ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೃತ ಸಫಾಯಿ ಕರ್ಮಚಾರಿ ಪತ್ನಿಗೆ ₹30 ಲಕ್ಷ ಪರಿಹಾರ ನೀಡಲು ದೆಹಲಿ ಹೈಕೋರ್ಟ್‌ ಆದೇಶ

Published 27 ನವೆಂಬರ್ 2023, 14:17 IST
Last Updated 27 ನವೆಂಬರ್ 2023, 14:17 IST
ಅಕ್ಷರ ಗಾತ್ರ

ನವದೆಹಲಿ: ಮಲದ ಗುಂಡಿ ಸ್ಚಚ್ಛಗೊಳಿಸುವ ವೇಳೆ ಮೃತಪಟ್ಟ ಸಫಾಯಿ ಕರ್ಮಚಾರಿಯೊಬ್ಬರ ಪತ್ನಿಗೆ ₹30 ಲಕ್ಷ ಪರಿಹಾರ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ ದೆಹಲಿ ಸರ್ಕಾರಕ್ಕೆ ಆದೇಶಿಸಿದೆ.

ಕರ್ತವ್ಯದ ವೇಳೆ ಮೃತಪಟ್ಟ ಸಫಾಯಿ ಕರ್ಮಚಾರಿ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು ₹10 ಲಕ್ಷದಿಂದ ₹30 ಲಕ್ಷಕ್ಕೆ ಏರಿಸಬೇಕು ಎಂದು ಸುಪ್ರೀಂ ಕೋರ್ಟ್‌ ಈಚೆಗಷ್ಟೇ ಆದೇಶ ಹೊರಡಿಸಿತ್ತು. 

ಅದರಂತೆ ತಮಗೆ ನೀಡಲಾಗಿರುವ ಪರಿಹಾರ ಮೊತ್ತವನ್ನು ₹10 ಲಕ್ಷದಿಂದ ₹30 ಲಕ್ಷಕ್ಕೆ ಏರಿಸಬೇಕು ಎಂದು ಮಹಿಳೆಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 

ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಸುಬ್ರಮಣಿಯಮ್‌ ಪ್ರಸಾದ್‌ ಅವರು ₹30 ಲಕ್ಷ ಪರಿಹಾರ ನೀಡುವಂತೆ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದರು ಮತ್ತು ಎರಡು ತಿಂಗಳ ಒಳಗೆ ಈ ಆದೇಶ ಜಾರಿಗೊಳಿಸಲು ಸೂಚಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT