<p><strong>ನವದೆಹಲಿ:</strong> ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ತೆರಳಲು ದೆಹಲಿ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.</p>.<p>ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಆಶಾ ಮೆನನ್, 'ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರವನ್ನು ತನಿಖಾಧಿಕಾರಿಗೆ ತಿಳಿಸುತ್ತಾರೆ' ಎಂದು ಹೇಳಿದ್ದಾರೆ.</p>.<p>ಡಿ.ಕೆ.ಶಿವಕುಮಾರ್ ಅವರನ್ನು ಪ್ರತಿನಿಧಿಸಿದ್ದ ವಕೀಲ ಮಯಾಂಕ್ ಜೈನ್, ದುಬೈನಲ್ಲಿ ವಿಶೇಷ ಅತಿಥಿಯಾಗಿರುವ ಕಾರ್ಯಕ್ರಮಕ್ಕೆ ಶಿವಕುಮಾರ್ ಅವರ ಉಪಸ್ಥಿತಿಯ ಅಗತ್ಯವಿದೆ ಎಂದು ಹೇಳಿದ್ದರು.</p>.<p>2019ರ ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಶಿವಕುಮಾರ್ಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್, ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ತೊರೆಯುವಂತಿಲ್ಲ ಎಂಬ ಷರತ್ತು ವಿಧಿಸಿತ್ತು.</p>.<p>ಕರ್ನಾಟಕದಲ್ಲಿ 7 ಬಾರಿ ಶಾಸಕರಾಗಿರುವ ಶಿವಕುಮಾರ್, ದೆಹಲಿಯ ಕರ್ನಾಟಕ ಭವನದಲ್ಲಿ ಉದ್ಯೋಗಿಯಾಗಿರುವ ಹನುಮಂತಯ್ಯ ಮತ್ತು ಇತರರ ಮೇಲೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ತೆರಿಗೆ ವಂಚನೆ ಮತ್ತು ಕೋಟಿ ರೂಪಾಯಿ ಮೌಲ್ಯದ 'ಹವಾಲಾ' ವಹಿವಾಟಿನ ಆರೋಪದ ಮೇಲೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಚಾರ್ಜ್ ಶೀಟ್ ಆಧರಿಸಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ತೆರಳಲು ದೆಹಲಿ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.</p>.<p>ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಆಶಾ ಮೆನನ್, 'ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರವನ್ನು ತನಿಖಾಧಿಕಾರಿಗೆ ತಿಳಿಸುತ್ತಾರೆ' ಎಂದು ಹೇಳಿದ್ದಾರೆ.</p>.<p>ಡಿ.ಕೆ.ಶಿವಕುಮಾರ್ ಅವರನ್ನು ಪ್ರತಿನಿಧಿಸಿದ್ದ ವಕೀಲ ಮಯಾಂಕ್ ಜೈನ್, ದುಬೈನಲ್ಲಿ ವಿಶೇಷ ಅತಿಥಿಯಾಗಿರುವ ಕಾರ್ಯಕ್ರಮಕ್ಕೆ ಶಿವಕುಮಾರ್ ಅವರ ಉಪಸ್ಥಿತಿಯ ಅಗತ್ಯವಿದೆ ಎಂದು ಹೇಳಿದ್ದರು.</p>.<p>2019ರ ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಶಿವಕುಮಾರ್ಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್, ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ತೊರೆಯುವಂತಿಲ್ಲ ಎಂಬ ಷರತ್ತು ವಿಧಿಸಿತ್ತು.</p>.<p>ಕರ್ನಾಟಕದಲ್ಲಿ 7 ಬಾರಿ ಶಾಸಕರಾಗಿರುವ ಶಿವಕುಮಾರ್, ದೆಹಲಿಯ ಕರ್ನಾಟಕ ಭವನದಲ್ಲಿ ಉದ್ಯೋಗಿಯಾಗಿರುವ ಹನುಮಂತಯ್ಯ ಮತ್ತು ಇತರರ ಮೇಲೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ತೆರಿಗೆ ವಂಚನೆ ಮತ್ತು ಕೋಟಿ ರೂಪಾಯಿ ಮೌಲ್ಯದ 'ಹವಾಲಾ' ವಹಿವಾಟಿನ ಆರೋಪದ ಮೇಲೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಚಾರ್ಜ್ ಶೀಟ್ ಆಧರಿಸಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>