<p><strong>ನವದೆಹಲಿ: </strong>ದಕ್ಷಿಣ ದೆಹಲಿಯ ಮಾಲ್ವಿಯಾ ನಗರದಲ್ಲಿನ ರೆಸ್ಟೋರೆಂಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದರಿಂದ ತಪ್ಪಿಸಿಕೊಳ್ಳಲು ಕಟ್ಟಡ ಮೂರನೇ ಮಹಡಿಯಲ್ಲಿದ್ದ ಮಹಿಳೆಯೊಬ್ಬರು ತನ್ನ ಮಗುವನ್ನು ಹಿಡಿದುಕೊಂಡು ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p><p>ಜನಸಂದಣಿಯಿಂದ ಕೂಡಿದ ಹೌಜ್ ರಾಣಿ ಪ್ರದೇಶದ ಫ್ಲೋರಿಶ್ ಸ್ಟೇ ಬೆಡ್-ಅಂಡ್-ಬ್ರೇಕ್ಫಾಸ್ಟ್ ಹೋಟೆಲ್ನಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದೊಳಗೆ ನೂರಾರು ಜನರು ಸಿಲುಕಿಕೊಂಡಿದ್ದರು. ಕೆಲವೇ ಕ್ಷಣಗಳಲ್ಲಿ ದಟ್ಟವಾದ ಹೊಗೆಯು ಕಟ್ಟಡವನ್ನು ಆವರಿಸಿದಾಗ, ಅದರೊಳಗಿದ್ದ ಜನರು ಕಿಟಕಿ ಗಾಜುಗಳನ್ನು ಒಡೆದು ಸಹಾಯಕ್ಕಾಗಿ ಕೂಗುತ್ತಿದ್ದರು ಎಂದು ಹೇಳಿದ್ದಾರೆ.</p>.<p>ಒಳಗೆ ಸಿಲುಕಿರುವವರನ್ನು ರಕ್ಷಿಸುವ ಪ್ರಯತ್ನದಲ್ಲಿ ಸ್ಥಳೀಯರು ಕೆಳಗೆ ನೆಲದ ಮೇಲೆ ಹಾಸಿಗೆಗಳನ್ನು ಹಾಸಿದ್ದರು. ಆ ವೇಳೆ ಮಗುವನ್ನು ಹಿಡಿದುಕೊಂಡಿದ್ದ ತಾಯಿಯು, ಅಲ್ಲಿಂದ ಹೊರಗೆ ಬರಲು ಯಾವುದೇ ದಾರಿ ಕಾಣದೇ, ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. </p><p>ಮಹಿಳೆಯು ಮಗುವಿನೊಂದಿಗೆಯೇ ಹಾಸಿಗೆಯ ಮೇಲೆ ಬಿದ್ದಿದ್ದು, ಕೆಲವು ಚಿಕ್ಕಪುಟ್ಟ ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. </p><p>ಘಟನೆಯಲ್ಲಿ ವಿದೇಶಿಯರು ಸೇರಿದಂತೆ ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ. 40ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದಕ್ಷಿಣ ದೆಹಲಿಯ ಮಾಲ್ವಿಯಾ ನಗರದಲ್ಲಿನ ರೆಸ್ಟೋರೆಂಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದರಿಂದ ತಪ್ಪಿಸಿಕೊಳ್ಳಲು ಕಟ್ಟಡ ಮೂರನೇ ಮಹಡಿಯಲ್ಲಿದ್ದ ಮಹಿಳೆಯೊಬ್ಬರು ತನ್ನ ಮಗುವನ್ನು ಹಿಡಿದುಕೊಂಡು ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p><p>ಜನಸಂದಣಿಯಿಂದ ಕೂಡಿದ ಹೌಜ್ ರಾಣಿ ಪ್ರದೇಶದ ಫ್ಲೋರಿಶ್ ಸ್ಟೇ ಬೆಡ್-ಅಂಡ್-ಬ್ರೇಕ್ಫಾಸ್ಟ್ ಹೋಟೆಲ್ನಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದೊಳಗೆ ನೂರಾರು ಜನರು ಸಿಲುಕಿಕೊಂಡಿದ್ದರು. ಕೆಲವೇ ಕ್ಷಣಗಳಲ್ಲಿ ದಟ್ಟವಾದ ಹೊಗೆಯು ಕಟ್ಟಡವನ್ನು ಆವರಿಸಿದಾಗ, ಅದರೊಳಗಿದ್ದ ಜನರು ಕಿಟಕಿ ಗಾಜುಗಳನ್ನು ಒಡೆದು ಸಹಾಯಕ್ಕಾಗಿ ಕೂಗುತ್ತಿದ್ದರು ಎಂದು ಹೇಳಿದ್ದಾರೆ.</p>.<p>ಒಳಗೆ ಸಿಲುಕಿರುವವರನ್ನು ರಕ್ಷಿಸುವ ಪ್ರಯತ್ನದಲ್ಲಿ ಸ್ಥಳೀಯರು ಕೆಳಗೆ ನೆಲದ ಮೇಲೆ ಹಾಸಿಗೆಗಳನ್ನು ಹಾಸಿದ್ದರು. ಆ ವೇಳೆ ಮಗುವನ್ನು ಹಿಡಿದುಕೊಂಡಿದ್ದ ತಾಯಿಯು, ಅಲ್ಲಿಂದ ಹೊರಗೆ ಬರಲು ಯಾವುದೇ ದಾರಿ ಕಾಣದೇ, ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. </p><p>ಮಹಿಳೆಯು ಮಗುವಿನೊಂದಿಗೆಯೇ ಹಾಸಿಗೆಯ ಮೇಲೆ ಬಿದ್ದಿದ್ದು, ಕೆಲವು ಚಿಕ್ಕಪುಟ್ಟ ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. </p><p>ಘಟನೆಯಲ್ಲಿ ವಿದೇಶಿಯರು ಸೇರಿದಂತೆ ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ. 40ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>