<p><strong>ನವದೆಹಲಿ:</strong> ಮಳೆಯ ಆರ್ಭಟದಿಂದಾಗಿ ದೆಹಲಿಯಲ್ಲಿ ಯಮುನಾ ನದಿ ಮಂಗಳವಾರವೂ ಉಕ್ಕಿ ಹರಿದಿದ್ದು, ಅನೇಕ ವಸತಿ ಪ್ರದೇಶಗಳಲ್ಲಿ 2–3 ಅಡಿಗಳಷ್ಟು ನೀರು ನಿಂತ ಕಾರಣ ಜನರು ಸಂಕಷ್ಟ ಅನುಭವಿಸುವಂತಾಗಿದೆ.</p>.<p>ಅಪಾಯ ಮಟ್ಟ 205.33 ಮೀಟರ್ ಗಡಿ ದಾಟಿ ನದಿ ಹರಿಯುತ್ತಿದ್ದ ಕಾರಣ, ತಗ್ಗುಪ್ರದೇಶಗಳಲ್ಲಿ ವಾಸಿಸುತ್ತಿರುವವರನ್ನು ಸ್ಥಳಾಂತರಿಸಲಾಗಿದೆ. ಹಳೆ ಯಮುನಾ ಸೇತುವೆ ಮೇಲೆ ವಾಹನ ಮತ್ತು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಪ್ರವಾಹಪೀಡಿತ ಪ್ರದೇಶಗಳ ಮೇಲೆ ಕಣ್ಗಾವಲಿರಿಸುವ ಸಂಬಂಧ 16 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.</p>.<p>ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಧಿಕಾರಿಗಳ ಸಭೆ ನಡೆಸಿ, ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿರುವುದು ಹಾಗೂ ನಗರದ ವಿವಿಧೆಡೆ ನೀರು ನಿಂತು ಉಂಟಾಗಿರುವ ಸಮಸ್ಯೆ ಕುರಿತು ಚರ್ಚಿಸಿದರು.</p>.<p>ಭಾರಿ ಮಳೆ ಕಾರಣ ಹರಿಯಾಣದ ಹಥಿನಿಕುಂಡ ಬ್ಯಾರೇಜ್ಗೆ ಒಳಹರಿವು ಹೆಚ್ಚಿದೆ. ಹಾಗಾಗಿ, ಬ್ಯಾರೇಜ್ನಿಂದ ನೀರು ಬಿಟ್ಟಿರುವ ಕಾರಣ ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿದ್ದು, ಇದರಿಂದ ಉಂಟಾಗಿರುವ ತೊಂದರೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ. </p>.<p><strong>ಆರೋಪ–ಪ್ರತ್ಯಾರೋಪ:</strong> ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ಉಂಟಾಗಿರುವ ಸಮಸ್ಯೆ ಹಿನ್ನೆಲೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ನಡುವೆ ಜಟಾಪಟಿ ಶುರುವಾಗಿದೆ.</p>.<p>‘ನಗರದ ಒಳಚರಂಡಿಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸಿಲ್ಲ. ಹೀಗಾಗಿಯೇ ಮಳೆ ಬಂದಾಗ ನೀರು ನಿಲ್ಲುವಂತಹ ‘ವಾರ್ಷಿಕ ವಿಧಿ’ಯನ್ನು ನಗರ ಎದುರಿಸುವಂತಾಗಿದೆ’ ಎಂದು ಸಕ್ಸೇನಾ ಹೇಳಿದ್ದಾರೆ. ಇದಕ್ಕೆ ಎಎಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.</p>.<p>ಸಕ್ಸೇನಾ ಅವರ ಹೇಳಿಕೆಯನ್ನು ಖಂಡಿಸಿರುವ ದೆಹಲಿ ಜಲ ಸಚಿವ ಸೌರಭ್ ಭಾರದ್ವಾಜ್, ‘ಒಳಚರಂಡಿಗಳಲ್ಲಿ ಹೂಳು ತೆಗೆಯಲಾಗಿದೆ ಹಾಗೂ ಯಮುನಾ ನದಿಯನ್ನು ಸ್ವಚ್ಛಗೊಳಿಸಲಾಗಿದೆ ಎಂದು ಸಕ್ಸೇನಾ ಈ ಹಿಂದೆ ಹೇಳಿದ್ದರು. ಈಗ ಅವರೇ ಆರೋಪ ಮಾಡುತ್ತಿದ್ದಾರೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಳೆಯ ಆರ್ಭಟದಿಂದಾಗಿ ದೆಹಲಿಯಲ್ಲಿ ಯಮುನಾ ನದಿ ಮಂಗಳವಾರವೂ ಉಕ್ಕಿ ಹರಿದಿದ್ದು, ಅನೇಕ ವಸತಿ ಪ್ರದೇಶಗಳಲ್ಲಿ 2–3 ಅಡಿಗಳಷ್ಟು ನೀರು ನಿಂತ ಕಾರಣ ಜನರು ಸಂಕಷ್ಟ ಅನುಭವಿಸುವಂತಾಗಿದೆ.