<p><strong>ನವದೆಹಲಿ:</strong> ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿಚಾರಣೆ ಸಂದರ್ಭದ ವಿಡಿಯೊ ಒಂದನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಸಾಮಾಜಿಕ ಜಾಲತಾಣ ವೇದಿಕೆಗಳಾದ ಫೇಸ್ಬುಕ್, ಇನ್ಸ್ಟಾಗ್ರಾಂ, ಎಕ್ಸ್ ಮತ್ತು ಯೂಟ್ಯೂಬ್ಗೆ ದೆಹಲಿ ಹೈಕೋರ್ಟ್ ಶನಿವಾರ ಆದೇಶಿಸಿದೆ.</p><p>ಕೇಜ್ರಿವಾಲ್ ಅವರು ವಿಚಾರಣಾ ನ್ಯಾಯಾಲಯದಲ್ಲಿ ಮೌಖಿಕವಾಗಿ ವಾದ ಮಂಡಿಸಿದ್ದ ವಿಡಿಯೊ ಒಂದನ್ನು ಬೇರೆ ಬೇರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗಿದೆ ಎನ್ನಲಾಗಿದೆ.</p><p>ವೈಭವ್ ಸಿಂಗ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ನೀನಾ ಬನ್ಸಲ್ ಕೃಷ್ಣ ಮತ್ತು ಅಮಿತ್ ಶರ್ಮ ಅವರು ಇದ್ದ ವಿಭಾಗೀಯ ಪೀಠವು, ಕೋರ್ಟ್ ಕಲಾಪವನ್ನು ಚಿತ್ರೀಕರಿಸಿಕೊಂಡಿದ್ದು ನಿಯಮಗಳ ಉಲ್ಲಂಘನೆ, ಆ ವಿಡಿಯೊವನ್ನು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುವಂತೆ ಉಳಿಸಿಕೊಳ್ಳಲಾಗದು ಎಂದು ಹೇಳಿತು.</p><p>ಕೇಜ್ರಿವಾಲ್ ಅವರನ್ನು ಬಂಧಿಸಿ ಮಾರ್ಚ್ 28ರಂದು ಕೋರ್ಟ್ಗೆ ಹಾಜರುಪಡಿಸಲಾಯಿತು. ಅವರು ನ್ಯಾಯಾಧೀಶರನ್ನು ಉದ್ದೇಶಿಸಿ ತಾವೇ ಮಾತನಾಡಿದರು. ಇದನ್ನು ವಿಡಿಯೊ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಸಿಂಗ್ ಅವರು ಹೇಳಿದರು.</p><p>ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಕೋರ್ಟ್ ಕಲಾಪಗಳನ್ನು ಅನುಮತಿಯಿಲ್ಲದೆ ಚಿತ್ರೀಕರಿಸುವಂತಿಲ್ಲ. ಸುನೀತಾ ಕೇಜ್ರಿವಾಲ್ ಹಾಗೂ ಇತರರು ಈ ವಿಡಿಯೊವನ್ನು ಮರುಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ ಎಂದು ಕೂಡ ಅವರು ತಿಳಿಸಿದರು.</p><p>ಸುನೀತಾ ಸೇರಿದಂತೆ ಆರು ಮಂದಿಗೆ ನೋಟಿಸ್ ಜಾರಿಗೆ ಆದೇಶಿಸಿರುವ ಪೀಠವು, ಈ ಪ್ರಕರಣದಲ್ಲಿ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ಸೂಚಿಸಿದೆ. ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿಚಾರಣೆ ಸಂದರ್ಭದ ವಿಡಿಯೊ ಒಂದನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಸಾಮಾಜಿಕ ಜಾಲತಾಣ ವೇದಿಕೆಗಳಾದ ಫೇಸ್ಬುಕ್, ಇನ್ಸ್ಟಾಗ್ರಾಂ, ಎಕ್ಸ್ ಮತ್ತು ಯೂಟ್ಯೂಬ್ಗೆ ದೆಹಲಿ ಹೈಕೋರ್ಟ್ ಶನಿವಾರ ಆದೇಶಿಸಿದೆ.</p><p>ಕೇಜ್ರಿವಾಲ್ ಅವರು ವಿಚಾರಣಾ ನ್ಯಾಯಾಲಯದಲ್ಲಿ ಮೌಖಿಕವಾಗಿ ವಾದ ಮಂಡಿಸಿದ್ದ ವಿಡಿಯೊ ಒಂದನ್ನು ಬೇರೆ ಬೇರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗಿದೆ ಎನ್ನಲಾಗಿದೆ.</p><p>ವೈಭವ್ ಸಿಂಗ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ನೀನಾ ಬನ್ಸಲ್ ಕೃಷ್ಣ ಮತ್ತು ಅಮಿತ್ ಶರ್ಮ ಅವರು ಇದ್ದ ವಿಭಾಗೀಯ ಪೀಠವು, ಕೋರ್ಟ್ ಕಲಾಪವನ್ನು ಚಿತ್ರೀಕರಿಸಿಕೊಂಡಿದ್ದು ನಿಯಮಗಳ ಉಲ್ಲಂಘನೆ, ಆ ವಿಡಿಯೊವನ್ನು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುವಂತೆ ಉಳಿಸಿಕೊಳ್ಳಲಾಗದು ಎಂದು ಹೇಳಿತು.</p><p>ಕೇಜ್ರಿವಾಲ್ ಅವರನ್ನು ಬಂಧಿಸಿ ಮಾರ್ಚ್ 28ರಂದು ಕೋರ್ಟ್ಗೆ ಹಾಜರುಪಡಿಸಲಾಯಿತು. ಅವರು ನ್ಯಾಯಾಧೀಶರನ್ನು ಉದ್ದೇಶಿಸಿ ತಾವೇ ಮಾತನಾಡಿದರು. ಇದನ್ನು ವಿಡಿಯೊ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಸಿಂಗ್ ಅವರು ಹೇಳಿದರು.</p><p>ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಕೋರ್ಟ್ ಕಲಾಪಗಳನ್ನು ಅನುಮತಿಯಿಲ್ಲದೆ ಚಿತ್ರೀಕರಿಸುವಂತಿಲ್ಲ. ಸುನೀತಾ ಕೇಜ್ರಿವಾಲ್ ಹಾಗೂ ಇತರರು ಈ ವಿಡಿಯೊವನ್ನು ಮರುಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ ಎಂದು ಕೂಡ ಅವರು ತಿಳಿಸಿದರು.</p><p>ಸುನೀತಾ ಸೇರಿದಂತೆ ಆರು ಮಂದಿಗೆ ನೋಟಿಸ್ ಜಾರಿಗೆ ಆದೇಶಿಸಿರುವ ಪೀಠವು, ಈ ಪ್ರಕರಣದಲ್ಲಿ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ಸೂಚಿಸಿದೆ. ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>