<p><strong>ನವದೆಹಲಿ</strong>: ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.</p><p>ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರು ವಿಚಾರಣೆಯನ್ನು ಏಪ್ರಿಲ್ 28ಕ್ಕೆ ನಿಗದಿ ಮಾಡಿದ್ದಾರೆ.</p><p>ತರೂರ್ ಅವರು 2024ರ ಏಪ್ರಿಲ್ನಲ್ಲಿ ಸಾರ್ವಜನಿಕವಾಗಿ ಹಲವು ವೇದಿಕೆಗಳಲ್ಲಿ ಆಡಿರುವ ಮಾತುಗಳು ಮಾನಹಾನಿಕರವಾಗಿ ಇದ್ದವು. ಆ ಮಾತುಗಳು ತಮ್ಮ ಪ್ರತಿಷ್ಠೆಯನ್ನು ಹಾಳುಮಾಡಿವೆ ಎಂದು ರಾಜೀವ್ ಅವರು ಅರ್ಜಿಯಲ್ಲಿ ಹೇಳಿದ್ದಾರೆ.</p><p>ಮಾನಹಾನಿಕರ ರೀತಿಯಲ್ಲಿ ಮಾತನಾಡದಂತೆ ತರೂರ್ ಅವರಿಗೆ ಸೂಚಿಸಬೇಕು ಎಂದು ರಾಜೀವ್ ಅವರು ಕೋರಿದ್ದಾರೆ. ಅಲ್ಲದೆ, ತರೂರ್ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು, ಹೆಸರು ಹಾಳುಮಾಡಿದ್ದಕ್ಕಾಗಿ ತಮಗೆ ತರೂರ್ ಅವರು ₹10 ಕೋಟಿ ಪರಿಹಾರ ಕೊಡಬೇಕು ಎಂದು ಕೂಡ ರಾಜೀವ್ ಕೋರಿದ್ದಾರೆ.</p><p>2024ರ ಲೋಕಸಭಾ ಚುನಾವಣೆಯಲ್ಲಿ ರಾಜೀವ್ ಅವರು ಮತದಾರರಿಗೆ ಹಣ ನೀಡಿದ್ದರು ಎಂದು ತರೂರ್ ಅವರು ಸುದ್ದಿವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು ಎಂಬ ಆರೋಪ ಇದೆ. ಈ ಮಾತುಗಳಿಗೆ ಸಂಬಂಧಿಸಿದಂತೆ ರಾಜೀವ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.</p><p>ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರು ವಿಚಾರಣೆಯನ್ನು ಏಪ್ರಿಲ್ 28ಕ್ಕೆ ನಿಗದಿ ಮಾಡಿದ್ದಾರೆ.</p><p>ತರೂರ್ ಅವರು 2024ರ ಏಪ್ರಿಲ್ನಲ್ಲಿ ಸಾರ್ವಜನಿಕವಾಗಿ ಹಲವು ವೇದಿಕೆಗಳಲ್ಲಿ ಆಡಿರುವ ಮಾತುಗಳು ಮಾನಹಾನಿಕರವಾಗಿ ಇದ್ದವು. ಆ ಮಾತುಗಳು ತಮ್ಮ ಪ್ರತಿಷ್ಠೆಯನ್ನು ಹಾಳುಮಾಡಿವೆ ಎಂದು ರಾಜೀವ್ ಅವರು ಅರ್ಜಿಯಲ್ಲಿ ಹೇಳಿದ್ದಾರೆ.</p><p>ಮಾನಹಾನಿಕರ ರೀತಿಯಲ್ಲಿ ಮಾತನಾಡದಂತೆ ತರೂರ್ ಅವರಿಗೆ ಸೂಚಿಸಬೇಕು ಎಂದು ರಾಜೀವ್ ಅವರು ಕೋರಿದ್ದಾರೆ. ಅಲ್ಲದೆ, ತರೂರ್ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು, ಹೆಸರು ಹಾಳುಮಾಡಿದ್ದಕ್ಕಾಗಿ ತಮಗೆ ತರೂರ್ ಅವರು ₹10 ಕೋಟಿ ಪರಿಹಾರ ಕೊಡಬೇಕು ಎಂದು ಕೂಡ ರಾಜೀವ್ ಕೋರಿದ್ದಾರೆ.</p><p>2024ರ ಲೋಕಸಭಾ ಚುನಾವಣೆಯಲ್ಲಿ ರಾಜೀವ್ ಅವರು ಮತದಾರರಿಗೆ ಹಣ ನೀಡಿದ್ದರು ಎಂದು ತರೂರ್ ಅವರು ಸುದ್ದಿವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು ಎಂಬ ಆರೋಪ ಇದೆ. ಈ ಮಾತುಗಳಿಗೆ ಸಂಬಂಧಿಸಿದಂತೆ ರಾಜೀವ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>