<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಸುಧಾರಿಸಲು ಹಾಗೂ ಮಾಲಿನ್ಯ ಸಮಸ್ಯೆಗಳನ್ನು ಬಗೆಹರಿಸಲು ದಟ್ಟವಾದ ಮರಗಳನ್ನು ಒಳಗೊಂಡಂತೆ 100 ಆಮ್ಲಜನಕ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಶುಕ್ರವಾರ ಘೋಷಿಸಿದ್ದಾರೆ. </p><p>ಉತ್ತರ ದೆಹಲಿಯ ಮುಖ್ಮೆಲ್ಲಪುರ ಗ್ರಾಮದಲ್ಲಿ ಮೂರು ಎಕರೆ ಭೂಮಿಯಲ್ಲಿ ಅಭಿವೃದ್ಧಿಪಡಿಸಲಿರುವ ಉದ್ಯಾನವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ, ರಾಜಧಾನಿದಲ್ಲಿ ಇಂತಹ ಉದ್ಯಾನವನ ಇದೇ ಮೊದಲು ಎಂದು ಹೇಳಿದ್ದಾರೆ. </p><p>ದೆಹಲಿಯನ್ನು ಅನೇಕ ವರ್ಷಗಳ ಕಾಲ ಗ್ಯಾಸ್ ಚೇಂಬರ್ ಆಗಿ ಪರಿವರ್ತಿಸಲಾಗಿತ್ತು. ಆದರೆ ಮಾಲಿನ್ಯ ಸಮಸ್ಯೆಗಳನ್ನು ಬಗೆಹರಿಸಲು ಯಾರೂ ಕಾಳಜಿ ವಹಿಸಿರಲಿಲ್ಲ ಎಂದು ಹೇಳಿದ್ದಾರೆ. </p><p>ಮಾಲಿನ್ಯ ಸಮಸ್ಯೆಯನ್ನು ನಿವಾರಿಸಲು ನಮ್ಮ ಸರ್ಕಾರ ಕಳೆದೊಂದು ವರ್ಷದಿಂದ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ. ಈ ಉದ್ಯಾನವನಗಳು ಇದರ ಭಾಗವಾಗಿವೆ ಎಂದು ಹೇಳಿದ್ದಾರೆ. </p><p>ದಟ್ಟವಾದ ಮರಗಳನ್ನು ಹೊಂದಿರುವ ಈ ಉದ್ಯಾನವನಗಳು ದೆಹಲಿಗೆ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ. </p>.ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ಗೆ ಮಧ್ಯಂತರ ಜಾಮೀನು ಮಂಜೂರು.ಕಾರಟಗಿ | ಕಾರ್ಮಿಕರಿಗೂ ಪ್ರೋತ್ಸಾಹಕರ ಯೋಜನೆ ಅಗತ್ಯ: ಬಿ.ಕೆ. ರೇಖಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಸುಧಾರಿಸಲು ಹಾಗೂ ಮಾಲಿನ್ಯ ಸಮಸ್ಯೆಗಳನ್ನು ಬಗೆಹರಿಸಲು ದಟ್ಟವಾದ ಮರಗಳನ್ನು ಒಳಗೊಂಡಂತೆ 100 ಆಮ್ಲಜನಕ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಶುಕ್ರವಾರ ಘೋಷಿಸಿದ್ದಾರೆ. </p><p>ಉತ್ತರ ದೆಹಲಿಯ ಮುಖ್ಮೆಲ್ಲಪುರ ಗ್ರಾಮದಲ್ಲಿ ಮೂರು ಎಕರೆ ಭೂಮಿಯಲ್ಲಿ ಅಭಿವೃದ್ಧಿಪಡಿಸಲಿರುವ ಉದ್ಯಾನವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ, ರಾಜಧಾನಿದಲ್ಲಿ ಇಂತಹ ಉದ್ಯಾನವನ ಇದೇ ಮೊದಲು ಎಂದು ಹೇಳಿದ್ದಾರೆ. </p><p>ದೆಹಲಿಯನ್ನು ಅನೇಕ ವರ್ಷಗಳ ಕಾಲ ಗ್ಯಾಸ್ ಚೇಂಬರ್ ಆಗಿ ಪರಿವರ್ತಿಸಲಾಗಿತ್ತು. ಆದರೆ ಮಾಲಿನ್ಯ ಸಮಸ್ಯೆಗಳನ್ನು ಬಗೆಹರಿಸಲು ಯಾರೂ ಕಾಳಜಿ ವಹಿಸಿರಲಿಲ್ಲ ಎಂದು ಹೇಳಿದ್ದಾರೆ. </p><p>ಮಾಲಿನ್ಯ ಸಮಸ್ಯೆಯನ್ನು ನಿವಾರಿಸಲು ನಮ್ಮ ಸರ್ಕಾರ ಕಳೆದೊಂದು ವರ್ಷದಿಂದ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ. ಈ ಉದ್ಯಾನವನಗಳು ಇದರ ಭಾಗವಾಗಿವೆ ಎಂದು ಹೇಳಿದ್ದಾರೆ. </p><p>ದಟ್ಟವಾದ ಮರಗಳನ್ನು ಹೊಂದಿರುವ ಈ ಉದ್ಯಾನವನಗಳು ದೆಹಲಿಗೆ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ. </p>.ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ಗೆ ಮಧ್ಯಂತರ ಜಾಮೀನು ಮಂಜೂರು.ಕಾರಟಗಿ | ಕಾರ್ಮಿಕರಿಗೂ ಪ್ರೋತ್ಸಾಹಕರ ಯೋಜನೆ ಅಗತ್ಯ: ಬಿ.ಕೆ. ರೇಖಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>