<p><strong>ನವದೆಹಲಿ</strong>: ದೆಹಲಿ ಗಲಭೆ ಜೊತೆ ನಂಟಿನ ಭಯೋತ್ಪಾದಕ ಕೃತ್ಯ ಪ್ರಕರಣಕ್ಕೆ ಸಂಬಂಧಿಸಿ ಐದು ವರ್ಷಗಳು ಗತಿಸಿದರೂ ವಾದ ಪೂರ್ಣಗೊಂಡಿಲ್ಲ. ಹೀಗಾಗಿ, ಆರೋಪಿಗಳು ಎಷ್ಟು ಕಾಲ ಸೆರೆವಾಸ ಅನುಭವಿಸಬೇಕು ಎಂದು ದೆಹಲಿ ಪೊಲೀಸರನ್ನು ದೆಹಲಿ ಹೈಕೋರ್ಟ್ ಮಂಗಳವಾರ ಪ್ರಶ್ನಿಸಿದೆ.</p>.<p>ಈ ಪ್ರಕರಣದ ಆರೋಪಿಗಳಲ್ಲೊಬ್ಬರಾದ ತಸ್ಲೀಮ್ ಅಹ್ಮದ್ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಸುಬ್ರಮಣಿಯಮ್ ಪ್ರಸಾದ ಮತ್ತು ಹರೀಶ ವೈದ್ಯನಾಥನ್ ಶಂಕರ್ ಅವರು ಇದ್ದ ನ್ಯಾಯಪೀಠ ಈ ಪ್ರಶ್ನೆಯನ್ನು ಮುಂದಿಟ್ಟಿತು.</p>.<p>ದೆಹಲಿಯಲ್ಲಿ 2020ರಲ್ಲಿ ಗಲಭೆ ಸೃಷ್ಟಿಸಲು ಪಿತೂರಿ ನಡೆಸಿದ ಆರೋಪದಡಿ ತಸ್ಲೀಮ್ ಅಹ್ಮದ್ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಲಾಗಿದೆ.</p>.<p>‘ಈ ಪ್ರಕರಣದಲ್ಲಿ ಐದು ವರ್ಷಗಳು ಗತಿಸಿದರೂ ವಾದ ಪೂರ್ಣಗೊಂಡಿಲ್ಲ. 700 ಮಂದಿ ಸಾಕ್ಷಿಗಳು ಇದ್ದಾರೆ. ಹೀಗಾದಲ್ಲಿ ಒಬ್ಬ ವ್ಯಕ್ತಿಯನ್ನು ಎಷ್ಟು ದಿನ ಜೈಲಿನಲ್ಲಿ ಇರಿಸಲು ಸಾಧ್ಯ’ ಎಂದು ಪ್ರಾಸಿಕ್ಯೂಶನ್ಗೆ ನ್ಯಾಯಪೀಠ ಪ್ರಶ್ನಿಸಿತು.</p>.<p>ತಸ್ಲೀಮ್ ಅಹ್ಮದ್ ಪರ ಹಾಜರಿದ್ದ ವಕೀಲ ಮೆಹಮೂದ್ ಪ್ರಾಚಾ, ‘ವಾದ ಮಂಡನೆಯಲ್ಲಿ ವಿಳಂಬವಾಗುತ್ತಿದೆ ಎಂಬ ಆಧಾರದಡಿ, ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ದೇವಾಂಗನಾ ಕಲಿಟ, ಆಸಿಫ್ ಇಕ್ಬಾಲ್ ತನ್ಹಾ ಹಾಗೂ ನಟಾಶ ನರ್ವಾಲ್ ಅವರಿಗೆ 2021ರಲ್ಲಿ ಜಾಮೀನು ನೀಡಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ನನ್ನ ಕಕ್ಷಿದಾರನನ್ನು 2020ರ ಜೂನ್ 24ರಂದು ಬಂಧಿಸಲಾಗಿದ್ದು, ಐದು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ನನ್ನ ಕಕ್ಷಿದಾರ ಸಹಕರಿಸುತ್ತಿದ್ದು, ಅವರಿಂದ ವಿಚಾರಣೆಯೂ ವಿಳಂಬ ಆಗಿಲ್ಲ. ಆದರೂ, ಜಾಮೀನು ದೊರೆಯುತ್ತಿಲ್ಲ’ ಎಂದೂ ತಿಳಿಸಿದರು.</p>.