<p><strong>ನವದೆಹಲಿ</strong>: ಮಹಿಳೆ ಅಳುತ್ತಿದ್ದಳು ಎಂಬ ಮಾತ್ರಕ್ಕೆ ವರದಕ್ಷಿಣೆ ಕಿರುಕುಳ ಪ್ರಕರಣವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. </p><p>ವರದಕ್ಷಿಣೆ ಕಿರುಕುಳದ ಆರೋಪದಡಿ ಮಹಿಳೆಯ ಪತಿ ಹಾಗೂ ಆತನ ಕುಟುಂಬದ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ, ಈ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ.</p><p>ಡಿಸೆಂಬರ್ 2010ರಲ್ಲಿ ವಿವಾಹವಾಗಿದ್ದ ಮಹಿಳೆ, ತನ್ನ ಪತಿ ಮತ್ತು ಅತ್ತೆ–ಮಾವನ ವಿರುದ್ಧ ಕಿರುಕುಳ ಆರೋಪ ಮಾಡಿದ್ದರು. ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.</p>.ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5 ಲಕ್ಷ: ಯತ್ನಾಳ.ಕಥುವಾ ಮೇಘಸ್ಫೋಟ: ಮೃತರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಸಿಎಂ ಓಮರ್. <p>ಮದುವೆಗೆ ಸುಮಾರು ₹4 ಲಕ್ಷ ಖರ್ಚು ಮಾಡಿರುವುದಾಗಿ ಆಕೆಯ ಕುಟುಂಬದವರು ಹೇಳಿಕೊಂಡಿದ್ದು, ಪತಿ ಮತ್ತು ಅತ್ತೆ-ಮಾವ ಬೈಕ್, ನಗದು ಮತ್ತು ಚಿನ್ನದ ಬಳೆಗಾಗಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.</p><p>ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿದ್ದ ಮಹಿಳೆ 2014ರ ಮಾರ್ಚ್ 31ರಂದು ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯು ಕ್ರೌರ್ಯಯಿಂದ ಮೃತಪಟ್ಟಿಲ್ಲ, ನ್ಯುಮೋನಿಯಾ ಜ್ವರದ ಕಾರಣದಿಂದ ಮೃತಪಟ್ಟಿದ್ದಾರೆ ಎಂಬುವುದನ್ನು ವಿಚಾರಣಾ ನ್ಯಾಯಾಲಯ ಗಮನಿಸಿತ್ತು. ಆರೋಪಿಯನ್ನು ಖುಲಾಸೆಗೊಳಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.</p>.ಮತಗಳ್ಳತನ ಆರೋಪಕ್ಕೆ ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಿ: ರಾಹುಲ್ಗೆ ಚುನಾವಣಾ ಆಯೋಗ.Bengaluru Metro: ಹಳದಿ ಮಾರ್ಗದಲ್ಲಿ ಸೋಮವಾರ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ. <p>ಮೃತ ಮಹಿಳೆಯ ಸಹೋದರಿಯು ತನ್ನ ಸಹೋದರಿ ಬದುಕಿದ್ದ ವೇಳೆ ಹೋಳಿ ಹಬ್ಬದ ಸಂದರ್ಭದಲ್ಲಿ ಆಕೆಗೆ ಕರೆ ಮಾಡಿದ್ದೆ. ಆ ವೇಳೆ ಆಕೆ ತುಂಬಾ ನೋವಿನಲ್ಲಿದ್ದಳು. ಅಳುತ್ತಿದ್ದಳು ಎಂದು ಸಿಆರ್ಪಿಸಿ ಸೆಕ್ಷನ್ 161ರ ಅಡಿಯಲ್ಲಿ ಹೇಳಿಕೆ ನೀಡಿದ್ದರು.</p><p>'ಅಳುತ್ತಿದ್ದಳು' ಎಂದ ಮಾತ್ರಕ್ಕೆ ಆಕೆಗೆ ಕಿರುಕುಳ ನೀಡಲಾಗಿತ್ತು ಎಂಬ ಅರ್ಥವಲ್ಲ. ಹೀಗಾಗಿ ವರದಕ್ಷಿಣೆ ಕಿರುಕುಳ ಎಂದು ಪರಿಗಣಿಸಲು ಆಗುವುದೂ ಇಲ್ಲ. ಮಹಿಳೆಯ ತಂದೆ ನಿರ್ದಿಷ್ಟ ಘಟನೆಗಳನ್ನು ಉಲ್ಲೇಖಿಸಿಲ್ಲ ಅಥವಾ ಆರೋಪಿಗೆ ಹಣ ನೀಡಿದ್ದಕ್ಕೆ ಪುರಾವೆಗಳನ್ನೂ ಒದಗಿಸಿಲ್ಲ ಎಂದು ಹೈಕೋರ್ಟ್ ಹೇಳಿದೆ.</p>.'ವಾರ್2' ಸಿನಿಮಾ ₹100 ಕೋಟಿ ಗಳಿಕೆ; ಜೂನಿಯರ್ NTR,ಹೃತಿಕ್ ರೋಷನ್ ಹೇಳಿದ್ದೇನು?.