<p><strong>ನವದೆಹಲಿ:</strong> ‘ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಸಲ್ಲಿಸುವ ಸ್ಥಿತಿಗತಿ ವರದಿಗಳು ಅಥವಾ ಇತರೆ ಯಾವುದೇ ದಾಖಲೆಗಳಲ್ಲಿ ಸಂತ್ರಸ್ತೆಯರ ಹೆಸರು, ಪೋಷಕರ ಹೆಸರು ಮತ್ತು ಅವರ ಮನೆ ವಿಳಾಸದಂಥ ಮಾಹಿತಿಗಳನ್ನು ಬಹಿರಂಗಪಡಿಸಬಾರದು’ ಎಂದು ದೆಹಲಿ ಹೈಕೋರ್ಟ್ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಿದೆ.</p>.<p>ಪೋಕ್ಸೊ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ದೆಹಲಿಯ ಪೊಲೀಸ್ ಕಮಿಷನರ್ ಅವರನ್ನು ನ್ಯಾಯಾಲಯಕ್ಕೆ ಕರೆಸಿ ಈ ನಿರ್ದೇಶನ ನೀಡಿದ್ದಾರೆ. ತಮ್ಮ ವ್ಯಾಪ್ತಿಯ ಎಲ್ಲ ಠಾಣಾಧಿಕಾರಿಗಳು ಮತ್ತು ತನಿಖಾಧಿಕಾರಿಗಳಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಬೇಕು ಎಂದೂ ತಾಕೀತು ಮಾಡಿದ್ದಾರೆ. </p>.<p>ಪೊಲೀಸರು ತಾವು ಸಲ್ಲಿಸಿದ್ದ ವರದಿಯಲ್ಲಿ ದೂರು ನೀಡಿದ ಸಂತ್ರಸ್ತೆ ಹೆಸರನ್ನು ಉಲ್ಲೇಖಿಸಿದ್ದರು. ವಿಚಾರಣೆ ವೇಳೆ ಇದನ್ನು ಗಮನಿಸಿದ ನ್ಯಾಯಾಲಯವು ಈ ಬಗ್ಗೆ ಕಳವಳ ವ್ಯಕ್ತಪಡಿಸಿತು. ‘ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಬಾರದು ಎಂದು ಕಾನೂನಲ್ಲಿದೆ. ಇದನ್ನು ಎಲ್ಲರೂ ಪಾಲಿಸಲೇಬೇಕು’ ಎಂದಿತು.</p>.<p>‘ವರದಿಗಳಲ್ಲಿ ಸಂತ್ರಸ್ತೆಯ ಗುರುತು ಬಹಿರಂಗವಾಗದಂತೆ ನೋಡಿಕೊಳ್ಳುವ ಬಗ್ಗೆ ಇರುವ ಕಾನೂನು ಪಾಲಿಸುವಂತೆ ತನಿಖಾಧಿಕಾರಿಗಳಿಗೆ ಸೂಚನೆ ನೀಡಿ. ಈ ಆದೇಶದ ಪ್ರತಿಯನ್ನು ಎಲ್ಲ ಠಾಣಾಧಿಕಾರಿಗಳು ಹಾಗೂ ತನಿಖಾಧಿಕಾರಿಗಳಿಗೆ ತಲುಪಿಸಬೇಕು’ ಎಂದು ದೆಹಲಿಯ ಪೊಲೀಸ್ ಕಮಿಷನರ್ ಮತ್ತು ಡಿಸಿಪಿಗಳಿಗೆ ನ್ಯಾಯಾಲಯ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಸಲ್ಲಿಸುವ ಸ್ಥಿತಿಗತಿ ವರದಿಗಳು ಅಥವಾ ಇತರೆ ಯಾವುದೇ ದಾಖಲೆಗಳಲ್ಲಿ ಸಂತ್ರಸ್ತೆಯರ ಹೆಸರು, ಪೋಷಕರ ಹೆಸರು ಮತ್ತು ಅವರ ಮನೆ ವಿಳಾಸದಂಥ ಮಾಹಿತಿಗಳನ್ನು ಬಹಿರಂಗಪಡಿಸಬಾರದು’ ಎಂದು ದೆಹಲಿ ಹೈಕೋರ್ಟ್ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಿದೆ.</p>.<p>ಪೋಕ್ಸೊ ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ದೆಹಲಿಯ ಪೊಲೀಸ್ ಕಮಿಷನರ್ ಅವರನ್ನು ನ್ಯಾಯಾಲಯಕ್ಕೆ ಕರೆಸಿ ಈ ನಿರ್ದೇಶನ ನೀಡಿದ್ದಾರೆ. ತಮ್ಮ ವ್ಯಾಪ್ತಿಯ ಎಲ್ಲ ಠಾಣಾಧಿಕಾರಿಗಳು ಮತ್ತು ತನಿಖಾಧಿಕಾರಿಗಳಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಬೇಕು ಎಂದೂ ತಾಕೀತು ಮಾಡಿದ್ದಾರೆ. </p>.<p>ಪೊಲೀಸರು ತಾವು ಸಲ್ಲಿಸಿದ್ದ ವರದಿಯಲ್ಲಿ ದೂರು ನೀಡಿದ ಸಂತ್ರಸ್ತೆ ಹೆಸರನ್ನು ಉಲ್ಲೇಖಿಸಿದ್ದರು. ವಿಚಾರಣೆ ವೇಳೆ ಇದನ್ನು ಗಮನಿಸಿದ ನ್ಯಾಯಾಲಯವು ಈ ಬಗ್ಗೆ ಕಳವಳ ವ್ಯಕ್ತಪಡಿಸಿತು. ‘ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಬಾರದು ಎಂದು ಕಾನೂನಲ್ಲಿದೆ. ಇದನ್ನು ಎಲ್ಲರೂ ಪಾಲಿಸಲೇಬೇಕು’ ಎಂದಿತು.</p>.<p>‘ವರದಿಗಳಲ್ಲಿ ಸಂತ್ರಸ್ತೆಯ ಗುರುತು ಬಹಿರಂಗವಾಗದಂತೆ ನೋಡಿಕೊಳ್ಳುವ ಬಗ್ಗೆ ಇರುವ ಕಾನೂನು ಪಾಲಿಸುವಂತೆ ತನಿಖಾಧಿಕಾರಿಗಳಿಗೆ ಸೂಚನೆ ನೀಡಿ. ಈ ಆದೇಶದ ಪ್ರತಿಯನ್ನು ಎಲ್ಲ ಠಾಣಾಧಿಕಾರಿಗಳು ಹಾಗೂ ತನಿಖಾಧಿಕಾರಿಗಳಿಗೆ ತಲುಪಿಸಬೇಕು’ ಎಂದು ದೆಹಲಿಯ ಪೊಲೀಸ್ ಕಮಿಷನರ್ ಮತ್ತು ಡಿಸಿಪಿಗಳಿಗೆ ನ್ಯಾಯಾಲಯ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>