<p><strong>ನವದೆಹಲಿ (ಪಿಟಿಐ):</strong> ವಿಮಾನ ಸಿಬ್ಬಂದಿಯ ಕರ್ತವ್ಯ ಅವಧಿಯ ಮಿತಿ (ಎಫ್ಡಿಟಿಎಲ್) ನಿಯಮಾವಳಿ ಜಾರಿ ಕುರಿತು ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯಕ್ಕೆ (ಡಿಜಿಸಿಎ) ದೆಹಲಿ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.</p>.<p>‘ಸಿಬ್ಬಂದಿಯ ಆಯಾಸವನ್ನು ಪರಿಹರಿಸಲು ಸೂಕ್ತ ವಿಶ್ರಾಂತಿ ದೊರೆಯುವುದನ್ನು ಖಾತರಿಪಡಿಸಿಕೊಳ್ಳುವುದಕ್ಕಾಗಿ ನ್ಯಾಯಾಲಯದ ಅನುಮೋದನೆ ಮೇರೆಗೆ ಎಫ್ಡಿಟಿಎಲ್ ಪರಿಷ್ಕೃತ ನಿಯಮಾವಳಿಗಳನ್ನು ರೂಪಿಸಲಾಗಿದೆ. ಆದರೆ, ಡಿಜಿಸಿಎ ಈ ನಿಯಮಾವಳಿಗಳನ್ನು ಸಂಪೂರ್ಣವಾಗಿ ಜಾರಿಗೊಳಿಸದೇ, ವಿಮಾನಯಾನ ಸಂಸ್ಥೆಗಳಿಗೆ ವಿನಾಯತಿಗಳನ್ನು ನೀಡಿದೆ’ ಎಂದು ಇಂಡಿಯನ್ ಪೈಲಟ್ಸ್ ಗಿಲ್ಡ್ ಆರೋಪಿಸಿದೆ. </p>.<p class="title">ಅಲ್ಲದೇ, ಡಿಜಿಸಿಎ ಅನುಸರಿಸಿರುವ ಈ ನಡೆಯು ಸಿವಿಲ್ ಏವಿಯೇಷನ್ ರಿಕ್ವೈರ್ಮೆಂಟ್ (ಸಿಎಆರ್)2024 ನಿಯಮದ ಉಲ್ಲಂಘನೆಯೂ ಆಗಿದ್ದು, ಪ್ರಾಧಿಕಾರದ ವಿರುದ್ಧ ನ್ಯಾಯಾಂಗ ನಿಂದನೆಯ ಕ್ರಮ ಕೈಗೊಳ್ಳಬೇಕು ಎಂದೂ ಅರ್ಜಿಯಲ್ಲಿ ಕೋರಿದೆ. </p>.<p class="title">ನ್ಯಾಯಮೂರ್ತಿ ಅಮಿತ್ ಶರ್ಮಾ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಡಿಜಿಸಿಎಗೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 17ಕ್ಕೆ ನಿಗದಿಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ವಿಮಾನ ಸಿಬ್ಬಂದಿಯ ಕರ್ತವ್ಯ ಅವಧಿಯ ಮಿತಿ (ಎಫ್ಡಿಟಿಎಲ್) ನಿಯಮಾವಳಿ ಜಾರಿ ಕುರಿತು ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯಕ್ಕೆ (ಡಿಜಿಸಿಎ) ದೆಹಲಿ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.</p>.<p>‘ಸಿಬ್ಬಂದಿಯ ಆಯಾಸವನ್ನು ಪರಿಹರಿಸಲು ಸೂಕ್ತ ವಿಶ್ರಾಂತಿ ದೊರೆಯುವುದನ್ನು ಖಾತರಿಪಡಿಸಿಕೊಳ್ಳುವುದಕ್ಕಾಗಿ ನ್ಯಾಯಾಲಯದ ಅನುಮೋದನೆ ಮೇರೆಗೆ ಎಫ್ಡಿಟಿಎಲ್ ಪರಿಷ್ಕೃತ ನಿಯಮಾವಳಿಗಳನ್ನು ರೂಪಿಸಲಾಗಿದೆ. ಆದರೆ, ಡಿಜಿಸಿಎ ಈ ನಿಯಮಾವಳಿಗಳನ್ನು ಸಂಪೂರ್ಣವಾಗಿ ಜಾರಿಗೊಳಿಸದೇ, ವಿಮಾನಯಾನ ಸಂಸ್ಥೆಗಳಿಗೆ ವಿನಾಯತಿಗಳನ್ನು ನೀಡಿದೆ’ ಎಂದು ಇಂಡಿಯನ್ ಪೈಲಟ್ಸ್ ಗಿಲ್ಡ್ ಆರೋಪಿಸಿದೆ. </p>.<p class="title">ಅಲ್ಲದೇ, ಡಿಜಿಸಿಎ ಅನುಸರಿಸಿರುವ ಈ ನಡೆಯು ಸಿವಿಲ್ ಏವಿಯೇಷನ್ ರಿಕ್ವೈರ್ಮೆಂಟ್ (ಸಿಎಆರ್)2024 ನಿಯಮದ ಉಲ್ಲಂಘನೆಯೂ ಆಗಿದ್ದು, ಪ್ರಾಧಿಕಾರದ ವಿರುದ್ಧ ನ್ಯಾಯಾಂಗ ನಿಂದನೆಯ ಕ್ರಮ ಕೈಗೊಳ್ಳಬೇಕು ಎಂದೂ ಅರ್ಜಿಯಲ್ಲಿ ಕೋರಿದೆ. </p>.<p class="title">ನ್ಯಾಯಮೂರ್ತಿ ಅಮಿತ್ ಶರ್ಮಾ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಡಿಜಿಸಿಎಗೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 17ಕ್ಕೆ ನಿಗದಿಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>