<p>ನವದೆಹಲಿ: ಪ್ರಚೋದನಾಕಾರಿ ಭಾಷಣ (2010) ಪ್ರಕರಣದಲ್ಲಿ ಲೇಖಕಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಮಾಜಿ ಪ್ರಾಧ್ಯಾಪಕ ಶೇಖ್ ಶೌಕತ್ ಹುಸೇನ್ ಅವರು ಭಯೋತ್ಪಾದನೆ ಆರೋಪವನ್ನು ಎದುರಿಸಬೇಕಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಕಲಂ 45(1)ರ ಅಡಿಯಲ್ಲಿ ಇವರಿಬ್ಬರ ವಿರುದ್ಧ ವಿರುದ್ಧ ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಹೊಸದಾಗಿ ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ರಾಯ್ ಮತ್ತು ಹುಸೇನ್ ಅವರಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. </p>.<p>ಸಕ್ಸೇನಾ ಅವರು ಎಂಟು ತಿಂಗಳ ಹಿಂದೆಯಷ್ಟೇ ಭಾರತೀಯ ದಂಡ ಸಂಹಿತೆಯ ಕಲಂ 153ಎ, 153ಬಿ ಮತ್ತು 505ರ ಅಡಿಯಲ್ಲಿ ಇವರಿಬ್ಬರ ವಿರುದ್ಧ ಕ್ರಮ ಜರುಗಿಸಲು ಅನುಮತಿ ನೀಡಿದ್ದರು.</p>.<p>‘ಆಜಾದಿ –ಒಂದೇ ಮಾರ್ಗ’ ವೇದಿಕೆಯಡಿ ರಾಜಕೀಯ ಕೈದಿಗಳ ಬಿಡುಗಡೆಗಾಗಿ 2010ರಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಸುಶೀಲ್ ಪಂಡಿತ್ ಅವರು 2010ರ ಅ.28ರಂದು ತಿಲಕ್ಮಾರ್ಗ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದರು. </p>.<p>2010ರ ಅಕ್ಟೋಬರ್ 21ರಂದು ನವದೆಹಲಿ ಎಲ್ಟಿಜಿ ಸಭಾಂಗಣದಲ್ಲಿ ನಡೆದ ಸಮ್ಮೇಳನದಲ್ಲಿ, ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಗೊಳಿಸುವ ಉದ್ದೇಶ ಕುರಿತು ಚರ್ಚಿಸಲಾಗಿತ್ತು. ರಾಯ್ ಮತ್ತು ಹುಸೇನ್ ಅವರು ಅಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಮತ್ತಿಬ್ಬರು ಆರೋಪಿಗಳಾಗಿದ್ದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಮತ್ತು ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸೈಯದ್ ಅಬ್ದುಲ್ ರೆಹಮಾನ್ ಗಿಲಾನಿ ಅವರು ಪ್ರಕರಣದ ವಿಚಾರಣೆ ಹಂತದಲ್ಲಿರುವಾಗಲೇ ಮೃತಪಟ್ಟಿದ್ದರು. ಇಬ್ಬರನ್ನು ಸಂಸತ್ತಿನ ಮೇಲಿನ ದಾಳಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ಹಿಂದೆ ಖುಲಾಸೆಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಪ್ರಚೋದನಾಕಾರಿ ಭಾಷಣ (2010) ಪ್ರಕರಣದಲ್ಲಿ ಲೇಖಕಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಮಾಜಿ ಪ್ರಾಧ್ಯಾಪಕ ಶೇಖ್ ಶೌಕತ್ ಹುಸೇನ್ ಅವರು ಭಯೋತ್ಪಾದನೆ ಆರೋಪವನ್ನು ಎದುರಿಸಬೇಕಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಕಲಂ 45(1)ರ ಅಡಿಯಲ್ಲಿ ಇವರಿಬ್ಬರ ವಿರುದ್ಧ ವಿರುದ್ಧ ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಹೊಸದಾಗಿ ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ರಾಯ್ ಮತ್ತು ಹುಸೇನ್ ಅವರಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. </p>.<p>ಸಕ್ಸೇನಾ ಅವರು ಎಂಟು ತಿಂಗಳ ಹಿಂದೆಯಷ್ಟೇ ಭಾರತೀಯ ದಂಡ ಸಂಹಿತೆಯ ಕಲಂ 153ಎ, 153ಬಿ ಮತ್ತು 505ರ ಅಡಿಯಲ್ಲಿ ಇವರಿಬ್ಬರ ವಿರುದ್ಧ ಕ್ರಮ ಜರುಗಿಸಲು ಅನುಮತಿ ನೀಡಿದ್ದರು.</p>.<p>‘ಆಜಾದಿ –ಒಂದೇ ಮಾರ್ಗ’ ವೇದಿಕೆಯಡಿ ರಾಜಕೀಯ ಕೈದಿಗಳ ಬಿಡುಗಡೆಗಾಗಿ 2010ರಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಸುಶೀಲ್ ಪಂಡಿತ್ ಅವರು 2010ರ ಅ.28ರಂದು ತಿಲಕ್ಮಾರ್ಗ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದರು. </p>.<p>2010ರ ಅಕ್ಟೋಬರ್ 21ರಂದು ನವದೆಹಲಿ ಎಲ್ಟಿಜಿ ಸಭಾಂಗಣದಲ್ಲಿ ನಡೆದ ಸಮ್ಮೇಳನದಲ್ಲಿ, ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಗೊಳಿಸುವ ಉದ್ದೇಶ ಕುರಿತು ಚರ್ಚಿಸಲಾಗಿತ್ತು. ರಾಯ್ ಮತ್ತು ಹುಸೇನ್ ಅವರು ಅಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಮತ್ತಿಬ್ಬರು ಆರೋಪಿಗಳಾಗಿದ್ದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಮತ್ತು ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸೈಯದ್ ಅಬ್ದುಲ್ ರೆಹಮಾನ್ ಗಿಲಾನಿ ಅವರು ಪ್ರಕರಣದ ವಿಚಾರಣೆ ಹಂತದಲ್ಲಿರುವಾಗಲೇ ಮೃತಪಟ್ಟಿದ್ದರು. ಇಬ್ಬರನ್ನು ಸಂಸತ್ತಿನ ಮೇಲಿನ ದಾಳಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ಹಿಂದೆ ಖುಲಾಸೆಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>