<p>ವಾದ–ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಬುಧವಾರ ಮುಂದುವರಿಸುವುದಾಗಿ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಗಲಭೆ ಜೊತೆ ನಂಟಿನ ಭಯೋತ್ಪಾದಕ ಕೃತ್ಯ ಪ್ರಕರಣಕ್ಕೆ ಸಂಬಂಧಿಸಿ ಐದು ವರ್ಷಗಳು ಗತಿಸಿದರೂ ವಾದ ಪೂರ್ಣಗೊಂಡಿಲ್ಲ. ಹೀಗಾಗಿ, ಆರೋಪಿಗಳು ಎಷ್ಟು ಕಾಲ ಸೆರೆವಾಸ ಅನುಭವಿಸಬೇಕು ಎಂದು ದೆಹಲಿ ಪೊಲೀಸರನ್ನು ದೆಹಲಿ ಹೈಕೋರ್ಟ್ ಮಂಗಳವಾರ ಪ್ರಶ್ನಿಸಿದೆ.</p>.<p>ಈ ಪ್ರಕರಣದ ಆರೋಪಿಗಳಲ್ಲೊಬ್ಬರಾದ ತಸ್ಲೀಮ್ ಅಹ್ಮದ್ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಸುಬ್ರಮಣಿಯಮ್ ಪ್ರಸಾದ ಮತ್ತು ಹರೀಶ ವೈದ್ಯನಾಥನ್ ಶಂಕರ್ ಅವರು ಇದ್ದ ನ್ಯಾಯಪೀಠ ಈ ಪ್ರಶ್ನೆಯನ್ನು ಮುಂದಿಟ್ಟಿತು.</p>.<p>ದೆಹಲಿಯಲ್ಲಿ 2020ರಲ್ಲಿ ಗಲಭೆ ಸೃಷ್ಟಿಸಲು ಪಿತೂರಿ ನಡೆಸಿದ ಆರೋಪದಡಿ ತಸ್ಲೀಮ್ ಅಹ್ಮದ್ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಲಾಗಿದೆ.</p>.<p>‘ಈ ಪ್ರಕರಣದಲ್ಲಿ ಐದು ವರ್ಷಗಳು ಗತಿಸಿದರೂ ವಾದ ಪೂರ್ಣಗೊಂಡಿಲ್ಲ. 700 ಮಂದಿ ಸಾಕ್ಷಿಗಳು ಇದ್ದಾರೆ. ಹೀಗಾದಲ್ಲಿ ಒಬ್ಬ ವ್ಯಕ್ತಿಯನ್ನು ಎಷ್ಟು ದಿನ ಜೈಲಿನಲ್ಲಿ ಇರಿಸಲು ಸಾಧ್ಯ’ ಎಂದು ಪ್ರಾಸಿಕ್ಯೂಶನ್ಗೆ ನ್ಯಾಯಪೀಠ ಪ್ರಶ್ನಿಸಿತು.</p>.<p>ತಸ್ಲೀಮ್ ಅಹ್ಮದ್ ಪರ ಹಾಜರಿದ್ದ ವಕೀಲ ಮೆಹಮೂದ್ ಪ್ರಾಚಾ, ‘ವಾದ ಮಂಡನೆಯಲ್ಲಿ ವಿಳಂಬವಾಗುತ್ತಿದೆ ಎಂಬ ಆಧಾರದಡಿ, ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ದೇವಾಂಗನಾ ಕಲಿಟ, ಆಸಿಫ್ ಇಕ್ಬಾಲ್ ತನ್ಹಾ ಹಾಗೂ ನಟಾಶ ನರ್ವಾಲ್ ಅವರಿಗೆ 2021ರಲ್ಲಿ ಜಾಮೀನು ನೀಡಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ನನ್ನ ಕಕ್ಷಿದಾರನನ್ನು 2020ರ ಜೂನ್ 24ರಂದು ಬಂಧಿಸಲಾಗಿದ್ದು, ಐದು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ನನ್ನ ಕಕ್ಷಿದಾರ ಸಹಕರಿಸುತ್ತಿದ್ದು, ಅವರಿಂದ ವಿಚಾರಣೆಯೂ ವಿಳಂಬ ಆಗಿಲ್ಲ. ಆದರೂ, ಜಾಮೀನು ದೊರೆಯುತ್ತಿಲ್ಲ’ ಎಂದೂ ತಿಳಿಸಿದರು.</p>.<p>ವಾದ–ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಬುಧವಾರ ಮುಂದುವರಿಸುವುದಾಗಿ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>