ತಾಯಿಯ ಮೇಲೆಯೇ ಎರಡೆರಡು ಬಾರಿ ಅತ್ಯಾಚಾರ: ಪಾಪಿ ಪುತ್ರನ ಹೀನ ಕೃತ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹಿಳೆ ಅಳುತ್ತಿದ್ದಳು ಎಂಬ ಮಾತ್ರಕ್ಕೆ ವರದಕ್ಷಿಣೆ ಕಿರುಕುಳ ಪ್ರಕರಣವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. </p><p>ವರದಕ್ಷಿಣೆ ಕಿರುಕುಳದ ಆರೋಪದಡಿ ಮಹಿಳೆಯ ಪತಿ ಹಾಗೂ ಆತನ ಕುಟುಂಬದ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ, ಈ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ.</p><p>ಡಿಸೆಂಬರ್ 2010ರಲ್ಲಿ ವಿವಾಹವಾಗಿದ್ದ ಮಹಿಳೆ, ತನ್ನ ಪತಿ ಮತ್ತು ಅತ್ತೆ–ಮಾವನ ವಿರುದ್ಧ ಕಿರುಕುಳ ಆರೋಪ ಮಾಡಿದ್ದರು. ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.</p>.ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5 ಲಕ್ಷ: ಯತ್ನಾಳ.ಕಥುವಾ ಮೇಘಸ್ಫೋಟ: ಮೃತರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಸಿಎಂ ಓಮರ್. <p>ಮದುವೆಗೆ ಸುಮಾರು ₹4 ಲಕ್ಷ ಖರ್ಚು ಮಾಡಿರುವುದಾಗಿ ಆಕೆಯ ಕುಟುಂಬದವರು ಹೇಳಿಕೊಂಡಿದ್ದು, ಪತಿ ಮತ್ತು ಅತ್ತೆ-ಮಾವ ಬೈಕ್, ನಗದು ಮತ್ತು ಚಿನ್ನದ ಬಳೆಗಾಗಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.</p><p>ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿದ್ದ ಮಹಿಳೆ 2014ರ ಮಾರ್ಚ್ 31ರಂದು ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯು ಕ್ರೌರ್ಯಯಿಂದ ಮೃತಪಟ್ಟಿಲ್ಲ, ನ್ಯುಮೋನಿಯಾ ಜ್ವರದ ಕಾರಣದಿಂದ ಮೃತಪಟ್ಟಿದ್ದಾರೆ ಎಂಬುವುದನ್ನು ವಿಚಾರಣಾ ನ್ಯಾಯಾಲಯ ಗಮನಿಸಿತ್ತು. ಆರೋಪಿಯನ್ನು ಖುಲಾಸೆಗೊಳಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.</p>.ಮತಗಳ್ಳತನ ಆರೋಪಕ್ಕೆ ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಿ: ರಾಹುಲ್ಗೆ ಚುನಾವಣಾ ಆಯೋಗ.Bengaluru Metro: ಹಳದಿ ಮಾರ್ಗದಲ್ಲಿ ಸೋಮವಾರ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ. <p>ಮೃತ ಮಹಿಳೆಯ ಸಹೋದರಿಯು ತನ್ನ ಸಹೋದರಿ ಬದುಕಿದ್ದ ವೇಳೆ ಹೋಳಿ ಹಬ್ಬದ ಸಂದರ್ಭದಲ್ಲಿ ಆಕೆಗೆ ಕರೆ ಮಾಡಿದ್ದೆ. ಆ ವೇಳೆ ಆಕೆ ತುಂಬಾ ನೋವಿನಲ್ಲಿದ್ದಳು. ಅಳುತ್ತಿದ್ದಳು ಎಂದು ಸಿಆರ್ಪಿಸಿ ಸೆಕ್ಷನ್ 161ರ ಅಡಿಯಲ್ಲಿ ಹೇಳಿಕೆ ನೀಡಿದ್ದರು.</p><p>'ಅಳುತ್ತಿದ್ದಳು' ಎಂದ ಮಾತ್ರಕ್ಕೆ ಆಕೆಗೆ ಕಿರುಕುಳ ನೀಡಲಾಗಿತ್ತು ಎಂಬ ಅರ್ಥವಲ್ಲ. ಹೀಗಾಗಿ ವರದಕ್ಷಿಣೆ ಕಿರುಕುಳ ಎಂದು ಪರಿಗಣಿಸಲು ಆಗುವುದೂ ಇಲ್ಲ. ಮಹಿಳೆಯ ತಂದೆ ನಿರ್ದಿಷ್ಟ ಘಟನೆಗಳನ್ನು ಉಲ್ಲೇಖಿಸಿಲ್ಲ ಅಥವಾ ಆರೋಪಿಗೆ ಹಣ ನೀಡಿದ್ದಕ್ಕೆ ಪುರಾವೆಗಳನ್ನೂ ಒದಗಿಸಿಲ್ಲ ಎಂದು ಹೈಕೋರ್ಟ್ ಹೇಳಿದೆ.</p>.'ವಾರ್2' ಸಿನಿಮಾ ₹100 ಕೋಟಿ ಗಳಿಕೆ; ಜೂನಿಯರ್ NTR,ಹೃತಿಕ್ ರೋಷನ್ ಹೇಳಿದ್ದೇನು?.ತಾಯಿಯ ಮೇಲೆಯೇ ಎರಡೆರಡು ಬಾರಿ ಅತ್ಯಾಚಾರ: ಪಾಪಿ ಪುತ್ರನ ಹೀನ ಕೃತ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>