<p><strong>ನವದೆಹಲಿ:</strong> ದಕ್ಷಿಣ ದೆಹಲಿಯ ಮಾಳವೀಯ ನಗರದ ಹೋಟೆಲ್ನಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಉದ್ದೇಶಪೂರ್ವಕವಲ್ಲದ ನರಹತ್ಯೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಮಾಳವೀಯ ನಗರದ ಜನದಟ್ಟಣೆಯ ಪ್ರದೇಶವಾದ ಹೌಜ್ ರಾನ್ನಲ್ಲಿರುವ 'ಫ್ಲೋರಿಶ್ ಸ್ಟೇ ಬೆಡ್&ಬ್ರೇಕ್ಫಾಸ್ಟ್' ಹೋಟೆಲ್ನಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿತ್ತು. ದುರಂತದಲ್ಲಿ ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಮೃತರಲ್ಲಿ ಹೆಚ್ಚಿನವರು ವಿದೇಶಿ ಪ್ರಜೆಗಳು. ಮುಖ್ಯವಾಗಿ ಮಧ್ಯ ಏಷ್ಯಾ ಮತ್ತು ಆಫ್ರಿಕಾಕ್ಕೆ ಸೇರಿದವರಾಗಿದ್ದಾರೆ. ಗಾಯಗೊಂಡ ಹಲವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಕನಿಷ್ಠ 26 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದಾರೆ.</p> .ದೆಹಲಿಯ ರೆಸ್ಟೋರೆಂಟ್ನಲ್ಲಿ ಬೆಂಕಿ ದುರಂತ: ವಿದೇಶಿಗರು ಸೇರಿ 21 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದಕ್ಷಿಣ ದೆಹಲಿಯ ಮಾಳವೀಯ ನಗರದ ಹೋಟೆಲ್ನಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಉದ್ದೇಶಪೂರ್ವಕವಲ್ಲದ ನರಹತ್ಯೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಮಾಳವೀಯ ನಗರದ ಜನದಟ್ಟಣೆಯ ಪ್ರದೇಶವಾದ ಹೌಜ್ ರಾನ್ನಲ್ಲಿರುವ 'ಫ್ಲೋರಿಶ್ ಸ್ಟೇ ಬೆಡ್&ಬ್ರೇಕ್ಫಾಸ್ಟ್' ಹೋಟೆಲ್ನಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿತ್ತು. ದುರಂತದಲ್ಲಿ ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಮೃತರಲ್ಲಿ ಹೆಚ್ಚಿನವರು ವಿದೇಶಿ ಪ್ರಜೆಗಳು. ಮುಖ್ಯವಾಗಿ ಮಧ್ಯ ಏಷ್ಯಾ ಮತ್ತು ಆಫ್ರಿಕಾಕ್ಕೆ ಸೇರಿದವರಾಗಿದ್ದಾರೆ. ಗಾಯಗೊಂಡ ಹಲವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಕನಿಷ್ಠ 26 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದಾರೆ.</p> .ದೆಹಲಿಯ ರೆಸ್ಟೋರೆಂಟ್ನಲ್ಲಿ ಬೆಂಕಿ ದುರಂತ: ವಿದೇಶಿಗರು ಸೇರಿ 21 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>