<p><strong>ನವದೆಹಲಿ</strong>: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ 2019ರ ಡಿಸೆಂಬರ್ನಲ್ಲಿ ನಡೆದ ಪ್ರತಿಭಟನೆ ನಂತರ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಹಿಂಸಾಚಾರ ಭುಗಿಲೆದ್ದ ವಿಚಾರಕ್ಕೆ ಸಂಬಂಧಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಅಮಿತ್ ಶರ್ಮ ಮಂಗಳವಾರ ನಿರಾಕರಿಸಿದ್ದಾರೆ.</p>.<p>ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್ ಅವರ ನೇತೃತ್ವದ ವಿಭಾಗೀಯದ ಪೀಠದ ಎದುರು ಈ ಅರ್ಜಿಗಳ ವಿಚಾರಣೆ ನಡೆಸಲು ಪಟ್ಟಿ ಮಾಡಲಾಗಿತ್ತು.</p>.<p>ನ್ಯಾ. ಸಿಂಗ್ ಅವರು, ‘ಮತ್ತೊಂದು ಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ. ಆ.8ರಂದು ನಡೆಯುವ ವಿಚಾರಣೆಯಲ್ಲಿ ಅಮಿತ್ ಶರ್ಮ ಅವರು ಪೀಠದ ಸದಸ್ಯರಾಗಿರುವುದಿಲ್ಲ’ ಎಂದು ಹೇಳಿದರು.</p>.<p>ಹಿಂಸಾಚಾರದ ನಂತರ, ಆಯೋಗದಿಂದ ತನಿಖೆ ಆಗಬೇಕು ಅಥವಾ ವಿಶೇಷ ತನಿಖಾ ತಂಡವನ್ನೋ ಸತ್ಯಶೋಧನಾ ಸಮಿತಿಯನ್ನೋ ರಚಿಸುವಂತೆ ನಿರ್ದೇಶನ ನೀಡಲು ಕೋರಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. </p>.<p>ವಕೀಲರು, ಜೆಎಂಐ ವಿದ್ಯಾರ್ಥಿಗಳು, ಓಖಲಾ ನಿವಾಸಿಗಳು ಅರ್ಜಿದಾರರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ 2019ರ ಡಿಸೆಂಬರ್ನಲ್ಲಿ ನಡೆದ ಪ್ರತಿಭಟನೆ ನಂತರ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಹಿಂಸಾಚಾರ ಭುಗಿಲೆದ್ದ ವಿಚಾರಕ್ಕೆ ಸಂಬಂಧಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಅಮಿತ್ ಶರ್ಮ ಮಂಗಳವಾರ ನಿರಾಕರಿಸಿದ್ದಾರೆ.</p>.<p>ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್ ಅವರ ನೇತೃತ್ವದ ವಿಭಾಗೀಯದ ಪೀಠದ ಎದುರು ಈ ಅರ್ಜಿಗಳ ವಿಚಾರಣೆ ನಡೆಸಲು ಪಟ್ಟಿ ಮಾಡಲಾಗಿತ್ತು.</p>.<p>ನ್ಯಾ. ಸಿಂಗ್ ಅವರು, ‘ಮತ್ತೊಂದು ಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ. ಆ.8ರಂದು ನಡೆಯುವ ವಿಚಾರಣೆಯಲ್ಲಿ ಅಮಿತ್ ಶರ್ಮ ಅವರು ಪೀಠದ ಸದಸ್ಯರಾಗಿರುವುದಿಲ್ಲ’ ಎಂದು ಹೇಳಿದರು.</p>.<p>ಹಿಂಸಾಚಾರದ ನಂತರ, ಆಯೋಗದಿಂದ ತನಿಖೆ ಆಗಬೇಕು ಅಥವಾ ವಿಶೇಷ ತನಿಖಾ ತಂಡವನ್ನೋ ಸತ್ಯಶೋಧನಾ ಸಮಿತಿಯನ್ನೋ ರಚಿಸುವಂತೆ ನಿರ್ದೇಶನ ನೀಡಲು ಕೋರಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. </p>.<p>ವಕೀಲರು, ಜೆಎಂಐ ವಿದ್ಯಾರ್ಥಿಗಳು, ಓಖಲಾ ನಿವಾಸಿಗಳು ಅರ್ಜಿದಾರರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>