೆ. 2017ರಲ್ಲಿ ವಿಶೇಷ ನ್ಯಾಯಾಲಯವೊಂದು ರಾಜಾ, ಡಿಎಂಕೆ ಸಂಸದ ಕನಿಮೋಳಿ ಮತ್ತು ಇತರರನ್ನು ಖುಲಾಸೆಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>