<p><strong>ನವದೆಹಲಿ:</strong> ಭಾರತ–ಯುಎಇ ನಡುವಿನ ಹಸ್ತಾಂತರ ಒಪ್ಪಂದದ ನಿಬಂಧನೆಗಳನ್ನು ಪ್ರಶ್ನಿಸಿ ಅಗಸ್ಟಾ ವೆಸ್ಟ್ಲ್ಯಾಂಡ್ ಹಗರಣದ ಆರೋಪಿ ಮೈಕೆಲ್ ಜೇಮ್ಸ್ ಸಲ್ಲಿಸಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ(ಇ.ಡಿ) ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಮೈಕೆಲ್ ಅರ್ಜಿಯ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಿರುವ ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಮನೋಜ್ ಜೈನ್ ಅವರ ಪೀಠವು, ಅರ್ಜಿಯ ವಿಚಾರಣೆಯನ್ನು 2026ರ ಏಪ್ರಿಲ್ 9ಕ್ಕೆ ಮುಂದೂಡಿದೆ.</p>.<p>ಸಂವಿಧಾನದ 17ನೇ ವಿಧಿಯಡಿ 1999ರಲ್ಲಿ ನಡೆದಿರುವ ಒಪ್ಪಂದವನ್ನು ಮೈಕೆಲ್ ಪ್ರಶ್ನಿಸಿದ್ದಾರೆ. ಈ ಒಪ್ಪಂದದ ಅನ್ವಯ ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಹಸ್ತಾಂತರ ಆದ ವ್ಯಕ್ತಿಗಳನ್ನು ನಿರ್ದಿಷ್ಟ ಪ್ರಕರಣ ಮಾತ್ರವಲ್ಲದೇ ಅದಕ್ಕೆ ಸಂಬಂಧಿಸಿದ ಇತರ ಪ್ರಕರಣಗಳಡಿಯೂ ವಿಚಾರಣೆಗೆ ಒಳಪಡಿಸಬಹುದು.</p>.<p>ಇದೇ ಒಪ್ಪಂದದ ಅಡಿಯಲ್ಲಿ ಮೈಕೆಲ್ ಅವರನ್ನು ದುಬೈ 2018ರಲ್ಲಿ ಭಾರತಕ್ಕೆ ಹಸ್ತಾಂತರಿಸಿತ್ತು. ಬಳಿಕ ಅವರನ್ನು ಸಿಬಿಐ ಮತ್ತು ಇ.ಡಿ ಬಂಧಿಸಿದ್ದವು.</p>.<p>‘ಯಾವ ಪ್ರಕರಣದ ಕಾರಣಕ್ಕೆ ಹಸ್ತಾಂತರ ನಡೆದಿದೆಯೋ ಆ ಪ್ರಕರಣ ಕುರಿತು ಮಾತ್ರ ಆರೋಪಿಯನ್ನು ವಿಚಾರಣೆಗೆ ಒಳಪಡಿಸಬೇಕು. ಇತರ ಪ್ರಕರಣಗಳ ಕುರಿತು ವಿಚಾರಣೆ ಮಾಡಬಾರದು’ ಎಂದು ಮೈಕೆಲ್ ಪರ ವಕೀಲರು ವಾದಿಸಿದ್ದಾರೆ.</p>.<p class="title">ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ಗೆ ಖರೀದಿಯಲ್ಲಿ ₹3,600 ಕೋಟಿ ಮೊತ್ತದ ಹಗರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೈಕೆಲ್ ಆರೋಪಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ–ಯುಎಇ ನಡುವಿನ ಹಸ್ತಾಂತರ ಒಪ್ಪಂದದ ನಿಬಂಧನೆಗಳನ್ನು ಪ್ರಶ್ನಿಸಿ ಅಗಸ್ಟಾ ವೆಸ್ಟ್ಲ್ಯಾಂಡ್ ಹಗರಣದ ಆರೋಪಿ ಮೈಕೆಲ್ ಜೇಮ್ಸ್ ಸಲ್ಲಿಸಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ(ಇ.ಡಿ) ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಮೈಕೆಲ್ ಅರ್ಜಿಯ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಿರುವ ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಮನೋಜ್ ಜೈನ್ ಅವರ ಪೀಠವು, ಅರ್ಜಿಯ ವಿಚಾರಣೆಯನ್ನು 2026ರ ಏಪ್ರಿಲ್ 9ಕ್ಕೆ ಮುಂದೂಡಿದೆ.</p>.<p>ಸಂವಿಧಾನದ 17ನೇ ವಿಧಿಯಡಿ 1999ರಲ್ಲಿ ನಡೆದಿರುವ ಒಪ್ಪಂದವನ್ನು ಮೈಕೆಲ್ ಪ್ರಶ್ನಿಸಿದ್ದಾರೆ. ಈ ಒಪ್ಪಂದದ ಅನ್ವಯ ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಹಸ್ತಾಂತರ ಆದ ವ್ಯಕ್ತಿಗಳನ್ನು ನಿರ್ದಿಷ್ಟ ಪ್ರಕರಣ ಮಾತ್ರವಲ್ಲದೇ ಅದಕ್ಕೆ ಸಂಬಂಧಿಸಿದ ಇತರ ಪ್ರಕರಣಗಳಡಿಯೂ ವಿಚಾರಣೆಗೆ ಒಳಪಡಿಸಬಹುದು.</p>.<p>ಇದೇ ಒಪ್ಪಂದದ ಅಡಿಯಲ್ಲಿ ಮೈಕೆಲ್ ಅವರನ್ನು ದುಬೈ 2018ರಲ್ಲಿ ಭಾರತಕ್ಕೆ ಹಸ್ತಾಂತರಿಸಿತ್ತು. ಬಳಿಕ ಅವರನ್ನು ಸಿಬಿಐ ಮತ್ತು ಇ.ಡಿ ಬಂಧಿಸಿದ್ದವು.</p>.<p>‘ಯಾವ ಪ್ರಕರಣದ ಕಾರಣಕ್ಕೆ ಹಸ್ತಾಂತರ ನಡೆದಿದೆಯೋ ಆ ಪ್ರಕರಣ ಕುರಿತು ಮಾತ್ರ ಆರೋಪಿಯನ್ನು ವಿಚಾರಣೆಗೆ ಒಳಪಡಿಸಬೇಕು. ಇತರ ಪ್ರಕರಣಗಳ ಕುರಿತು ವಿಚಾರಣೆ ಮಾಡಬಾರದು’ ಎಂದು ಮೈಕೆಲ್ ಪರ ವಕೀಲರು ವಾದಿಸಿದ್ದಾರೆ.</p>.<p class="title">ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ಗೆ ಖರೀದಿಯಲ್ಲಿ ₹3,600 ಕೋಟಿ ಮೊತ್ತದ ಹಗರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೈಕೆಲ್ ಆರೋಪಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>