‘ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವು ಸಿಎಎ ಜಾರಿಗೊಳಿಸಿ ನಮಗೆ ಪೌರತ್ವ ನೀಡಲು ಹೊರಟಿರುವಾಗ, ಬೇರೆ ಪಕ್ಷಗಳು ಏಕೆ ವಿರೋಧ ವ್ಯಕ್ತಪಡಿಸುತ್ತಿವೆ. ಈ ಕಾನೂನನ್ನು ವಿರೋಧಿಸುತ್ತಿರುವವರ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆ’ ಎಂದು ಪ್ರತಿಭಟನಾಕಾರರಲ್ಲಿ ಓರ್ವರಾದ ರಂಜು ರಾಮ್ ಹೇಳಿದರು.
ಸಿಎಎ ಜಾರಿ ವಿರೋಧಿಸಿ ಹೇಳಿಕೆ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಸಿವಿಲ್ ಲೈನ್ಸ್ನಲ್ಲಿರುವ ಅವರ ನಿವಾಸದ ಮುಂದೆ ಗುರುವಾರ ಹಿಂದೂ, ಸಿಖ್ ನಿರಾಶ್ರಿತರು ಪ್ರತಿಭಟನೆ ನಡೆಸಿದ್ದರು.