<p><strong>ನವದೆಹಲಿ</strong>: ರಾಜಧಾನಿ ದೆಹಲಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬಿಸಿಲಿನ ಝಳದಿಂದ ಪಾರಾಗಲು ಬಸ್ಗಳಲ್ಲೂ ಪ್ರಯಾಣಿಕರಿಗೆ ಅಲ್ಲಿನ ಸರ್ಕಾರ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ. </p><p>3,000 ಬಸ್ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಪಂಕಜ್ ಸಿಂಗ್ ಹೇಳಿದ್ದಾರೆ.</p><p>‘ದೆಹಲಿಯ ಬಿಸಿಗಾಳಿ ಕ್ರಿಯಾ ಯೋಜನೆ’ಯಡಿಯಲ್ಲಿ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ಕುಡಿಯುವ ನೀರು ಪೂರೈಸುವ ‘ಜಲದೂತ್’ ಉಪಕ್ರಮಕ್ಕೆ ಅವರು ಚಾಲನೆ ನೀಡಿದರು.</p><p>'ಪ್ರಯಾಣಿಕರಿಗೆ ಉಚಿತ ಕುಡಿಯುವ ನೀರು ಒದಗಿಸಲು ಡಿಟಿಸಿ, ದೆಹಲಿಯಾದ್ಯಂತ 23 ಪ್ರಮುಖ ಬಸ್ ಟರ್ಮಿನಲ್ಗಳಲ್ಲಿ 'ಜಲದೂತ್'ಗಳನ್ನು ಅಳವಡಿಸಿದೆ’ಎಂದು ಸಿಂಗ್ ಹೇಳಿದ್ದಾರೆ.</p><p>ಈ ಉಪಕ್ರಮವನ್ನು ಮತ್ತಷ್ಟು ಬಲಪಡಿಸುತ್ತಾ, ನಗರದಾದ್ಯಂತ ಸಂಚರಿಸುವ ಸುಮಾರು 3,000 ಡಿಟಿಸಿ ಬಸ್ಗಳಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದೂ ಅವರು ಮಾಹಿತಿ ನೀಡಿದರು. </p><p>ಜನಸಾಮಾನ್ಯರಿಗೆ, ಅದರಲ್ಲೂ ತೀವ್ರ ಶಾಖದ ಪರಿಸ್ಥಿತಿಗಳಲ್ಲಿ ಬಳಲುವ ಪ್ರಯಾಣಿಕರಿಗೆ ತಕ್ಷಣದ ಪರಿಹಾರವನ್ನು ನೀಡುವ ಗುರಿಯನ್ನು ಈ ಉಪಕ್ರಮ ಹೊಂದಿದೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜಧಾನಿ ದೆಹಲಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬಿಸಿಲಿನ ಝಳದಿಂದ ಪಾರಾಗಲು ಬಸ್ಗಳಲ್ಲೂ ಪ್ರಯಾಣಿಕರಿಗೆ ಅಲ್ಲಿನ ಸರ್ಕಾರ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ. </p><p>3,000 ಬಸ್ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಪಂಕಜ್ ಸಿಂಗ್ ಹೇಳಿದ್ದಾರೆ.</p><p>‘ದೆಹಲಿಯ ಬಿಸಿಗಾಳಿ ಕ್ರಿಯಾ ಯೋಜನೆ’ಯಡಿಯಲ್ಲಿ ದೆಹಲಿ ಸಾರಿಗೆ ನಿಗಮದಲ್ಲಿ(ಡಿಟಿಸಿ) ಕುಡಿಯುವ ನೀರು ಪೂರೈಸುವ ‘ಜಲದೂತ್’ ಉಪಕ್ರಮಕ್ಕೆ ಅವರು ಚಾಲನೆ ನೀಡಿದರು.</p><p>'ಪ್ರಯಾಣಿಕರಿಗೆ ಉಚಿತ ಕುಡಿಯುವ ನೀರು ಒದಗಿಸಲು ಡಿಟಿಸಿ, ದೆಹಲಿಯಾದ್ಯಂತ 23 ಪ್ರಮುಖ ಬಸ್ ಟರ್ಮಿನಲ್ಗಳಲ್ಲಿ 'ಜಲದೂತ್'ಗಳನ್ನು ಅಳವಡಿಸಿದೆ’ಎಂದು ಸಿಂಗ್ ಹೇಳಿದ್ದಾರೆ.</p><p>ಈ ಉಪಕ್ರಮವನ್ನು ಮತ್ತಷ್ಟು ಬಲಪಡಿಸುತ್ತಾ, ನಗರದಾದ್ಯಂತ ಸಂಚರಿಸುವ ಸುಮಾರು 3,000 ಡಿಟಿಸಿ ಬಸ್ಗಳಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದೂ ಅವರು ಮಾಹಿತಿ ನೀಡಿದರು. </p><p>ಜನಸಾಮಾನ್ಯರಿಗೆ, ಅದರಲ್ಲೂ ತೀವ್ರ ಶಾಖದ ಪರಿಸ್ಥಿತಿಗಳಲ್ಲಿ ಬಳಲುವ ಪ್ರಯಾಣಿಕರಿಗೆ ತಕ್ಷಣದ ಪರಿಹಾರವನ್ನು ನೀಡುವ ಗುರಿಯನ್ನು ಈ ಉಪಕ್ರಮ ಹೊಂದಿದೆ ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>