<p><strong>ನವದೆಹಲಿ:</strong> ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ತಮ್ಮ ವಿರುದ್ಧ ದೋಷಾರೋಪಗಳನ್ನು ನಿಗದಿ ಮಾಡಿದ್ದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಮಹಾಜನ್, ಸ್ವಾತಿ ಮಾಲಿವಾಲ್ ವಿರುದ್ಧ ದೋಷಾರೋಪ ನಿಗದಿ ಮಾಡಿದ್ದನ್ನು ರದ್ದುಪಡಿಸಲು ನಿರಾಕರಿಸಿದರು. ಈ ಕುರಿತ ವಿಸ್ತೃತ ಆದೇಶ ಲಭ್ಯವಾಗಬೇಕಿದೆ.</p>.<p>ದೆಹಲಿ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದ ವೇಳೆ ಸ್ವಾತಿ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು, ಎಎಪಿ ಜೊತೆ ಗುರುತಿಸಿಕೊಂಡಿದ್ದವರನ್ನು ಆಯೋಗದ ವಿವಿಧ ಹುದ್ದೆಗಳಿಗೆ ನೇಮಕ ಮಾಡಿದ್ದರು ಎಂದು ಆರೋಪಿಸಲಾಗಿದೆ.</p>.<p>ಸ್ವಾತಿ ಹಾಗೂ ಇತರ ಮೂವರ ವಿರುದ್ಧ ದೋಷಾರೋಪ ನಿಗದಿ ಮಾಡುವಂತೆ ವಿಚಾರಣಾ ನ್ಯಾಯಾಲಯ 2022ರ ಡಿಸೆಂಬರ್ 8ರಂದು ಆದೇಶಿಸಿತ್ತು. </p>.<p>ಆಯೋಗದ ಮಾಜಿ ಅಧ್ಯಕ್ಷೆಯೂ ಆದ ಬಿಜೆಪಿ ಶಾಸಕಿ ಬರ್ಖಾ ಶುಕ್ಲಾ ಸಿಂಗ್ ನೀಡಿದ ದೂರಿನ ಅನ್ವಯ ಸ್ವಾತಿ ಮಾಲಿವಾಲ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ತಮ್ಮ ವಿರುದ್ಧ ದೋಷಾರೋಪಗಳನ್ನು ನಿಗದಿ ಮಾಡಿದ್ದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಮಹಾಜನ್, ಸ್ವಾತಿ ಮಾಲಿವಾಲ್ ವಿರುದ್ಧ ದೋಷಾರೋಪ ನಿಗದಿ ಮಾಡಿದ್ದನ್ನು ರದ್ದುಪಡಿಸಲು ನಿರಾಕರಿಸಿದರು. ಈ ಕುರಿತ ವಿಸ್ತೃತ ಆದೇಶ ಲಭ್ಯವಾಗಬೇಕಿದೆ.</p>.<p>ದೆಹಲಿ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದ ವೇಳೆ ಸ್ವಾತಿ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು, ಎಎಪಿ ಜೊತೆ ಗುರುತಿಸಿಕೊಂಡಿದ್ದವರನ್ನು ಆಯೋಗದ ವಿವಿಧ ಹುದ್ದೆಗಳಿಗೆ ನೇಮಕ ಮಾಡಿದ್ದರು ಎಂದು ಆರೋಪಿಸಲಾಗಿದೆ.</p>.<p>ಸ್ವಾತಿ ಹಾಗೂ ಇತರ ಮೂವರ ವಿರುದ್ಧ ದೋಷಾರೋಪ ನಿಗದಿ ಮಾಡುವಂತೆ ವಿಚಾರಣಾ ನ್ಯಾಯಾಲಯ 2022ರ ಡಿಸೆಂಬರ್ 8ರಂದು ಆದೇಶಿಸಿತ್ತು. </p>.<p>ಆಯೋಗದ ಮಾಜಿ ಅಧ್ಯಕ್ಷೆಯೂ ಆದ ಬಿಜೆಪಿ ಶಾಸಕಿ ಬರ್ಖಾ ಶುಕ್ಲಾ ಸಿಂಗ್ ನೀಡಿದ ದೂರಿನ ಅನ್ವಯ ಸ್ವಾತಿ ಮಾಲಿವಾಲ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>