ಈ ಸಂಬಂಧ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಿಗೆ ಪತ್ರ ಬರೆದಿರುವ ನರ್ಸಿಂಗ್ ಅಧೀಕ್ಷಕರು, ‘ ಮಲಯಾಳ ಭಾಷೆ ಮಾತನಾಡುವ ದಾದಿಯರ ವಿರುದ್ಧ ಯಾವುದೇ ಕೆಟ್ಟ ಉದ್ದೇಶವಿರಲಿಲ್ಲ. ಸಕಾರಾತ್ಮಕ ಭಾವನೆಯಿಂದ ಈ ಸುತ್ತೋಲೆಯನ್ನು ಹೊರಡಿಸಲಾಗಿತ್ತು. ಸುತ್ತೋಲೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ವಿವರಿಸುವ ಅವಕಾಶವೂ ನನಗೆ ಸಿಕ್ಕಿರಲಿಲ್ಲ. ಮೇ 31, ಜೂನ್ 1 ಮತ್ತು ಜೂನ್ 2ರಂದು ಕೇಳಿ ಬಂದ ದೂರುಗಳ ಆಧಾರದ ಮೇಲೆ ಈ ಕ್ರಮವನ್ನು ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.