</p>.<p>ಅಪಾಯ ಮಟ್ಟ 205.33 ಮೀಟರ್ ಗಡಿ ದಾಟಿ ನದಿ ಹರಿಯುತ್ತಿದ್ದ ಕಾರಣ, ತಗ್ಗುಪ್ರದೇಶಗಳಲ್ಲಿ ವಾಸಿಸುತ್ತಿರುವವರನ್ನು ಸ್ಥಳಾಂತರಿಸಲಾಗಿದೆ. ಹಳೆ ಯಮುನಾ ಸೇತುವೆ ಮೇಲೆ ವಾಹನ ಮತ್ತು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಪ್ರವಾಹಪೀಡಿತ ಪ್ರದೇಶಗಳ ಮೇಲೆ ಕಣ್ಗಾವಲಿರಿಸುವ ಸಂಬಂಧ 16 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.</p>.<p>ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಧಿಕಾರಿಗಳ ಸಭೆ ನಡೆಸಿ, ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿರುವುದು ಹಾಗೂ ನಗರದ ವಿವಿಧೆಡೆ ನೀರು ನಿಂತು ಉಂಟಾಗಿರುವ ಸಮಸ್ಯೆ ಕುರಿತು ಚರ್ಚಿಸಿದರು.</p>.<p>ಭಾರಿ ಮಳೆ ಕಾರಣ ಹರಿಯಾಣದ ಹಥಿನಿಕುಂಡ ಬ್ಯಾರೇಜ್ಗೆ ಒಳಹರಿವು ಹೆಚ್ಚಿದೆ. ಹಾಗಾಗಿ, ಬ್ಯಾರೇಜ್ನಿಂದ ನೀರು ಬಿಟ್ಟಿರುವ ಕಾರಣ ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿದ್ದು, ಇದರಿಂದ ಉಂಟಾಗಿರುವ ತೊಂದರೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ. </p>.<p><strong>ಆರೋಪ–ಪ್ರತ್ಯಾರೋಪ:</strong> ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ಉಂಟಾಗಿರುವ ಸಮಸ್ಯೆ ಹಿನ್ನೆಲೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ನಡುವೆ ಜಟಾಪಟಿ ಶುರುವಾಗಿದೆ.</p>.<p>‘ನಗರದ ಒಳಚರಂಡಿಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸಿಲ್ಲ. ಹೀಗಾಗಿಯೇ ಮಳೆ ಬಂದಾಗ ನೀರು ನಿಲ್ಲುವಂತಹ ‘ವಾರ್ಷಿಕ ವಿಧಿ’ಯನ್ನು ನಗರ ಎದುರಿಸುವಂತಾಗಿದೆ’ ಎಂದು ಸಕ್ಸೇನಾ ಹೇಳಿದ್ದಾರೆ. ಇದಕ್ಕೆ ಎಎಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.</p>.<p>ಸಕ್ಸೇನಾ ಅವರ ಹೇಳಿಕೆಯನ್ನು ಖಂಡಿಸಿರುವ ದೆಹಲಿ ಜಲ ಸಚಿವ ಸೌರಭ್ ಭಾರದ್ವಾಜ್, ‘ಒಳಚರಂಡಿಗಳಲ್ಲಿ ಹೂಳು ತೆಗೆಯಲಾಗಿದೆ ಹಾಗೂ ಯಮುನಾ ನದಿಯನ್ನು ಸ್ವಚ್ಛಗೊಳಿಸಲಾಗಿದೆ ಎಂದು ಸಕ್ಸೇನಾ ಈ ಹಿಂದೆ ಹೇಳಿದ್ದರು. ಈಗ ಅವರೇ ಆರೋಪ ಮಾಡುತ್ತಿದ್ದಾರೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>