ಆಗಸ್ಟ್ 8ರಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅತಿಶಿ ಅವರಿಗೆ ಇಲಾಖೆಗಳನ್ನು ವರ್ಗಾಯಿಸುವ ಕುರಿತು ಶಿಫಾರಸು ಮಾಡಿದ್ದರು. ಮುಖ್ಯಮಂತ್ರಿಯ ಪ್ರಸ್ತಾವನೆಯನ್ನು ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಸ್ವೀಕರಿಸಲಾಗಿದೆ ಎಂದು ಗವರ್ನರ್ ನಿವಾಸದ ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸೌರಭ್ ಭಾರದ್ವಾಜ್ ಈ ಖಾತೆ ನಿಭಾಯಿಸುತ್ತಿದ್ದರು. ‘ದೆಹಲಿ ಸೇವೆಗಳ ನಿಯಂತ್ರಣ ಮಸೂದೆ’ಯನ್ನು ರಾಜ್ಯಸಭೆ ಅಂಗೀಕರಿಸಿದ ಬೆನ್ನಲ್ಲೇ ಕೇಜ್ರಿವಾಲ್ ಈ ಕ್ರಮಕ್ಕೆ ಮುಂದಾಗಿದ್ದರು.
ಕಳೆದ ಜೂನ್ನಲ್ಲಿ ಸಂಪುಟ ಪುನರ್ ರಚಿಸಿ ಅತಿಶಿ ಅವರಿಗೆ ಕಂದಾಯ, ಯೋಜನೆ ಮತ್ತು ಆರ್ಥಿಕ ಇಲಾಖೆಗಳ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ಹೊಸ ಜವಾಬ್ದಾರಿಯೂ ಸೇರಿ ಅತಿಶಿ ಅವರು ದೆಹಲಿ ಸರ್ಕಾರದ 14 ಖಾತೆಗಳನ್ನು ನಿಭಾಯಿಸಲಿದ್ದಾರೆ.