<p><strong>ನವದೆಹಲಿ</strong>: ತಮ್ಮ ವಿರುದ್ದದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಮತ್ತೊಂದು ಕೋರ್ಟ್ಗೆ ವರ್ಗಾಯಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಚಿವ ಸತ್ಯೇಂದ್ರ ಜೈನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶನಿವಾರ ವಜಾಗೊಳಿಸಿತು.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಯೋಗೇಶ್ ಖನ್ನಾ, ‘ಎಲ್ಲ ವಾಸ್ತವಾಂಶಗಳನ್ನು ಪರಿಗಣಿಸಿಯೇ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಪ್ರಕರಣವನ್ನು ವರ್ಗಾಯಿಸಿದ್ದಾರೆ’ ಎಂದರು.</p>.<p>‘ಈ ನಿರ್ಧಾರ ಕೈಗೊಳ್ಳುವ ವೇಳೆ ಕಾನೂನು ಪಾಲನೆಯಾಗಿಲ್ಲ ಎನ್ನಲಾಗದು ಅಥವಾ ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯ ಇದೆ ಎಂದು ಹೇಳಲಾಗದು’ ಎಂದೂ ನ್ಯಾಯಮೂರ್ತಿ ಖನ್ನಾ ಹೇಳಿದರು.</p>.<p>‘ಪ್ರಕರಣವನ್ನು ಹಸ್ತಾಂತರಿಸುವ ವಿಷಯಕ್ಕೆ ಸಂಬಂಧಿಸಿ, ಜೈನ್ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಆತಂಕ ವ್ಯಕ್ತಪಡಿಸಿದೆ. ಹೀಗಾಗಿ, ಈ ವಿಷಯವನ್ನು ನ್ಯಾಯಾಧೀಶರ ದೃಷ್ಟಿಯಿಂದ ನೋಡದೇ, ಕಕ್ಷಿದಾರರ ದೃಷ್ಟಿಯಿಂದ ಗ್ರಹಿಸುವುದು ಮುಖ್ಯ’ ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.</p>.<p>ಜೈನ್ ವಿರುದ್ಧದ ಪ್ರಕರಣವನ್ನು ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರಿಂದ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ ಅವರಿಗೆ ವರ್ಗಾಯಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿನಯಕುಮಾರ್ ಗುಪ್ತಾ ಸೆ.23ರಂದು ಆದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತಮ್ಮ ವಿರುದ್ದದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಮತ್ತೊಂದು ಕೋರ್ಟ್ಗೆ ವರ್ಗಾಯಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಚಿವ ಸತ್ಯೇಂದ್ರ ಜೈನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶನಿವಾರ ವಜಾಗೊಳಿಸಿತು.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಯೋಗೇಶ್ ಖನ್ನಾ, ‘ಎಲ್ಲ ವಾಸ್ತವಾಂಶಗಳನ್ನು ಪರಿಗಣಿಸಿಯೇ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಪ್ರಕರಣವನ್ನು ವರ್ಗಾಯಿಸಿದ್ದಾರೆ’ ಎಂದರು.</p>.<p>‘ಈ ನಿರ್ಧಾರ ಕೈಗೊಳ್ಳುವ ವೇಳೆ ಕಾನೂನು ಪಾಲನೆಯಾಗಿಲ್ಲ ಎನ್ನಲಾಗದು ಅಥವಾ ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯ ಇದೆ ಎಂದು ಹೇಳಲಾಗದು’ ಎಂದೂ ನ್ಯಾಯಮೂರ್ತಿ ಖನ್ನಾ ಹೇಳಿದರು.</p>.<p>‘ಪ್ರಕರಣವನ್ನು ಹಸ್ತಾಂತರಿಸುವ ವಿಷಯಕ್ಕೆ ಸಂಬಂಧಿಸಿ, ಜೈನ್ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಆತಂಕ ವ್ಯಕ್ತಪಡಿಸಿದೆ. ಹೀಗಾಗಿ, ಈ ವಿಷಯವನ್ನು ನ್ಯಾಯಾಧೀಶರ ದೃಷ್ಟಿಯಿಂದ ನೋಡದೇ, ಕಕ್ಷಿದಾರರ ದೃಷ್ಟಿಯಿಂದ ಗ್ರಹಿಸುವುದು ಮುಖ್ಯ’ ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.</p>.<p>ಜೈನ್ ವಿರುದ್ಧದ ಪ್ರಕರಣವನ್ನು ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರಿಂದ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ ಅವರಿಗೆ ವರ್ಗಾಯಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವಿನಯಕುಮಾರ್ ಗುಪ್ತಾ ಸೆ.23ರಂದು ಆದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>